ಧಾರವಾಡ: ರಾಜ್ಯದ ಎಲ್ಲ ವಸತಿ ನಿಲಯಗಳಿಗೆ ಪ್ರವೇಶ ಕೋರಿ ಅರ್ಜಿ ಸಲ್ಲಿಸುವ ಎಲ್ಲ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಪ್ರವೇಶ ನೀಡಬೇಕು ಎಂಬ ಆದೇಶದಂತೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದ ವಸತಿ ನಿಲಯಗಳಿಗೂ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತೈದೃಷ್ಟಿಯಿಂದ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಪರಿಗಣಿಸಿ ಧಾರವಾಡ ಜಿಲ್ಲೆಯಲ್ಲಿ ಹೆಚ್ಚುವರಿ ಹಿಂದುಳಿದ ವರ್ಗಗಳ ವಸತಿ ನಿಲಯಗಳನ್ನು ತಕ್ಷಣ ನಿರ್ಮಿಸಬೇಕು. ಸಮಾನ ಶೈಕ್ಷಣಿಕ ಅವಕಾಶಗಳು ಪ್ರತಿಯೊಬ್ಬ ವಿದ್ಯಾರ್ಥಿಗೂ ಲಭಿಸಬೇಕೆಂಬ ಉದ್ದೇಶದಿಂದ ಸರ್ಕಾರವು ತ್ವರಿತವಾಗಿ ಈ ವಿಷಯದಲ್ಲಿ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಜಿಲ್ಲಾಧ್ಯಕ್ಷ ಹನುಮಂತ ದಾಸರ, ನ್ಯಾಯವಾದಿ ಅರುಣ್ ಮೂಡಿ, ನಾಗರಾಜ ಎತ್ತಿನಮನೆ, ರೇಣುಕಾ ಕಲ್ಯಾಣಿ ಇದ್ದರು.