ಹೂವು ಮಾರುಕಟ್ಟೆ ಸ್ಥಗಿತಕ್ಕೆ ಆಗ್ರಹ

KannadaprabhaNewsNetwork |  
Published : Feb 13, 2026, 03:00 AM IST
ಅನಧಿಕೃತ ಹೂವಿನ ಮಾರುಕಟ್ಟೆ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು | Kannada Prabha

ಸಾರಾಂಶ

ಬೆಳಗಾವಿ: ನಗರದಲ್ಲಿ ಅನಧಿಕೃತವಾಗಿ ಆರಂಭಗೊಂಡಿರುವ ಖಾಸಗಿ ಹೂವಿನ ಮಾರುಕಟ್ಟೆ ವಿರುದ್ಧ ಸರ್ಕಾರಿ ಹೂವಿನ ಮಾರುಕಟ್ಟೆಯ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿ, ತಕ್ಷಣ ಮಾರುಕಟ್ಟೆ ಬಂದ್ ಮಾಡಿಸುವಂತೆ ದಂಡು ಮಂಡಳಿಗೆ ಮನವಿ ಸಲ್ಲಿಸಿದ್ದಾರೆ.

ಬೆಳಗಾವಿ: ನಗರದಲ್ಲಿ ಅನಧಿಕೃತವಾಗಿ ಆರಂಭಗೊಂಡಿರುವ ಖಾಸಗಿ ಹೂವಿನ ಮಾರುಕಟ್ಟೆ ವಿರುದ್ಧ ಸರ್ಕಾರಿ ಹೂವಿನ ಮಾರುಕಟ್ಟೆಯ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿ, ತಕ್ಷಣ ಮಾರುಕಟ್ಟೆ ಬಂದ್ ಮಾಡಿಸುವಂತೆ ದಂಡು ಮಂಡಳಿಗೆ ಮನವಿ ಸಲ್ಲಿಸಿದ್ದಾರೆ. ಭರತೇಶ್ ಶಿಕ್ಷಣ ಸಂಸ್ಥೆ ಸಮೀಪ ಯಾವುದೇ ಕಾನೂನುಬದ್ಧ ಅನುಮತಿ ಪಡೆಯದೆ ಖಾಸಗಿ ಸಗಟು ಹೂವಿನ ಮಾರುಕಟ್ಟೆ ಆರಂಭಿಸಿರುವುದಾಗಿ ವ್ಯಾಪಾರಿಗಳು ಆರೋಪಿಸಿದ್ದಾರೆ. ಎಪಿಎಂಸಿ ಮತ್ತು ತೋಟಗಾರಿಕಾ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ಮಾರುಕಟ್ಟೆ ನಡೆಸಲಾಗುತ್ತಿದೆ ಎಂದು ದೂರಿದ್ದಾರೆ.

ಈ ಹಿನ್ನೆಲೆಯಲ್ಲಿ ಸರ್ಕಾರಿ ಮಾರುಕಟ್ಟೆಯ ವ್ಯಾಪಾರಿಗಳ ನಿಯೋಗ ದಂಡು ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಂಚಲವಾರ ಸುದಾಮ್ ಹರಿವಿಜಯ್ ಅವರನ್ನು ಭೇಟಿ ಮಾಡಿ, ತಕ್ಷಣವೇ ಅನಧಿಕೃತ ಮಾರುಕಟ್ಟೆಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿದೆ. ಸಾಮಾಜಿಕ ಕಾರ್ಯಕರ್ತ ರಾಜಕುಮಾರ್ ಟೋಪಣ್ಣವರ ಮಾತನಾಡಿ, ಈಗಾಗಲೇ ಸರ್ಕಾರಿ ಹೂವಿನ ಮಾರುಕಟ್ಟೆ ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಯಾವುದೇ ಅನುಮತಿ ಇಲ್ಲದೆ ದಂಡು ಮಂಡಳಿಯ ವ್ಯಾಪ್ತಿಯಲ್ಲಿ ಖಾಸಗಿ ಮಾರುಕಟ್ಟೆ ಆರಂಭಿಸಿರುವುದು ನಿಯಮಬಾಹಿರವಾಗಿದೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡವರ ಪಾಲಿಗೆ ವೈದ್ಯರು ದೇವರಾಗಿ, ರಾಕ್ಷಸರಾಗಬೇಡಿ: ಡಿಸಿ ಸಂಗಪ್ಪ
ನಾಡಿದ್ದು ಸಂತ ಸೇವಾಲಾಲರ 287ನೇ ಜಯಂತ್ಯುತ್ಸವ