ದೇಶ, ಜನರ ಹಿತಕ್ಕಾಗಿ ಮೋದಿ ರಾಜೀನಾಮೆಗೆ ಒತ್ತಾಯ

KannadaprabhaNewsNetwork |  
Published : May 29, 2026, 01:45 AM IST
15ಕೆಡಿವಿಜಿ3-ದಾವಣಗೆರೆಯಲ್ಲಿ ಶನಿವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಬೆಲೆ ಏರಿಕೆ, ವಿದೇಶ ವ್ಯವಹಾರ, ಆರ್ಥಿಕ ಕ್ಷೇತ್ರ ಒಳಗೊಂಡಂತೆ ಎಲ್ಲ ಕ್ಷೇತ್ರದಲ್ಲೂ ಸಂಪೂರ್ಣ ವಿಫಲವಾದ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಒಳಿತು ಮಾಡುವುದಿದ್ದರೆ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಒತ್ತಾಯಿಸಿದ್ದಾರೆ.

- ಪ್ರತಿ ಕ್ಷೇತ್ರದಲ್ಲೂ ವಿಫಲವಾದ ಮೋದಿ ಆಡಳಿತ, ರಾಜೀನಾಮೆ ಸೂಕ್ತ: ಡಿ.ಬಸವರಾಜ ಹೇಳಿಕೆ - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಬೆಲೆ ಏರಿಕೆ, ವಿದೇಶ ವ್ಯವಹಾರ, ಆರ್ಥಿಕ ಕ್ಷೇತ್ರ ಒಳಗೊಂಡಂತೆ ಎಲ್ಲ ಕ್ಷೇತ್ರದಲ್ಲೂ ಸಂಪೂರ್ಣ ವಿಫಲವಾದ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಒಳಿತು ಮಾಡುವುದಿದ್ದರೆ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಒತ್ತಾಯಿಸಿದ್ದಾರೆ.

ನಗರದಲ್ಲಿ ಇತ್ತೀಚೆಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೇಶದ ಜನರ ಹಿತದೃಷ್ಟಿಯಿಂದ ನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಮೋದಿಯವರು ಇದೇ ರೀತಿ ಅಧಿಕಾರದಲ್ಲಿ ಮುಂದುವರಿದರೆ ದೇಶಕ್ಕೆ ದೊಡ್ಡ ಗಂಡಾಂತರ ತಪ್ಪಿದ್ದಲ್ಲ ಎಂದರು.

ಮಧ್ಯ ಪ್ರಾಚ್ಯದಲ್ಲಿ ಯುದ್ಧ ಆರಂಭವಾಗಿ ತಿಂಗಳಾದರೂ ತೈಲ, ಅನಿಲ ಬೆಲೆ ಹೆಚ್ಚಳದ ಬಗ್ಗೆ ನರೇಂದ್ರ ಮೋದಿಯವರಿಗೆ ಗೊತ್ತಿರಲಿಲ್ಲ. ಆದರೆ, ಪಂಚ ರಾಜ್ಯಗಳ ಚುನಾವಣಾ ಪ್ರಚಾರದ ವೇಳೆಯೂ ಅದೆಲ್ಲಾ ನೆನಪಿಗೆ ಬರಲಿಲ್ಲ. ಐದೂ ರಾಜ್ಯಗಳ ಚುನಾವಣೆ ಮುಗಿದು, ಫಲಿತಾಂಶ ಬರುತ್ತಿದ್ದಂತೆ ಜ್ಞಾನೋದಯವಾಗಿ, ಪೆಟ್ರೋಲ್‌-ಡೀಸೆಲ್‌ ಬಳಕೆ ಕಡಿಮೆ ಮಾಡಿ ಎಂಬ ಹೇಳಿಕೆ ಜೊತೆಗೆ ಅದರ ದರ ಹೆಚ್ಚಿಸಿದ್ದಾರೆ ಎಂದು ಅವರು ಟೀಕಿಸಿದರು.

ಮಿತವ್ಯಯದ ಬಗ್ಗೆ ದೇಶ ವಾಸಿಗಳಿಗೆ ಉಪದೇಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಐದು ದೇಶಗಳ ವಿದೇಶ ಪ್ರವಾಸ ಕೈಗೊಂಡಿದ್ದು, ಇದಕ್ಕೆ ನೂರಾರು ಕೋಟಿ ರು. ಖರ್ಚು ಮಾಡುತ್ತಿದ್ದಾರೆ. ವಿದೇಶ ಪ್ರವಾಸ ಕೈಗೊಳ್ಳುವುದು ಅದಾನಿ ವ್ಯವಹಾರ ಸ್ಥಾಪನೆಗೆ ಹೊರತು, ದೇಶದ ಹಿತದೃಷ್ಟಿಯಿಂದ ಅಲ್ಲ. ಅದಾನಿ ಅಮೇರಿಕಾದ ಜೊತೆಗೆ ವ್ಯವಹಾರ ಸಂಬಂಧ ಹೊಂದಿರುವ ಕಾರಣಕ್ಕೆ ಮೋದಿ ಈಗ ಅಮೇರಿಕಾ ಹೇಳಿದಂತೆ ಕೇಳುತ್ತಿದ್ದಾರೆ ಎಂದು ದೂರಿದರು.

ಮೋದಿ ಸರ್ಕಾರದ ವಿದೇಶಾಂಗ ನೀತಿಗಳ ಪರಿಣಾಮವಾಗಿ ದೇಶ ಇಂದು ಸಂಕಷ್ಟಗಳನ್ನು ಅನುಭವಿಸುತ್ತಿದೆ. ನೆರೆಯ ದೇಶಗಳ ಜೊತೆಗೆ ಉತ್ತಮ ಸಂಬಂಧವನ್ನೇ ಹೊಂದಿಲ್ಲ. ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಜಗತ್ತಿನ ಮುಂದೆ ಭಾರತ ತಲೆ ತಗ್ಗಿಸುವಂತಾಗಿದೆ. ನರೇಂದ್ರ ಮೋದಿಯೆಂದರೆ ದುಬಾರಿ ಎನ್ನುವಂತೆ ತೈಲ, ಅನಿಲ ಬೆಲೆ ದಿನದಿನಕ್ಕೂ ಏರಿಕೆಯಾಗುತ್ತಿದ್ದು, ಜನಜೀವನಕ್ಕೆ ಒಂದಲ್ಲ ಒಂದು ರೀತಿ ಆರ್ಥಿಕ ಸಂಕಷ್ಟ ಎದುರಾಗುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ಇಂಟೆಕ್ ಅಧ್ಯಕ್ಷ ಕೆ.ಎಂ.ಮಂಜುನಾಥ, ಬಿ.ಎಚ್.ಉದಯಕುಮಾರ, ಡಿ.ಶಿವಕುಮಾರ, ಡಿ.ಕೇಶವ ನಾಯ್ಕ, ಬಿ.ಎಸ್.ಸುರೇಶ ಇತರರು ಇದ್ದರು.

- - -

(ಕೋಟ್‌) ಅಚ್ಚೇ ದಿನ್‌ ಅಂತಲೇ ಹೇಳಿಕೊಂಡೇ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಇರುವವರೆಗೂ ದೇಶಕ್ಕೆ ಅಚ್ಚೇ ದಿನ್ ಬರಲಿಕ್ಕೆ ಸಾಧ್ಯವೇ ಇಲ್ಲ. ಹಾಗಾಗಿ ಜನರ ಒಳ್ಳೆಯದು ಮಾಡಬೇಕೆಂಬ ಕನಿಷ್ಠ ಕಾಳಜಿಯೇನಾದರೂ ನರೇಂದ್ರ ಮೋದಿ ಅವರಿಗೆ ಇದ್ದರೆ ತಕ್ಷಣವೇ ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಉಪಕಾರ ಮಾಡಲಿ.

- ಡಿ.ಬಸವರಾಜ, ಪ್ರಧಾನ ಕಾರ್ಯದರ್ಶಿ, ಕೆಪಿಸಿಸಿ.

- - -

-15ಕೆಡಿವಿಜಿ3:

ದಾವಣಗೆರೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇಶಕ್ಕಾಗಿ ಜವಾಹರ್‌ ಲಾಲ್‌ ನೆಹರು ಕೊಡುಗೆ ಸ್ಮರಣೀಯ: ಡಾ.ಅಂಶುಮಂತ್‌
ತಾಳ್ಮೆ, ಸಮಯಪ್ರಜ್ಞೆ ಇಲ್ಲದಿದ್ದರೆ ಯಾವ ಸಾಧನೆಯೂ ಅಸಾಧ್ಯ: ಬಿ.ಸಿ.ಶಿವಕುಮಾರ್‌