ಎಂ.ಚಂದ್ರಶೇಖರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ

KannadaprabhaNewsNetwork |  
Published : Oct 02, 2024, 01:08 AM IST
ಫೋಟೋ: 1ಜಿಎಲ್ಡಿ1-  ಗುಳೇದಗುಡ್ಡದಲ್ಲಿ ಜೆಡಿಎಸ್ ಪದಾಧಿಕಾರಿಗಳು ಎಂ.ಚಂದ್ರಶೇಖರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ತಹಸೀಲ್ದಾರ ಅವರಿಗೆ ಮನವಿ ನೀಡಿದರು.  | Kannada Prabha

ಸಾರಾಂಶ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅವಾಚ್ಯ ಮತ್ತು ಅಸಭ್ಯ ಪದಬಳಕೆ ಮಾಡಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾ ದಳದ ಮುಖ್ಯಸ್ಥ ಎಂ.ಚಂದ್ರಶೇಖರ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಇಲ್ಲಿನ ಜೆಡಿಎಸ್ ತಾಲೂಕು ಘಟಕದ ಪದಾಧಿಕಾರಿಗಳು ಅವರು ಮಂಗಳವಾರ ತಹಸೀಲ್ದಾರ್ ಮಂಗಳಾ ಎಂ. ಅವರಿಗೆ ಮನವಿ ನೀಡಿ ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಗುಳೇದಗುಡ್ಡ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅವಾಚ್ಯ ಮತ್ತು ಅಸಭ್ಯ ಪದಬಳಕೆ ಮಾಡಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾ ದಳದ ಮುಖ್ಯಸ್ಥ ಎಂ.ಚಂದ್ರಶೇಖರ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಇಲ್ಲಿನ ಜೆಡಿಎಸ್ ತಾಲೂಕು ಘಟಕದ ಪದಾಧಿಕಾರಿಗಳು ಅವರು ಮಂಗಳವಾರ ತಹಸೀಲ್ದಾರ್‌ ಮಂಗಳಾ ಎಂ. ಅವರಿಗೆ ಮನವಿ ನೀಡಿ ಆಗ್ರಹಿಸಿದರು.

ಜೆಡಿಎಸ್ ತಾಲೂಕು ಅಧ್ಯಕ್ಷ ಬಾಲಪ್ಪ ಹುನಗುಂಡಿ ಮಾತನಾಡಿ, ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ ಅವರು ಪೋಲಿಸ್ ಇಲಾಖೆಯ ಗಾಂಭೀರ್ಯತೆಯನ್ನು ಕಳೆದಿರುವ ಇವರು, ಭಾರತ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಎಚ.ಡಿ.ಕುಮಾರಸ್ವಾಮಿಯವರ ವಿರುದ್ಧ ಅಸಭ್ಯ ಮತ್ತು ಅವಾಚ್ಯ ಶಬ್ಧಗಳನ್ನು ಬಳಸಿ ಅಧಿಕಾರಿಗಳಿಗೆ ಪತ್ರ ಬರೆದು ಇಲಾಖೆಯ ಅಶಿಸ್ತಿಗೆ ಕಾರಣರಾಗಿದ್ದಾರೆ ಎಂದರು.

ಎಂ.ಚಂದ್ರಶೇಖರ ಮತ್ತು ರಾಜ್ಯದ ಪೊಲೀಸ್ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಕ್ರಮಕೈಗೊಳ್ಳದೇ ಭ್ರಷ್ಟತೆಗೆ ಉತ್ತೇಜನ ನೀಡುತ್ತಿದೆ. ಕಾರಣ ಎಂ.ಚಂದ್ರಶೇಖರ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಬೇಕೆಂದು ಆಗ್ರಹಿಸಿದರು.

ಈ ವೇಳೆ ಜೆಡಿಎಸ್‌ ಕಾರ್ಯದರ್ಶಿ ಚಂದ್ರಕಾಂತ ಶೇಖಾ, ಜೆಡಿಎಸ್ ಅಲ್ಪ ಸಂಖ್ಯಾತ ಘಟಕದ ಜಿಲ್ಲಾ ಉಪಾಧ್ಯಕ್ಷ ಅನ್ವರಖಾನ್ ಪಠಾಣ, ಪುರಸಭೆ ಸದಸ್ಯ ಸಂತೋಷ ನಾಯನೇಗಲಿ, ಈರಣ್ಣ ಕವಡಿಮಟ್ಟಿ, ಸಂತೋಷ ತಿಪ್ಪಾ, ಕೃಷ್ಣಾ ಹಾಸೀಲಕರ್, ಎಸ್.ಆರ್.ವಾಲೀಕಾರ, ಲಕ್ಷ್ಮಣ ಹಾಲನ್ನವರ, ಪ್ರಕಾಶ ವಾಳದುಂಕಿ, ಸಚಿನ್ ರಾಂಪೂರ, ಈಶ್ವರ ಮುರಗೋಡ, ಸಂಗಮೇಶ ನನ್ನಾ, ಸಂಜೀವ ಭಾವಿಕಟ್ಟಿ, ಸಂಗಪ್ಪ ಮಾವಿನಮರದ, ಕೇಮಣ್ಣ ರಾಂಪೂರ ಸೇರಿದಂತೆ ಇನ್ನೂ ಅನೇಕರು ಮನವಿ ನೀಡಿ ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ