ಕನ್ನಡಪ್ರಭ ವಾರ್ತೆ ಬೆಂಗಳೂರು
ರೈಲ್ವೆ ಟ್ರ್ಯಾಕ್ ಹಾಗೂ ನಿಲ್ದಾಣದ ನಡುವೆ ‘ಪಿಎಸ್ಡಿ’ ಕಾಂಪೌಂಡ್ನಂತಿರಲಿದ್ದು, ಮೆಟ್ರೋ ನಿಲ್ದಾಣಕ್ಕೆ ರೈಲು ಬಂದಾಗ ಪ್ರವೇಶ ದ್ವಾರದ ಬಳಿ ಬಾಗಿಲು ತೆರೆದುಕೊಳ್ಳಲಿವೆ. ಇಂತಹ ವ್ಯವಸ್ಥೆ ಅಳವಡಿಸಿದರೆ ಅವಘಡಗಳನ್ನು ತಪ್ಪಿಸಬಹುದಾಗಿದೆ. ಆದರೆ, ಈವರೆಗೆ ಯಾವ ನಿಲ್ದಾಣಗಳಲ್ಲೂ ಪಿಎಸ್ಡಿ ಅಳವಡಿಕೆಯಾಗಿಲ್ಲ. ನಗರದಲ್ಲಿ ನೇರಳೆ, ಹಸಿರು ಮಾರ್ಗ ಸೇರಿ ಒಟ್ಟೂ 73.81 ಕಿಲೋ ಮೀಟರ್ ಉದ್ದಕ್ಕೆ ಮೆಟ್ರೋ ಸಂಚರಿಸುತ್ತಿದ್ದು, ಒಟ್ಟು 66 ನಿಲ್ದಾಣಗಳಿವೆ. ಪ್ರಸ್ತುತ ನಮ್ಮ ಮೆಟ್ರೋ ನಿಲ್ದಾಣದ ಪ್ಲಾಟ್ಫಾರಂ ಹಳದಿ ಗೆರೆ ದಾಟದಂತೆ ನೋಡಿಕೊಳ್ಳಲು ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.
ಆರಂಭದಲ್ಲೇ ಮೆಟ್ರೋದ ಎಲ್ಲ ನಿಲ್ದಾಣಗಳಲ್ಲೂ ಪಿಎಸ್ಡಿ ಅಳವಡಿಸಬೇಕಿತ್ತು. ಆತ್ಮಹತ್ಯೆ ಯತ್ನ ಘಟನೆಗಳು ಹಲವರಿಗೆ ಪ್ರೇರಣೆ ಎನಿಸುವ ಅಪಾಯವಿದೆ. ಹೀಗಾಗಿ ತಕ್ಷಣ ಬಿಎಂಆರ್ಸಿಎಲ್ ಕ್ರಮ ವಹಿಸಬೇಕು. ಈಗ ಕೆಲವೊಮ್ಮೆ ಮೆಟ್ರೋ ರೈಲುಗಳು ಪ್ರಯಾಣಿಕರು ಪ್ರವೇಶಿಸಬೇಕಾದ ಹಳದಿ ಗೆರೆ ದಾಟಿ ಮುಂದಕ್ಕೆ ಹೋಗಿ ನಿಲ್ಲುತ್ತಾರೆ. ಆದರೆ, ಪಿಎಸ್ಡಿ ಅಳವಡಿಸಿದ ಬಳಿಕ ನಿಗದಿತ ಸ್ಥಳದಲ್ಲೇ ರೈಲು ನಿಲ್ಲಿಸಬೇಕಾಗುತ್ತದೆ. ಹಾಗಾಗಿ ಬಿಎಂಆರ್ಸಿಎಲ್ ಪಿಎಸ್ಡಿ ಅಳವಡಿಸಲು ಸಾರಿಗೆ ತಜ್ಞರು ಒತ್ತಾಯಿಸಿದ್ದಾರೆ.ದೆಹಲಿ, ಚೆನ್ನೈನ ಹಲವು ಮೆಟ್ರೋ ನಿಲ್ದಾಣದಲ್ಲಿ ಪಿಎಸ್ಡಿ ಅಳವಡಿಸಲಾಗಿದೆ. ಇಡೀ ರಾಜ್ಯದಲ್ಲಿ ಹುಬ್ಬಳ್ಳಿ-ಧಾರವಾಡ ನಡುವಿನ ಚಿಗರಿ ಮಾರ್ಗ (ಎಚ್ಡಿಬಿಆರ್ಟಿಎಸ್) ಮಾರ್ಗದ ನಿಲ್ದಾಣದಲ್ಲಿ ಮಾತ್ರ ಪಿಎಸ್ಡಿ ಅಳವಡಿಕೆಯಾಗಿದೆ. ಆದರೆ, ಪ್ರತಿನಿತ್ಯ ಸರಾಸರಿ 7 ಲಕ್ಷ ಜನ ಸಂಚರಿಸುವ ನಿಲ್ದಾಣಗಳಲ್ಲಿ ಈ ಭದ್ರತೆ ಇಲ್ಲ. ಮೆಜೆಸ್ಟಿಕ್ನಲ್ಲಿ ಪ್ರತಿನಿತ್ಯ ಸರಾಸರಿ 45 ಸಾವಿರ, ಇಂದಿರಾನಗರದಲ್ಲಿ 29 ಸಾವಿರ, ಎಂಜಿ ರಸ್ತೆಯ ನಿಲ್ದಾಣದಲ್ಲಿ 23 ಸಾವಿರ, ವಿಜಯನಗರ ಹಾಗೂ ಬೈಯಪ್ಪನಹಳ್ಳಿ ನಿಲ್ದಾಣವನ್ನು ಸರಾಸರಿ 22 ಸಾವಿರ ಪ್ರಯಾಣಿಕರು ಬಳಸುತ್ತಾರೆ. ಹೀಗಾಗಿ ತಕ್ಷಣ ಆದ್ಯತೆ ಮೇರೆಗೆ ಇಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಹೆಚ್ಚಾದ ಹಳಿಗೆ ಇಳಿಯುವ ಪ್ರಕರಣ
ಮುಂದಿನ ಏರ್ಪೋರ್ಟ್ ಮಾರ್ಗ (ನೀಲಿ) 2, 2ಎ, 2ಬಿ ಹಾಗೂ ಗೊಟ್ಟಿಗೆರೆ-ನಾಗವಾರ (ಗುಲಾಬಿ) ಮಾರ್ಗದ 12 ಸುರಂಗ ಮೆಟ್ರೋ ನಿಲ್ದಾಣದಲ್ಲಿ ಪಿಎಸ್ಡಿ ವ್ಯವಸ್ಥೆ ಜಾರಿಗೆ ಬಿಎಂಆರ್ಸಿಎಲ್ ಕಳೆದ ವರ್ಷ ಟೆಂಡರ್ ಕರೆದಿದೆ. 2025-2026ಕ್ಕೆ ಈ ಮಾರ್ಗದಲ್ಲಿ ಮೆಟ್ರೋ ರೈಲಿನ ಸಂಚಾರ ನಿರೀಕ್ಷೆ ಮಾಡಲಾಗಿದೆ. ಇದಕ್ಕಾಗಿ ಸುಮಾರು ₹10 ಕೋಟಿ ವೆಚ್ಚವನ್ನು ಅಂದಾಜಿಸಲಾಗಿದೆ. ಅಲ್ಲದೆ, ಇನ್ಫೋಸಿಸ್ ಸಹಯೋಗದಲ್ಲಿ ನಿರ್ಮಿಸಲಾಗುತ್ತಿರುವ ಎಲೆಕ್ಟ್ರಾನಿಕ್ ಸಿಟಿ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣದಲ್ಲೂ ಈ ಭದ್ರತಾ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.ಆರಂಭದಲ್ಲೇ ಮೆಟ್ರೋದ ಎಲ್ಲ ನಿಲ್ದಾಣಗಳಲ್ಲೂ ಪಿಎಸ್ಡಿ ಅಳವಡಿಸಬೇಕಿತ್ತು. ನೂರಾರು ಕೋಟಿ ವ್ಯಯಿಸಿ ನಿಲ್ದಾಣ ನಿರ್ಮಿಸುವಾಗ ಪ್ರಯಾಣಿಕರ ಭದ್ರತೆಗೆ ಯಾಕೆ ಕ್ರಮ ವಹಿಸಿಲ್ಲ? ಇನ್ನಾದರೂ ಎಲ್ಲೆಡೆ ಪಿಎಸ್ಡಿ ಅಳವಡಿಸಬೇಕು.
-ಯಶವಂತ ಚೌಹಾಣ್. ಮೆಟ್ರೋ ಪಿಆರ್ಒ