ಗದಗ: ಜಿಲ್ಲಾದ್ಯಂತ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಹಿನ್ನೆಲೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸರ್ಕಾರಿ ಕಚೇರಿಯ ಸಮಯವನ್ನು ಬದಲಾವಣೆ ಮಾಡುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರಿಗೆ ಮನವಿ ಸಲ್ಲಿಸಲಾಯಿತು.
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಮಾದರಿಯಲ್ಲಿಯೇ ಗದಗ ಜಿಲ್ಲೆಯಲ್ಲಿ ಪ್ರಸ್ತುತ ವರ್ಷ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಗದಗ ಜಿಲ್ಲೆಯಲ್ಲಿ 39 ಡಿಗ್ರೆ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ದಿನ ದಿನಕ್ಕೆ ಬಿಸಿಲಿನ ತಾಪಮಾನದಲ್ಲಿ ಹೆಚ್ಚಳವಾಗುತ್ತಿದೆ. ರಾಜ್ಯ ಸರ್ಕಾರಿ ನೌಕರರು ಹಳ್ಳಿಗಳಿಗೆ ಕರ್ತವ್ಯವನ್ನು ನಿರ್ವಹಿಸುವಲ್ಲಿ ಆರೋಗ್ಯ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಆರೋಗ್ಯದ ಹಿತದೃಷ್ಟಿಯಿಂದ ಕಚೇರಿಯ ಸಮಯವನ್ನು ಬೆಳಗ್ಗೆ 8ರಿಂದ ಮಧ್ಯಾಹ್ನ 1.30ರ ವರೆಗೆ ಬದಲಾವಣೆ ಮಾಡುವ ಮೂಲಕ ಸರ್ಕಾರಿ ನೌಕರರ ಕರ್ತವ್ಯ ನಿರ್ವಹಣೆಗೆ ಅನುಕೂಲತೆ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಮನವಿ ಸ್ವೀಕರಿಸಿದರು. ಈ ವೇಳೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳಾದ ಎಂ.ಎಂ. ನಿಟ್ಟಾಲಿ, ಶ್ರೀಧರ ಚಿನ್ನಗುಂಡಿ, ಶಿಲ್ಪಾ, ಕುಮಾರ, ಜೋಷನಾ ಸೇರಿದಂತೆ ಇತರರು ಇದ್ದರು.ಜನಗಣತಿ ದೇಶದ ಅಭಿವೃದ್ಧಿಗೆ ಆಧಾರನರೇಗಲ್ಲ: ಜನಗಣತಿ ದೇಶದ ಅಭಿವೃದ್ಧಿಗೆ ಆಧಾರವಾಗಿದ್ದು, ಸರ್ಕಾರದ ಯೋಜನೆಗಳ ರೂಪಿಸಲು ನಿಖರ ಮಾಹಿತಿ ಅತ್ಯಂತ ಅಗತ್ಯ. ಈ ಹಿನ್ನೆಲೆಯಲ್ಲಿ ಗಣತಿದಾರರು ಪ್ರಾಮಾಣಿಕತೆ ಮತ್ತು ಜವಾಬ್ದಾರಿತನದಿಂದ ಕೆಲಸ ನಿರ್ವಹಿಸಬೇಕು ಎಂದು ಪಪಂ ಮುಖ್ಯಾಧಿಕಾರಿ ಹಾಗೂ ಭಾರತೀಯ ಜನಗಣತಿ- 2027ರ ಪ್ರಭಾರಿ ಅಧಿಕಾರಿ ಮಲ್ಲೇಶ ಪಚ್ಚಿ ತಿಳಿಸಿದರು.
ಆರ್.ಎಸ್. ನರೇಗಲ್ಲ, ವಿ.ಎ. ಕುಂಬಾರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶಿವಾನಂದ ಗೋಗೆರಿ, ಬಿ.ಎಸ್. ಕಳಕಣ್ಣವರ ಜನಗಣತಿ ತರಬೇತುದಾರರಾಗಿ ಕಾರ್ಯ ನಿರ್ವಹಿಸಿದರು. ಪಪಂ ಸಿಬ್ಬಂದಿಗಳಾದ ಎಂ.ಎಚ್. ಸೀತಿಮನಿ, ರಮೇಶ ಹಲಗಿಯವರ, ಎ.ಎಸ್. ಮೆಣಸಗಿ, ನಾಜೀಮಾ ಬೆಲೇರಿ, ಶಂಕ್ರಪ್ಪ ದೊಡ್ಡಣ್ಣವರ, ಆರೀಫಬೇಗ ಮಿರ್ಜಾ, ನೀಲಪ್ಪ ಚಳ್ಳಮರದ, ಉದಯ ಮುದೇನಗುಡಿ, ಮಣಿಕಂಠ ಹೂಗಾರ, ಕಾವ್ಯಾ ಅರವಟಗಿಮಠ, ಪೂರ್ಣಿಮಾ ಹೊಸಮನಿ, ರೇಣುಕಾ ಕಳಕಣ್ಣವರ, ಚಿದಂಬರ ಹುಣಶಿಮರದ ಸೇರಿದಂತೆ ಇತರರಿದ್ದರು.