ಸೂಕ್ಷ್ಮ ಸ್ಥಳಗಳಲ್ಲಿ ಸಿಸಿ ಕ್ಯಾಮೇರಾ ಅಳವಡಿಕೆಗೆ ಒತ್ತಾಯ

KannadaprabhaNewsNetwork |  
Published : Sep 12, 2026, 02:30 AM IST
ಹರಪನಹಳ್ಳಿ: ನಗರದ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಒತ್ತಾಯಿಸಿ ಕನ್ನಡ ಜಾಗೃತಿ ವೇದಿಕೆಯ ವಿಜಯನಗರ ಜಿಲ್ಲಾ ಘಟಕದ ವತಿಯಿಂದ ನಗರಸಭೆ ಆಯುಕ್ತೆ ರೇಣುಕಾ ಎಸ್. ದೇಸಾಯಿ ಅವರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಅಪಘಾತಗಳಲ್ಲಿ ಕುಟುಂಬದ ಆಧಾರಸ್ತಂಭವಾಗಿರುವ ವ್ಯಕ್ತಿಗೆ ತೊಂದರೆಯಾದರೆ ಅದರ ಪರಿಣಾಮ ಕುಟುಂಬದ ಸದಸ್ಯರು ಹಾಗೂ ಮಕ್ಕಳ ಜೀವನದ ಮೇಲೂ ಬೀರುತ್ತದೆ

ಹರಪನಹಳ್ಳಿ: ನಗರದ ಹೊರವಲಯದ ರಸ್ತೆ ತಿರುವು ಹಾಗೂ ಅಪಘಾತ, ಕಳ್ಳತನ ಪ್ರಕರಣ ಸಂಭವಿಸುವ ಸೂಕ್ಷ್ಮ ಸ್ಥಳಗಳಲ್ಲಿ ಸಿಸಿ ಕ್ಯಾಮೇರಾ ಅಳವಡಿಸುವಂತೆ ಒತ್ತಾಯಿಸಿ ಕನ್ನಡ ಜಾಗೃತಿ ವೇದಿಕೆಯ ವಿಜಯನಗರ ಜಿಲ್ಲಾ ಘಟಕದಿಂದ ನಗರಸಭೆ ಆಯುಕ್ತೆ ರೇಣುಕಾ ಎಸ್.ದೇಸಾಯಿಗೆ ಮನವಿ ಸಲ್ಲಿಸಿದರು.

ಕನ್ನಡ ಜಾಗೃತಿ ವೇದಿಕೆಯ ವಿಜಯನಗರ ಜಿಲ್ಲಾಧ್ಯಕ್ಷೆ ಜಿ.ಈರಮ್ಮ ಮಾತನಾಡಿ, ಪಟ್ಟಣದ ಹೊರವಲಯದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಬಳಿಯ ರಸ್ತೆ ತಿರುವು ಹಾಗೂ ಹೊಸಪೇಟೆ ರಸ್ತೆ ಮಾರ್ಗದಲ್ಲಿರುವ ಮೈಲಮ್ಮ ದೇವಸ್ಥಾನದ ಬಳಿ ಪದೇಪದೇ ಅಪಘಾತಗಳು ಸಂಭವಿಸುತ್ತಿವೆ. ಅಪಘಾತಕ್ಕೆ ಕಾರಣವಾಗುವ ವಾಹನ ಸವಾರರು ಗಾಯಾಳುಗಳಿಗೆ ನೆರವು ನೀಡದೆ ಸ್ಥಳದಿಂದ ಪರಾರಿಯಾಗುತ್ತಿರುವ ಘಟನೆಗಳು ಆತಂಕ ಮೂಡಿಸುತ್ತಿವೆ ಎಂದರು.

ಅಪಘಾತಗಳಲ್ಲಿ ಕುಟುಂಬದ ಆಧಾರಸ್ತಂಭವಾಗಿರುವ ವ್ಯಕ್ತಿಗೆ ತೊಂದರೆಯಾದರೆ ಅದರ ಪರಿಣಾಮ ಕುಟುಂಬದ ಸದಸ್ಯರು ಹಾಗೂ ಮಕ್ಕಳ ಜೀವನದ ಮೇಲೂ ಬೀರುತ್ತದೆ. ಅಪಘಾತಕ್ಕೆ ಕಾರಣವಾದ ವಾಹನ ಪತ್ತೆ ಹಚ್ಚಲು ಹಾಗೂ ಅಪಘಾತದ ಬಳಿಕ ಸ್ಥಳದಿಂದ ಪರಾರಿಯಾಗುವವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಲು ಸಿಸಿ ಕ್ಯಾಮೇರಾ ಸಹಕಾರಿಯಾಗಲಿವೆ. ಆದ್ದರಿಂದ ಪ್ರಮುಖ ರಸ್ತೆ ತಿರುವುಗಳು ಹಾಗೂ ಅಪಘಾತ ಸಂಭವಿಸುವ ಸ್ಥಳಗಳಲ್ಲಿ ತಕ್ಷಣ ಸಿಸಿ ಕ್ಯಾಮೇರಾ ಅಳವಡಿಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಹರಪನಹಳ್ಳಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಮಹಾಂತೇಶ್ ಸಜ್ಜನಗೆ ಮನವಿ ಸಲ್ಲಿಸಿ ನೀಲಗುಂದ ಕ್ರಾಸ್‌ ಬಳಿ ಕಳ್ಳತನದ ಪ್ರಕರಣ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ನಿತ್ಯ ಸಂಚರಿಸುವ ಪ್ರಮುಖ ಸ್ಥಳಗಳಲ್ಲಿ ಭದ್ರತಾ ದೃಷ್ಟಿಯಿಂದ ಸಿಸಿ ಕ್ಯಾಮೇರಾ ಅಳವಡಿಸಬೇಕು. ಸಾರ್ವಜನಿಕರು ಭಯವಿಲ್ಲದೆ ಸಂಚರಿಸುವಂತಹ ಸುರಕ್ಷಿತ ವಾತಾವರಣ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕನ್ನಡ ಜಾಗೃತಿ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷ ಚಿರಂಜೀವಿ ಕೂಸಂಬಿ, ಮಹಿಳಾ ಘಟಕದ ಅಧ್ಯಕ್ಷೆ ಎಚ್.ಎಂ.ಗಂಗಮ್ಮ, ತಾಲೂಕು ಉಪಾಧ್ಯಕ್ಷ ಫಕೀರಪ್ಪ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟೋಕನ್ ವ್ಯವಸ್ಥೆಯಿಂದ ಪ್ರವಾಸೋದ್ಯಮ ನೆಚ್ಚಿಕೊಂಡವರಿಗೆ ಸಮಸ್ಯೆ
ಧರ್ಮಶಾಸ್ತ್ರದಲ್ಲೂ ಶುದ್ಧ ನೀರಿಗೆ ಒತ್ತು: ರಾಘವೇಶ್ವರ ಶ್ರೀ