ಕ್ರೀಡಾಂಗಣ ಅಭಿವೃದ್ಧಿಗೆ ಅನುದಾನಕ್ಕೆ ಆಗ್ರಹ

KannadaprabhaNewsNetwork |  
Published : Mar 22, 2025, 02:04 AM IST
ಚಿತ್ರದುರ್ಗ ಮೂರನೇ ಪುಟದ2222  | Kannada Prabha

ಸಾರಾಂಶ

ಖೇಲೋ ಇಂಡಿಯಾ ಯೋಜನೆಯಡಿ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅನುದಾನ ಕೋರಿ ಸಂಸದ ಗೋವಿಂದ ಎಂ.ಕಾರಜೋಳ ದೆಹಲಿಯಲ್ಲಿ ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಮನಸುಖ್ ಮಾಂಡವೀಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಸಂಸದ ಗೋವಿಂದ ಕಾರಜೋಳರಿಂದ ಕೇಂದ್ರ ಸಚಿವ ಮನಸುಖ್‌ಗೆ ಮನವಿಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಕೇಂದ್ರ ಸರ್ಕಾರದ ಯುವಜನ ಸೇವೆ ಮತ್ತು ಕ್ರೀಡಾ ಸಚಿವಾಲಯದಿಂದ ಖೇಲೋ ಇಂಡಿಯಾ ಯೋಜನೆಯಡಿ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅನುದಾನ ಕೋರಿ ಸಂಸದ ಗೋವಿಂದ ಎಂ.ಕಾರಜೋಳ ದೆಹಲಿಯಲ್ಲಿ ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಮನಸುಖ್ ಮಾಂಡವೀಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಚಿತ್ರದುರ್ಗ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ವಿವಿಧೋದ್ದೇಶ ಒಳಾಂಗಣ ಕ್ರೀಡಾಂಗಣ ಹಾಗೂ ಸಿಂಥೆಟಿಕ್ ಫುಟ್‍ಬಾಲ್ ಟ್ರಾಕ್ ನಿರ್ಮಾಣಕ್ಕಾಗಿ 27 ಕೋಟಿ ರು, ಹೊಳಲ್ಕೆರೆ ತಾಲೂಕು ಕ್ರೀಡಾಂಗಣದಲ್ಲಿ ಮೂಲ ಸೌಲಭ್ಯ ಒದಗಿಸಲು 18 ಕೋಟಿ ರು, ಹಿರಿಯೂರು ತಾಲೂಕು ಕ್ರೀಡಾಂಗಣದಲ್ಲಿ ಅಥ್ಲೆಟಿಕ್ ಸಿಂಥೆಟಿಕ್ ಟ್ರಾಕ್ ಹಾಗೂ ಈಜುಕೊಳ ನಿರ್ಮಾಣ, ಚಳ್ಳಕೆರೆ ತಾಲೂಕು ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಹಾಕಿ ಟರ್ಫ್ ನಿರ್ಮಾಣಕ್ಕೆ ಅನುದಾನ ಕೋರಿದ್ದಾರೆ.

ಈ ಅಭಿವೃದ್ಧಿ ಕಾಮಗಾರಿಗಳಿಗೆ ಈಗಾಗಲೇ ರಾಜ್ಯ ಸರ್ಕಾರದ ಮೂಲಕ ಕೇಂದ್ರ ಸಚಿವಾಲಯಕ್ಕೆ ಪ್ರಸ್ತಾವನೆಗಳನು ಸಲ್ಲಿಸಲಾಗಿದ್ದು, ರಾಜ್ಯ ಸರ್ಕಾರದಿಂದ ಸಲ್ಲಿಸಿರುವ ಪ್ರಸ್ಥಾವನೆಗೆ ಅಗತ್ಯ ಅನುದಾನದೊಂದಿಗೆ ಅನುಮೋದನೆ ನೀಡುವಂತೆ ಸಂಸದರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು