ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಸೇರಿದ ದಲಿತ ಸಂಘಟನೆಗಳ ಕಾರ್ಯಕರ್ತರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಮಾನವ ಸರಪಳಿ ರಚಿಸಿ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷವನ್ನು ಅತಿ ಹೆಚ್ಚಾಗಿ ಬಲಗೈ ಸಮುದಾಯ ಬೆಂಬಲಿಸುತ್ತಿದೆ. ದಲಿತ ಸಿಎಂ ಕೊಡ್ತೇವೆ ಎಂದು ಹೇಳಿ ಕಾಂಗ್ರೆಸ್ ಪಕ್ಷ ಮಾತಿಗೆ ತಪ್ಪಿದೆ. ಅದಕ್ಕಾಗಿ ಉಪ ಮುಖ್ಯಮಂತ್ರಿ ಸ್ಥಾನ ಹಾಗೂ ೫ರಿಂದ ೭ ಸಚಿವ ಸ್ಥಾನ ನೀಡಬೇಕು. ಕಾಂಗ್ರೆಸ್ ಗೆಲ್ಲಲು ಬಲಗೈ ಸಮುದಾಯ ಪ್ರಮುಖ ಪಾತ್ರ ವಹಿಸಿದೆ. ಹಾಗಾಗಿ ಕಾಂಗ್ರೆಸ್ ಹೈಕಮಾಂಡ್ ನಮ್ಮ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಹೆಚ್ಚಿನ ಸ್ಥಾನ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಕೊಡ್ತೇವೆ ಎಂದು ಕಾಂಗ್ರೆಸ್ ಹೈಕಮಾಂಡ್ಗೆ ಎಚ್ಚರಿಕೆ ನೀಡಿದರು.ಪ್ರತಿಭಟನೆಯಲ್ಲಿ ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಸಣ್ಣ ಕೈಗಾರಿಕಾ ಅಭಿವೃದ್ದಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಕೃಷ್ಣ, ಚಂದಗಾಲು ವಿಜಯಕುಮಾರ್, ಬಸವರಾಜು, ಶ್ರೀಧರ್, ಪ್ರೇಮ್ಕುಮಾರ್, ಕಬ್ಬಾಳಯ್ಯ, ಪ್ರೊ.ಚಂದ್ರಶೇಖರ್, ದೀಪಕ್, ಲವ, ಕಣಿವೆ ರಾಮು, ಹೊಂಬಯ್ಯ, ಸಿದ್ದರಾಜು, ಗುರುಮೂರ್ತಿ, ಶಿವಪ್ರಕಾಶ್, ಪ್ರಾಣೇಶ್, ಪ್ರಕಾಶ್ ಇತರರಿದ್ದರು.
ಕನ್ನಡಪ್ರಭ ವಾರ್ತೆ ಮಂಡ್ಯರಾಜ್ಯದಲ್ಲಿ ಪ್ರವರ್ಗ-೧ರ ಅಡಿಯಲ್ಲಿನ ನಾಯಕರಿಗೆ ಸಚಿವ ಹಾಗೂ ವಿಧಾನ ಪರಿಷತ್ ಸ್ಥಾನಗಳನ್ನು ನೀಡುವಂತೆ ಕರ್ನಾಟಕ ರಾಜ್ಯ ಪ್ರವರ್ಗ-೧ರ ಜಾತಿಗಳ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗರತ್ನ ಒತ್ತಾಯಿಸಿದರು.
ಗೋಷ್ಠಿಯಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಬಿ.ಲಿಂಗಯ್ಯ, ಉಪಾಧ್ಯಕ್ಷ ಪ್ರಕಾಶ್, ನಿರ್ದೇಶಕ ಸಿದ್ದರಾಜು ಇದ್ದರು.
ಮಂಡ್ಯ: ಗಂಗಾ ಮತ(ಬೆಸ್ತರ) ಸಮುದಾಯದ ಪ್ರಮುಖರಾದ ತಿಪ್ಪಣ್ಣ ಕಮಕನೂರು, ಮಂಜುನಾಥ ಸುಣಗಾರ್ ಹಾಗೂ ಡಾ.ಭಗತ್ ರಾಮ್ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ಕಲ್ಪಿಸಬೇಕು ಎಂದು ಮಂಡ್ಯ ಜಿಲ್ಲಾ ಮಹಿಳಾ ಗಂಗಾಮತ(ಬೆಸ್ತರ) ಸಂಘ ಅಧ್ಯಕ್ಷೆ ಸಿ.ಗಾಯತ್ರಿ ಮನವಿ ಮಾಡಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಲಿ ಸದಸ್ಯರಾಗಿರುವ ತಿಪ್ಪಣ್ಣ ಕಮಕನೂರ್ ಅವರು ವಿಧಾನ ಪರಿಷತ್ ಸದಸ್ಯರಾಗಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಅವರನ್ನು ಮುಂದುವರಿಸುವ ಜೊತೆಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷೆ ರೇಣುಕಾ.ಬಿ, ಮದ್ದೂರು ತಾಲೂಕು ಅಧ್ಯಕ್ಷೆ ಆರ್.ವಸಂತ ಇದ್ದರು.