ಕನ್ನಡಪ್ರಭ ವಾರ್ತೆ ಧಾರವಾಡ
ಇಲ್ಲಿಯ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಮಂಗಳವಾರ ನಡೆದ ಅಖಿಲ ಕರ್ನಾಟಕ ಭೋವಿ ವಡ್ಡರ ಯುವ ವೇದಿಕೆ ಆಯೋಜಿಸಿದ್ದ ರಾಜ್ಯ ಮಟ್ಟದ ಸಭೆ ಮತ್ತು ಸದಸ್ಯರ ಮಹಾಸಭೆಯಲ್ಲಿ ಮಾತನಾಡಿದರು.
ಭೋವಿ ವಡ್ಡರ ಜಾತಿ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆಯುತ್ತಿರುವವರ ಮೇಲೆ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಬೇಕು. ನಿತ್ಯ ಕೂಲಿ ಕೆಲಸ ಮಾಡಿ ಬದುಕುವ ಭೋವಿ ವಡ್ಡರ ಸಮುದಾಯ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಮುಂದೆ ಬರಬೇಕಾಗಿದೆ ಎಂದರು.ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದ ಮನಗುಂಡಿಯ ರೇವಣಸಿದ್ಧೇಶ್ವರ ಮಠದ ಬಸವರಾಜ ದೇವರು, ದಿಲ್ಲಿಯಲ್ಲಿ ಇರುವಂತಹ ಸಂಸತ್ತ ಭವನ, ವಿಧಾನಸೌಧ, ವಿಶ್ವವಿದ್ಯಾಲಯಗಳು, ಮಠಗಳು, ದೇವಸ್ಥಾನಗಳು ಭೋವಿ ಸಮಾಜದ ವಿಶ್ವಬ್ರಹ್ಮವಾಗಿವೆ. ಅವುಗಳನ್ನು ನಿರ್ಮಾಣ ಮಾಡಿರುವ ಭೋವಿ ವಡ್ಡರ ಸಮಾಜಕ್ಕೆ ಸೂಕ್ತ ನ್ಯಾಯ ದೊರಕಬೇಕು ಎಂದರು.
ಭೋವಿ ಸಮಾಜದ ಮುಖಂಡ ಬಸವರಾಜ ಆನೆಗುಂದಿ ಮಾತನಾಡಿ, ಶತಶತಮಾನಗಳಿಂದ ಶೋಷಣೆಗೊಳಗಾದ ನಮ್ಮ ಸಮಾಜ 12ನೇ ಶತಮಾನದಲ್ಲಿ ಸಿದ್ಧರಾಮೇಶ್ವರರು ನಮ್ಮ ಸಮುದಾಯಕ್ಕೆ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟರೂ 21ನೇ ಶತಮಾನದಲ್ಲಿಯೂ ನಾವು ಸಾಮಾಜಿಕ, ಆರ್ಥಿಕ, ಶಿಕ್ಷಣ ಹಾಗೂ ಉದ್ಯೋಗಗಳಿಂದ ವಂಚಿತರಾಗಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಧಾರವಾಡದ ಮಂಜನಾಥ ತಿಮ್ಮಣ್ಣ ಹಿರೇಮನಿ ಅವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ ಮಾಡಲಾಯಿತು. ರಾಜಶೇಖರ ದುಮ್ಮವಾಡ ಸ್ವಾಗತಿಸಿದರು. ರವಿ ಹೆಗಡೆ ನಿರೂಪಿಸಿದರು. ಜಿಲ್ಲಾಧ್ಯಕ್ಷ ಹರೀಶ ವಡ್ಡರ ಇದ್ದರು.