ಕನ್ನಡಪ್ರಭ ವಾರ್ತೆ ಚಾಮರಾಜನಗರ
ಸಭೆ ಅಧ್ಯಕ್ಷತೆ ವಹಿಸಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರಿಂದ ಸಮಂಜಸ ಉತ್ತರ ಬಾರದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸಮುದಾಯದ ಮುಖಂಡರು ಪೂರ್ವಭಾವಿ ಸಭೆ ಬಹಿಷ್ಕರಿಸಿ ಹೊರಹೋದರು. ಈ ಸಂದರ್ಭದಲ್ಲಿ ನಾಯಕ ವಿದ್ಯಾಭಿವೃದ್ದಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸನಾಯಕ ಮಾತನಾಡಿ, ಜಿಲ್ಲಾಡಳಿತ ಭವನದ ಆವರಣದಲ್ಲಿ ಮಹರ್ಷಿ ಶ್ರೀವಾಲ್ಮೀಕಿ ಪುತ್ಥಳಿ ನಿರ್ಮಾಣ ಮಾಡುವಂತೆ ಸಮುದಾಯದ 10 ವರ್ಷಗಳ ಬೇಡಿಕೆಯಾಗಿದ್ದು, ಅ.17 ರಂದು ನಡೆಯುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪುತ್ಥಳಿಗೆ ನಿರ್ಮಾಣಕ್ಕೆ ಗುದ್ದಲಿಪೂಜೆ ಮಾಡುವಂತೆ ಇಂದಿನ ಪೂರ್ವಭಾವಿ ಸಭೆಯಲ್ಲಿ ಪಟ್ಟು ಹಿಡಿದಾಗ ಜಿಲ್ಲಾಡಳಿತದಿಂದ ವತಿಯಿಂದ ಸಮಂಜನ ಉತ್ತರಬಾರದ ಹಿನ್ನೆಲೆಯಲ್ಲಿ ಸಭೆಯನ್ನು ಬಹಿಷ್ಕರಿಸಲಾಗಿದೆ.
ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಜಿಲ್ಲಾಡಳಿತ ತಾರತಮ್ಯ ಮಾಡುತ್ತಿದೆ. ಒಂದು ವೇಳೆ ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಕ್ರಮಕೈಗೊಳ್ಳದಿದ್ದರೆ ಜಿಲ್ಲಾಡಳಿತದಿಂದ ಆಚರಣೆ ಮಾಡುವ ವಾಲ್ಮೀಕಿ ಜಯಂತಿಯ ಸರ್ಕಾರಿ ಕಾರ್ಯಕ್ರಮವನ್ನು ಬಹಿಷ್ಕರಿಸಲಾಗುವುದು ಎಂದು ಎಚ್ಚರಿಸಿದರು.ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಚ್.ವಿ.ಚಂದ್ರು, ನಗರಸಭಾ ಅಧ್ಯಕ್ಷ ಸುರೇಶ್, ಪರಿಶಿಷ್ಠ ವರ್ಗ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಬಿಂದ್ಯಾ, ಡಿವೈಎಸ್ ಪಿ ಲಕ್ಷ್ಮಯ್ಯ, ನಾಯಕ ಸಮುದಾಯದ ಪು.ಶ್ರೀನಿವಾಸನಾಯಕ, ನಗರಸಭಾ ಮಾಜಿ ಅಧ್ಯಕ್ಷ ಸುರೇಶ್ ನಾಯಕ, ಕಂಡಕ್ಟರ್ ಸೋಮನಾಯಕ, ಕೃಷ್ಣನಾಯಕ, ಸುರೇಶ್ ನಾಗ್, ಜಯಸುಂದರ್, ಕಂದಹಳ್ಳಿ ಮಹೇಶ್, ಚೆಂಗುಮಣಿ, ವಿರಾಟ್ ಶಿವು, ಅಂಬರೀಶ್, ಶಿವರಾಜ್, ಕೃಷ್ಣನಾಯಕ, ಮಹೇಂದ್ರ, ಶಿವರಾಂ, ಮಾದೇಶ್, ವೆಂಕಟೇಶ ನಾಯಕ, ಪ್ರಕಾಶ್,ಮಹೇಶ್ ನಾಯಕ, ರಮೇಶ್, ವೆಂಕಟರಾಮನಾಯಕ, ನಾರಾಯಣ್, ಪರಶಿವಮೂರ್ತಿ ಭಾಗವಹಿಸಿದ್ದರು.