ಪರೀಕ್ಷೆ ಅಕ್ರಮ ಶಿಕ್ಷೆಗೆ ಆಗ್ರಹ

KannadaprabhaNewsNetwork |  
Published : Aug 09, 2024, 12:31 AM IST
ಚಿತ್ರದುರ್ಗ ಎರಡನೇ ಪುಟದ ಫ್ಯಾನಲ್ ಸಿಂಗಲ್ ಕಾಲಂ    | Kannada Prabha

ಸಾರಾಂಶ

Demand for punishment for examination illegality

ಚಿತ್ರದುರ್ಗ: ದಾವಣಗೆರೆ ವಿವಿ ಅಂತಿಮ ವರ್ಷದ ವಾಣಿಜ್ಯ ವಿಭಾಗದ ಆರನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಗಳ ಬದಲಿಗೆ ಸ್ಕೀಮ್ ಆಫ್ ವ್ಯಾಲ್ಯುವೇಷನ್ ಪತ್ರಿಕೆ ನೀಡಿದ್ದರಿಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದು ನ್ಯಾಯ ಒದಗಿಸುವಂತೆ ಎಬಿವಿಪಿ ಆಗ್ರಹಿಸಿದೆ. ಈ ಸಂಬಂಧ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಸಂಘಟನೆ, ಬೋರ್ಡ್ ಆಫ್ ಎಕ್ಸಾಮಿನೇಷನ್ ಅಧಿಕಾರಿ ಮತ್ತು ಸಿಬ್ಬಂದಿ ನಿರ್ಲಕ್ಷೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಹಾಗಾಗಿ, ಈ ನಿರ್ಲಕ್ಷತೆಗೆ ಕಾರಣ ಅಧಿಕಾರಿಗಳ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಎಬಿವಿಪಿ ನಗರ ಕಾರ್ಯದರ್ಶಿ ಗೋಪಿ, ಸಾಮಾಜಿಕ ಜಾಲತಾಣ ಚಿತ್ರಸ್ವಾಮಿ, ಕಾರ್ಯಕರ್ತರಾದ ಸಂಜಯ್, ಸುದೀಪ್, ರೇವಂತ, ಆಕಾಶ್, ಚಂದ್ರಶೇಖರ್, ತಿಪ್ಪೇಶ್, ರಂಗನಾಥ್ ಇತರರು ಮನವಿ ಸಲ್ಲಿಸುವ ವೇಳೆ ಉಪಸ್ಥಿತರಿದ್ದರು.

--------

ಫೋಟೋ: 8 ಸಿಟಿಡಿ 3

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾವೂರು ಶ್ರೀ ಗೋಪಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ಸಂಪನ್ನ
ಸಚಿವ ತಿಮ್ಮಾಪುರ ಬೆಂಬಲಿಸಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ