ರೈಲು ಯೋಜನೆ, ಸೇವೆಗಳ ಅನುಷ್ಠಾನಕ್ಕೆ ಒತ್ತಾಯ

KannadaprabhaNewsNetwork |  
Published : Jul 27, 2026, 02:45 AM IST
ವಿವಿಧ ರೈಲು ಯೋಜನೆಗಳು ಮತ್ತು ಸೇವೆಗಳ ಅನುಷ್ಠಾನಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯ ಅಧ್ಯಕ್ಷ ಕೆ.ಎಂ. ಮಹೇಶ್ವರ ಸ್ವಾಮಿ ಅವರ ನೇತೃತ್ವದ ನಿಯೋಗವು ಬುಧವಾರ ನೈಋತ್ಯ ರೈಲ್ವೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿತು. | Kannada Prabha

ಸಾರಾಂಶ

ವಿವಿಧ ರೈಲು ಯೋಜನೆ ಮತ್ತು ಸೇವೆಗಳ ಅನುಷ್ಠಾನಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯ ಅಧ್ಯಕ್ಷ ಕೆ.ಎಂ. ಮಹೇಶ್ವರ ಸ್ವಾಮಿ ಅವರ ನೇತೃತ್ವದ ನಿಯೋಗವು ನೈಋತ್ಯ ರೈಲ್ವೆ ವಲಯದ ಜನರಲ್ ಮ್ಯಾನೇಜರ್ ಪದ್ಮನಾಭ ಅನಂತ್ ಹಾಗೂ ಹುಬ್ಬಳ್ಳಿ ವಿಭಾಗದ ಡಿಆರ್‌ಎಂ ಮೀನಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಹುಬ್ಬಳ್ಳಿ: ವಿವಿಧ ರೈಲು ಯೋಜನೆ ಮತ್ತು ಸೇವೆಗಳ ಅನುಷ್ಠಾನಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯ ಅಧ್ಯಕ್ಷ ಕೆ.ಎಂ. ಮಹೇಶ್ವರ ಸ್ವಾಮಿ ಅವರ ನೇತೃತ್ವದ ನಿಯೋಗವು ನೈಋತ್ಯ ರೈಲ್ವೆ ವಲಯದ ಜನರಲ್ ಮ್ಯಾನೇಜರ್ ಪದ್ಮನಾಭ ಅನಂತ್ ಹಾಗೂ ಹುಬ್ಬಳ್ಳಿ ವಿಭಾಗದ ಡಿಆರ್‌ಎಂ ಮೀನಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಬಳ್ಳಾರಿ-ಸಿರುಗುಪ್ಪ-ಸಿಂಧನೂರು-ಲಿಂಗಸುಗೂರು ನೂತನ ರೈಲು ಮಾರ್ಗದ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸುವಂತೆ ಒತ್ತಾಯಿಸಲಾಯಿತು. ಈ ಮಾರ್ಗದ ಸರ್ವೇಗೆ 2013ರಲ್ಲಿ ಅಂದಿನ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದನೆ ನೀಡಿದ್ದು, ನಂತರ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈಲ್ವೆ ಸಚಿವ ಸದಾನಂದ ಗೌಡ ಅವರು ಬಳ್ಳಾರಿ-ಸಿಂಧನೂರು-ಗಬ್ಬೂರು ಮಾರ್ಗಕ್ಕೂ ಪ್ರತ್ಯೇಕ ಸರ್ವೇಗೆ ಆದೇಶಿಸಿದ್ದರು. ಎರಡೂ ಸರ್ವೇಗಳು ಪೂರ್ಣಗೊಂಡಿದ್ದರೂ ಕಾಮಗಾರಿ ಆರಂಭವಾಗಿಲ್ಲ ಎಂದು ನಿಯೋಗ ಗಮನ ಸೆಳೆಯಿತು.

ಬಳ್ಳಾರಿಯಿಂದ ಬೆಂಗಳೂರಿಗೆ ಪ್ರಯಾಣಿಕರ ಅನುಕೂಲಕ್ಕಾಗಿ ಉದಯ್ ಇಂಟರ್‌ಸಿಟಿ, ಜನಶತಾಬ್ದಿ ಅಥವಾ ವಂದೇ ಭಾರತ್ ರೈಲನ್ನು ಆರಂಭಿಸಬೇಕೆಂಬ 20 ವರ್ಷಗಳ ಹಳೆಯ ಬೇಡಿಕೆ ಈಡೇರಿಸುವಂತೆ ಮನವಿ ಮಾಡಲಾಯಿತು. ಇದಲ್ಲದೆ, ಹೊಸಪೇಟೆ-ಮುಂಬೈ ರೈಲಿಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಬಳ್ಳಾರಿಯಿಂದ ಬೆಳಗ್ಗೆ 11.30ಕ್ಕೆ ಹೊಸ ರೈಲು ಸೇವೆ ಆರಂಭಿಸುವಂತೆ ಕೋರಲಾಯಿತು.

ಶಿವಮೊಗ್ಗ-ಬಳ್ಳಾರಿ-ಚೆನ್ನೈ ಬೈ-ವೀಕ್ಲಿ ಎಕ್ಸ್‌ಪ್ರೆಸ್ ರೈಲನ್ನು ಪುನರಾರಂಭಿಸಬೇಕು, ಬೆಳಗಾವಿ-ಮುನಗೂರು ಎಕ್ಸ್‌ಪ್ರೆಸ್ ಅನ್ನು ವಾರದ ಸೇವೆಯಿಂದ ದಿನನಿತ್ಯದ ರೈಲಾಗಿ ಪರಿವರ್ತಿಸಬೇಕು ಹಾಗೂ ಬಳ್ಳಾರಿಯ ಹೊಸ ಬಸ್ ನಿಲ್ದಾಣದ ಹಿಂಭಾಗದಲ್ಲಿ ಬಳ್ಳಾರಿ ಬೈಪಾಸ್ ರೈಲು ನಿಲ್ದಾಣವನ್ನು ಸ್ಥಾಪಿಸಬೇಕೆಂಬ ಬೇಡಿಕೆಗಳನ್ನೂ ನಿಯೋಗ ಮುಂದಿಟ್ಟಿತು.

ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಈ ಹಿಂದೆ ಇದ್ದಂತೆ 12 ಸ್ಲೀಪರ್ ಬೋಗಿಗಳನ್ನು ಮರು ಅಳವಡಿಸಬೇಕು. ಪ್ರಸ್ತುತ ಇರುವ 9 ಸ್ಲೀಪರ್ ಬೋಗಿಗಳು ಪ್ರಯಾಣಿಕರ ಬೇಡಿಕೆಗೆ ಸಾಕಾಗುತ್ತಿಲ್ಲ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ರೈಲ್ವೆ ಕ್ರಿಯಾ ಸಮಿತಿಯ ಅಧ್ಯಕ್ಷ ಗುರು ಕಲ್ಮಠ, ಪದಾಧಿಕಾರಿಗಳಾದ ಪಿ. ಬಂಡೆಗೌಡ, ಜೆ.ಎಂ. ಮಂಜುನಾಥ್, ಸ್ವಾಮಿ ಸಿಂದ್ವಾಳ, ಮಹೇಶ್ ಗೌಡ, ಮಧುಸೂದನ್ ಗೌಡ ಸಂಗನಕಲ್ಲು, ವಿರೂಪಾಕ್ಷಪ್ಪ (ಹೊಸಪೇಟೆ) ಹಾಗೂ ಸತೀಶ್ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

೮೦ನೇ ಸ್ವಾತಂತ್ರೋತ್ಸವದ ಅರ್ಥಪೂರ್ಣ ಆಚರಣೆ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
ಮಳೆಗಾಗಿ ಗುರ್ಜಿ ಪೂಜೆಗೆ ಮೊರೆ ಹೋದ ಗ್ರಾಮಸ್ಥರು