ದಾಬಸ್ಪೇಟೆ: ಪಟ್ಟಣದಲ್ಲಿರುವ ಸರ್ಕಾರಿ ಬಸ್ ನಿಲ್ದಾಣದ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಅಲ್ಲಿಯವರೆಗೂ ಪ್ರಯಾಣಿಕರಿಗೆ, ಸಾರ್ವಜನಿಕರಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ನಿಗಮದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ತುಮಕೂರು ಡಿಪೋ ವಿಭಾಗೀಯ ಅಧಿಕಾರಿಗೆ ತರಾಟೆ: ಈ ಬಗ್ಗೆ ತುಮಕೂರು ಸಂಚಾರ ನಿಗಮದ ವಿಭಾಗೀಯ ಅಧಿಕಾರಿಗೆ ಪೋನ್ ಮಾಡಿ ತರಾಟೆಗೆ ತೆಗೆದುಕೊಂಡಾಗ ಅವರು ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ಉತ್ತರಿಸಿದರು. ಇದರಿಂದ ಆಕ್ರೋಶಗೊಂಡು ಏಕವಚನದಲ್ಲೇ ವಾಗ್ದಾಳಿ ನಡೆಸಿದ ಜಗದೀಶ್ ಚೌಧರಿ, ಶೀಘ್ರದಲ್ಲೇ ಕೆಲಸ ಆರಂಭಿಸದಿದ್ದರೆ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದೂ ಎಚ್ಚರಿಕೆ ನೀಡಿದರು.
ಜೆಡಿಎಸ್ ಹೋಬಳಿ ಅಧ್ಯಕ್ಷ ಮೋಹನ್ ಕುಮಾರ್ ಮಾತನಾಡಿ, ಶೀಘ್ರವೇ ಕಾಮಗಾರಿ ಪುನರಾರಂಭಿಸಿ ಪೂರ್ಣಗೊಳಿಸಿ ಬಸ್ ನಿಲ್ದಾಣವನ್ನು ಸಾರ್ವಜನಿಕರ ಅನುಕೂಲಕ್ಕೆ ಅನುವು ಮಾಡಿಕೊಡಬೇಕು. ಇಲ್ಲದಿದ್ದಲ್ಲಿ ನೂತನ ಸಂಸದ ಡಾ.ಕೆ.ಸುಧಾಕರ್ ಅವರ ಗಮನಕ್ಕೆ ತರುತ್ತೇವೆ. ಅವರ ನಿರ್ದೇಶನದಂತೆ ಹೋರಾಟಕ್ಕೆ ರೂಪುರೇಷೆ ಸಿದ್ದಪಡಿಸಿ ಅವರ ನೇತೃತ್ವದಲ್ಲೇ ಹೋರಾಟ ಮಾಡುತ್ತೇವೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಜೆಡಿಎಸ್ ಯುವಘಟಕದ ಹೋಬಳಿ ಅಧ್ಯಕ್ಷ ವೀರಸಾಗರ ಮಂಜುನಾಥ್, ನಿರ್ಮಾಪಕ ಬಿಲ್ಲಿನಕೋಟೆ ನಾಗರಾಜು, ಬಿಜೆಪಿ ತಾಲೂಕು ಯುವಘಟಕದ ಅಧ್ಯಕ್ಷ ರಾಯರಪಾಳ್ಯ ಮಂಜುನಾಥ್, ಮಹಿಳಾ ಮುಖಂಡರಾದ ಮಂಜುಳ, ನಳಿನಾ, ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು.ಪೋಟೋ 5 : ದಾಬಸ್ಪೇಟೆಯಲ್ಲಿರುವ ಸರ್ಕಾರಿ ಬಸ್ ನಿಲ್ದಾಣದ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.