ಟನ್ ಕಬ್ಬಿಗೆ ₹ 4 ಸಾವಿರ ಬೆಂಬಲ ಬೆಲೆ ನಿಗದಿಗೆ ಒತ್ತಾಯ

KannadaprabhaNewsNetwork |  
Published : Dec 20, 2025, 03:15 AM IST
ಪೋಟೋ ಶೀರ್ಷಿಕೆ 19ಬೆಲ13 | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಪ್ರತಿ ಟನ್ ಕಬ್ಬಿಗೆ ₹ 4 ಸಾವಿರ ಬೆಂಬಲ ಬೆಲೆ ನಿಗದಿಪಡಿಸುವುದು ಸೇರಿ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ಸಂಘದಿಂದ ಶುಕ್ರವಾರ ಸುವರ್ಣ ವಿಧಾನಸೌಧದ ಸುವರ್ಣ ಗಾರ್ಡನ್ ಬಳಿಯ ಪ್ರತಿಭಟನಾ ಟೆಂಟ್‌ನಲ್ಲಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಪ್ರತಿ ಟನ್ ಕಬ್ಬಿಗೆ ₹ 4 ಸಾವಿರ ಬೆಂಬಲ ಬೆಲೆ ನಿಗದಿಪಡಿಸುವುದು ಸೇರಿ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ಸಂಘದಿಂದ ಶುಕ್ರವಾರ ಸುವರ್ಣ ವಿಧಾನಸೌಧದ ಸುವರ್ಣ ಗಾರ್ಡನ್ ಬಳಿಯ ಪ್ರತಿಭಟನಾ ಟೆಂಟ್‌ನಲ್ಲಿ ಪ್ರತಿಭಟನೆ ನಡೆಸಿದರು.

ಸಕ್ಕರೆ ಬೆಲೆ ಹೆಚ್ಚಾದರೂ ಕಬ್ಬಿನ ಬೆಲೆ ಏರಿಕೆಯಾಗಿಲ್ಲ. ಹೀಗಾಗಿ ಪ್ರತಿ ಟನ್ ಕಬ್ಬಿಗೆ ₹ 4 ಸಾವಿರ ನಿಗದಿ ಮಾಡಬೇಕು. ಸ್ವಾಮಿನಾಥನ್ ವರದಿ ಯಥಾವತ್‌ ಜಾರಿಗೊಳಿಸಬೇಕು. ಬೆಳೆ ಹಾನಿಗೆ ವೈಜ್ಞಾನಿಕ ಪರಿಹಾರ ನೀಡಬೇಕು. ವಿದ್ಯುತ್ ಖಾಸಗೀಕರಣ ನೀತಿ ಕೈ ಬಿಡಬೇಕು. ಗೋವಿನ ಜೋಳ ಬೆಳೆಗೆ ಸೂಕ್ತ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಿದರು.

ರೈತರ ಜಮೀನಿನಲ್ಲಿ ನಿಷ್ಕ್ರಿಯಗೊಂಡಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗಳನ್ನು ಬೇಗ ದುರಸ್ತಿಗೊಳಿಸಬೇಕು. ಕೊಪ್ಪಳ ಜಿಲ್ಲೆಯಲ್ಲಿ ಕೈಗಾರಿಕೆಗಳಿಂದ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸಬೇಕು. ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಎಲ್ಲಾ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಘೋಷಿಸಿ, ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಎಂ.ಎನ್.ಕುಕನೂರ ಮಾತನಾಡಿ, ರಾಜ್ಯದಲ್ಲಿ ಶಾಶ್ವತ ನೀರಾವರಿ ಆಗಬೇಕು. ಅದಕ್ಕಾಗಿ ನಮ್ಮ ನದಿಗಳ ಜೋಡಣೆಯಾಗಬೇಕು. ರೈತರಿಗೆ 7 ಗಂಟೆ ನೀಡುವ ವಿದ್ಯುತ್ ಅನ್ನು 10 ಗಂಟೆ ನೀಡಬೇಕು. ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆಯನ್ನು ಘೋಷಣೆ ಮಾಡಬೇಕು. ತಕ್ಷಣ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಬೇಕು. ರೈತರ ಫಲವತ್ತಾದ ಭೂಮಿಗಳನ್ನು ಖಾಸಗೀಕರಣ ಮಾಡುತ್ತಿದ್ದು, ಅದನ್ನು ನಿಲ್ಲಿಸಬೇಕು ಎಂದರು.

ಪ್ರತಿಭಟನೆಯಲ್ಲಿ ಕೃಷ್ಣ ಹಿತ್ತಲಮನಿ, ರಾಘವೇಂದ್ರ ನಾಯ್ಡು, ದೇವಯಾನಿ ಪಾಟೀಲ ಸೇರಿದಂತೆ ಇತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ
ಕಟ್ಟುನಿಟ್ಟು ಮಾಡಿದರೂ ನಿಲ್ಲದ ಪರಪ್ಪನ ಅಗ್ರಹಾರ ಪವಾಡ