ಶಿರಸಿ: ನಗರ ವ್ಯಾಪ್ತಿಯಲ್ಲಿ ಅನಧಿಕೃತ ಬೀದಿಬದಿ ಅಂಗಡಿಗಳು ಹೆಚ್ಚುತ್ತಿದೆ. ನಗರಸಭೆಗ ಬಾಡಿಗೆ ಸಂದಾಯ ಮಾಡುತ್ತಿರುವ ವ್ಯಾಪಾರಸ್ಥರಿಗೆ ವ್ಯಾಪಾರವಿಲ್ಲದೇ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ, ಅಂಗಡಿಕಾರರು ನಗರಸಭೆಯ ಪೌರಾಯುಕ್ತರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.ನಗರದ ಬಿಡ್ಕಿಬೈಲ್, ಶಿವಾಜಿ ಚೌಕ, ದೇವಿಕೆರೆ, ಕೋಟೆಕೆರೆ, ಪಂಡಿತ ಸಾರ್ವಜನಿಕ ಆಸ್ಪತ್ರೆ ಎದುರಿನ ರಸ್ತೆ ಸೇರಿದಂತೆ ನಗರ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಬೀದಿಬದಿ ಗೂಡಂಗಡಿಗಳು ಹೆಚ್ಚಾಗುತ್ತಿದೆ. ಅವರಿಗೆ ಬಾಡಿಗೆ ಸಂದಾಯ ಮಾಡುವುದು ಇಲ್ಲವಾದ್ದರಿಂದ ಕಡಿಮೆ ದರಲ್ಲಿ ತಿಂಡಿಗಳನ್ನು ಮಾರಾಟ ಮಾಡುವುದರಿಂದ ಗ್ರಾಹಕರು ಅಲ್ಲಿಗೆ ತೆರಳುತ್ತಾರೆ.
ಕಾರವಾರ: ನ್ಯಾಯಾಲಯದ ಆದೇಶದಂತೆ ಪರಿಶಿಷ್ಟ ಜಾತಿ, ಪಂಗಡದಲ್ಲಿ ಒಳಮೀಸಲಾತಿ ಜಾರಿ ಮಾಡಬೇಕು. ಆದರೆ, ಇದು ವರೆಗೂ ಆಗಿಲ್ಲ. ಹೀಗಾಗಿ ಅ. ೧೬ರಂದು ಕಾರವಾರದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದೇವೆ ಎಂದು ಒಳ ಮೀಸಲಾತಿ ಹೋರಾಟ ಸಮಿತಿಯ ಬಸವರಾಜ ಸಂಗಮೇಶ್ವರ ತಿಳಿಸಿದರು.ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಳ ಮೀಸಲಾತಿ ಜಾರಿಗೆ ಸಮಿತಿ ರಚಿಸಲು ಸರ್ಕಾರ ಮುಂದಾಗಿದೆ. ಇದು ಕಾಲಹರಣ ಮಾಡುವ ನಿರ್ಧಾರವಾಗಿದೆ. ಈ ನಿಟ್ಟಿನಲ್ಲಿ ಹಲವು ಸಂಘಟನೆಗಳು ಎಲ್ಲರೂ ಒಗ್ಗಟ್ಟಾಗಿ ರಾಜ್ಯಾದ್ಯಂತ ಹೋರಾಟ ಮಾಡಲು ನಿರ್ಧರಿಸಿದ್ದೇವೆ ಎಂದರು.ಹಲವರು ಒಳ ಮೀಸಲಾತಿ ಜಾರಿಗೆ ಹೋರಾಟ ಮಾಡಿದ ಪರಿಣಾಮ ನ್ಯಾಯಾಲಯ ಆದೇಶ ನೀಡಿದೆ. ಒಳ ಮೀಸಲಾತಿ ಇಲ್ಲದ ಕಾರಣ ರಾಜಕೀಯವಾಗಿ, ಶೈಕ್ಷಣಿಕವಾಗಿ ಕೆಲ ಸಮುದಾಯ ಹಿಂದೆ ಬಿದ್ದಿವೆ. ಇದು ಜಾರಿಗೆಯಾದರೆ ದಲಿತ ಸಮುದಾಯವರು ಇನ್ನಷ್ಟು ಬೆಳೆಯಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಿಸಿದರು,
ದಲಿತ ಮುಖಂಡರಾದ ಎಲಿಷಾ ಎಲಕಪಾಟಿ, ಚಿದಾನಂದ ಹರಿಜನ, ಶರೀಫ್ ಹನುಮಂತಪ್ಪ, ಕಲ್ಲಪ್ಪ ಕಾದ್ರೋಳ್ಳಿ ಮೊದಲಾದವರು ಇದ್ದರು.