ಹೊರಗುತ್ತಿಗೆ ನೌಕರರಿಗೆ ಕನಿಷ್ಠವೇತನ, ಸೌಲಭ್ಯಕ್ಕೆ ಆಗ್ರಹ

KannadaprabhaNewsNetwork |  
Published : May 20, 2026, 12:15 AM IST
 ಸಿಕೆಬಿ-1  ಜಿಲ್ಲಾಡಳಿತ ಭವನದ ಮುಂದೆ ಕರ್ನಾಟಕ ರಾಜ್ಯ ನಗರಪಾಲಿಕೆ ನಗರಸಭೆ ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು | Kannada Prabha

ಸಾರಾಂಶ

ಜಿಲ್ಲೆಯ ಬಾಗೇಪಲ್ಲಿ ಪುರಸಭೆಯಲ್ಲಿ ವಾಹನ ಚಾಲನೆ ಮಾಡುತ್ತಿರುವ ಹೊರಗುತ್ತಿಗೆ ನೌಕರರಿಗೆ ಸರ್ಕಾರದ ನಿಯಮಾವಳಿಯಂತೆ ಕನಿಷ್ಠ ವೇತನವಾಗಲಿ ಪಿ.ಎಫ್ ಮತ್ತು ಇಎಸ್‌ಐ ಪಾವತಿ ಮಾಡದ ನೀಲಾದ್ರಿ ಎಂಟರ್ ಪ್ರೈಸಸ್ ಮತ್ತು ಸಂತೋಷ್ ಎಂಟರ್ ಪ್ರೈಸಸ್ ಕಂಪನಿಗಳನ್ನು ಕಪ್ಪುಪಟ್ಟಿಗೆ ಸೇರಿಸಿ ಕಾರ್ಮಿಕರಿಗೆ ಬರಬೇಕಾದ ಬಾಕಿ ಹಣವನ್ನು ಕೊಡಿಸಲು ಅಗತ್ಯ ಕ್ರಮ

ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ

ಜಿಲ್ಲೆಯ ಬಾಗೇಪಲ್ಲಿ ಪುರಸಭೆಯಲ್ಲಿ ವಾಹನ ಚಾಲನೆ ಮಾಡುತ್ತಿರುವ ಹೊರಗುತ್ತಿಗೆ ನೌಕರರಿಗೆ ಸರ್ಕಾರದ ನಿಯಮಾವಳಿಯಂತೆ ಕನಿಷ್ಠ ವೇತನವಾಗಲಿ ಪಿ.ಎಫ್ ಮತ್ತು ಇಎಸ್‌ಐ ಪಾವತಿ ಮಾಡದ ನೀಲಾದ್ರಿ ಎಂಟರ್ ಪ್ರೈಸಸ್ ಮತ್ತು ಸಂತೋಷ್ ಎಂಟರ್ ಪ್ರೈಸಸ್ ಕಂಪನಿಗಳನ್ನು ಕಪ್ಪುಪಟ್ಟಿಗೆ ಸೇರಿಸಿ ಕಾರ್ಮಿಕರಿಗೆ ಬರಬೇಕಾದ ಬಾಕಿ ಹಣವನ್ನು ಕೊಡಿಸಲು ಅಗತ್ಯ ಕ್ರಮ ಜರುಗಿಸಬೇಕು ಎಂದು ರಾಜ್ಯಾಧ್ಯಕ್ಷ ಎಂ.ಬಿ. ನಾಗಣ್ಣಗೌಡ ಜಿಲ್ಲಾಡಳಿತವನ್ನು ಆಗ್ರಹಿಸಿದರು.

ನಗರ ಹೊರವಲಯ ಜಿಲ್ಲಾಡಳಿತ ಭವನದ ಮುಂದೆ ನಗರಪಾಲಿಕೆ, ನಗರಸಭೆ ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಮನವಿ ಸಲ್ಲಿಕೆ ಮತ್ತು ಸಾಂಕೇತಿಕ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಸಫಾಯಿ ಕರ್ಮಚಾರಿಗಳ ಜಾಗೃತಿ ಸಮಿತಿಯಲ್ಲಿ ಪೌರಕಾರ್ಮಿಕರ ಪ್ರತಿನಿಧಿಯಾಗಿ ಸುರೇಶ್‌ಬಾಬು ಅವರನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ಆಗ್ರಹ ಮಾಡುತ್ತೇವೆ. ಒಟ್ಟಾರೆ ಜಿಲ್ಲೆಯಲ್ಲಿರುವ ಸ್ಥಳಿಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಾದ ಚಾಲಕರು, ಲೋಡರ್ಸ್‌, ವಾಲ್‌ಮನ್ಸ್ ಸೇರಿ ಎಲ್ಲರನ್ನೂ ಸರ್ಕಾರ ನೇರ ಪಾವತಿಗೆ ತರಬೇಕು. ಹೊರಗುತ್ತಿಗೆ ಪದ್ಧತಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಹೊರಗುತ್ತಿಗೆ ನೌಕರರಾಗಿ ಕನಿಷ್ಠ ವೇತನ ಪಡೆದು ಕರ್ತವ್ಯ ನಿರ್ವಹಿಸುತ್ತಿರುವವರು ಒಟ್ಟು 16 ಸಾವಿರ ಕಾರ್ಮಿಕರಿದ್ದು, ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ಜನ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರು ಮತ್ತು ಸ್ವಚ್ಛತೆ ವಿಭಾಗದಲ್ಲಿ ನಿರ್ವಹಿಸುತ್ತಿದ್ದಾರೆ. ಇವರನ್ನು ಕೂಡಲೇ ಗುತ್ತಿಗೆ ಪದ್ಧತಿಯಿಂದ ಕೈಬಿಟ್ಟು ಪೌರಕಾರ್ಮಿಕರ ರೀತಿ ನೇರವೇತನ ಪಾವತಿಗೆ ಒಳಪಡಿಸಬೇಕು ಮತ್ತು ನಮ್ಮ ವಿವಿಧ ಬೇಡಿಕೆಗಳ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಹೊರಗುತ್ತಿಗೆ ನೌಕರರ ಸಂಘಟನೆ ಜಿಲ್ಲಾಧ್ಯಕ್ಷ ಎಸ್. ಸುರೇಶ್‌ಬಾಬು, ಉಪಾಧ್ಯಕ್ಷ ಎಸ್.ಡಿ, ಲಕ್ಷ್ಮೀಪತಿ, ಪದಾಧಿಕಾರಿಗಳಾದ ಜಿ. ಆನಂದ್, ಗಂಗಯ್ಯ, ಆಲಿಸಾಬ್, ಪಿ.ಆರ್. ಶ್ರೀನಿವಾಸ್, ಜಿ.ನಾಗರಾಜ್, ಶಿವಕುಮಾರ್ ಬಿ.ಎನ್. ಚಾಲಕರಾದ ರಾಜಪ್ಪ, ನಾಗರಾಜ್, ಶಿವಕುಮಾರ್ ಎಂ.ಎನ್, ನರಸಿಂಹಮೂರ್ತಿ, ವೆಂಕಟೇಶಪ್ಪ, ಮಂಜುನಾಥ್, ರವಿಕುಮಾರ್ ಮತ್ತಿತರರು ಇದ್ದರು.

ಸಿಕೆಬಿ-1

ಜಿಲ್ಲಾಡಳಿತ ಭವನದ ಮುಂದೆ ಕರ್ನಾಟಕ ರಾಜ್ಯ ನಗರಪಾಲಿಕೆ ನಗರಸಭೆ ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇರಳಕ್ಕೆ ಸಾಗಿಸುತ್ತಿದ್ದ 19 ಗೋವುಗಳ ರಕ್ಷಣೆ
ಚನ್ನಗಿರಿಯಲ್ಲಿ ದಸ್ತಾವೇಜು ಬರಹಗಾರರ ಸಂಘ ಪ್ರತಿಭಟನೆ