ಹೊಸಪೇಟೆ: ಹಮಾಲಿ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬುಧವಾರ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ತೀರ್ಮಾನಿಸಲಾಗಿದ್ದು ಸ್ವಾಗತಾರ್ಹವಾಗಿದೆ. ಎಪಿಎಂಸಿಯಲ್ಲಿ ನಿವೃತ್ತರಾಗುವವರಿಗೆ ಕನಿಷ್ಟ ಒಂದು ಲಕ್ಷ ನಿವೃತ್ತಿ ಪರಿಹಾರ ಅಥವಾ ಇಡುಗಂಟು ನೀಡಬೇಕು. ಅಸಂಘಟಿತ ವಲಯದ ಕಾರ್ಮಿಕರಿಗೆ ಬದುಕಿರುವಾಗ ಸಹಾಯವಾಗುವಂತ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.
ಬೇಡಿಕೆಗಳು:ರಾಜ್ಯದ ಲೋಡಿಂಗ್, ಅನ್ಲೋಡಿಂಗ್ (ಹಮಾಲಿ) ಕಾರ್ಮಿಕರಿಗೆ ಮಹಾರಾಷ್ಟ್ರ, ಕೇರಳ ಮಾದರಿಯಲ್ಲಿ ಉದ್ಯೋಗ ಭದ್ರತೆ ಹಾಗೂ ಸಾಮಾಜಿಕ ಭದ್ರತೆ ಒದಗಿಸಲು ಪ್ರತ್ಯೇಕ ಕಲ್ಯಾಣ ಮಂಡಳಿ ರಚಿಸಬೇಕು. ಗುರುತಿಸಲಾದ ಅಸಂಘಟಿತ ಕಾರ್ಮಿಕರಿಗೆ ಜಾರಿಮಾಡುತ್ತಿರುವ ಸೌಲಭ್ಯಗಳೊಂದಿಗೆ ಸಹಜ ಮರಣಕ್ಕೂ ಒಂದು ಲಕ್ಷ ಪರಿಹಾರ ನೀಡಬೇಕು, ಶವ ಸಂಸ್ಕಾರ ಪರಿಹಾರದ ಮೊತ್ತವನ್ನು ₹25 ಸಾವಿರಕ್ಕೆ ಹೆಚ್ಚಿಸಬೇಕು. ಹಮಾಲಿ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರಿಗೆ, "ಕರ್ನಾಟಕ ಅಸಂಘಟಿತ ಕಾರ್ಮಿಕರ ಭವಿಷ್ಯನಿಧಿ ಯೋಜನೆ " (ಪಶ್ಚಿಮ ಬಂಗಾಳ ಮಾದರಿ), ಹಾಗೂ ಸೂಕ್ತ ಪಿಂಚಣಿ ಯೋಜನೆ ಜಾರಿ ಮಾಡಬೇಕು. ಎಪಿಎಂಸಿ ಹಮಾಲಿ ಕಾರ್ಮಿಕರಿಗಾಗಿ ಈ ಹಿಂದೆ ಪ್ರಾರಂಭಿಸಲಾದ “ಕಾಯಕ ನಿಧಿ " ಯೋಜನೆ ಬಡ ಹಮಾಲಿ ಕಾರ್ಮಿಕರಿಗೆ ಅತ್ಯಂತ ಪ್ರಯೋಜನಕಾರಿಯಾಗಿದ್ದು ಸರ್ಕಾರದಿಂದ ಹಾಗೂ ಹಿಂದಿನಂತೆ ಎಪಿಎಂಸಿ ಸಮಿತಿಗಳಿಂದ ನಿರಂತರ ಹಣಕಾಸು ಸಹಾಯ ಪಡೆದು ವೈದ್ಯಕೀಯ ಮರುಪಾವತಿ ಯೋಜನೆ ಮುಂದುವರೆಸಬೇಕು. 60 ವರ್ಷ ಆದ ಹಮಾಲಿ ಕಾರ್ಮಿಕರಿಗೆ ಒಂದು ಬಾರಿ ಒಂದು ಲಕ್ಷ ನಿವೃತ್ತಿ ಪರಿಹಾರ ನೀಡಬೇಕು. ಪ್ರತಿವರ್ಷ 2 ಜೋತೆ ಸಮವಸ್ತ್ರ ನೀಡಬೇಕೆಂಬ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಮುಖಂಡರಾದ ಆರ್. ಭಾಸ್ಕರ್ ರೆಡ್ಡಿ, ಎಂ. ಗೋಪಾಲ್, ವಿ. ಸ್ವಾಮಿ, ಎಸ್, ರಾಮಪ್ಪ, ಪರಸಪ್ಪ, ಮರಿಕಣಿಮೆಪ್ಪ, ಮಂಜುನಾಥ, ಬಸವರಾಜ್, ಈರಣ್ಣ, ಕೇಶವ್, ಪರಶುರಾಮ ಮತ್ತಿತರರಿದ್ದರು.