ಸಾರ್ವಜನಿಕ ಆಸ್ಪತ್ರೆಯ ಬಾಕಿಬಿಲ್‌ ಬಿಡುಗಡೆಗೆ ಆಗ್ರಹ

KannadaprabhaNewsNetwork |  
Published : Apr 04, 2025, 12:46 AM IST
ಶಾಸಕ ಜಗದೀಶ ಗುಡಗುಂಟಿ | Kannada Prabha

ಸಾರಾಂಶ

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಮಸ್ಯೆಗಳು ಹೆಚ್ಚಿದ್ದು, ಸರ್ಕಾರ ಈ ಬಗ್ಗೆ ಗಮನ ಹರಿಸಿ ಬಾಕಿ ಇರುವ ಬಿಲ್‌ಗಳನ್ನು ಪಾವತಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಆಸ್ಪತ್ರೆಯಲ್ಲಿ ಔಷಧಿಗಳ ಕೊರತೆ, ಪತ್ಯಾಹಾರದ ಕೊರತೆ ಆಗಿದೆ. ವಿದ್ಯುತ್‌ ಬಿಲ್ ಸಹ ಬಾಕಿ ಇದೆ. ಹಿರಿಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು. ಕೂಡಲೇ ಸಮರ್ಪಕ ಅನುದಾನ ಬಿಡುಗಡೆಗೊಳಿಸಿ ಎಲ್ಲ ಸೌಲಭ್ಯಗಳನ್ನು ವದಗಿಸಬೇಕು ಎಂದು ಶಾಸಕ ಜಗದೀಶ ಗುಡಗುಂಟಿ ಸರ್ಕಾರಕ್ಕೆ ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಜಮಖಂಡಿ

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಮಸ್ಯೆಗಳು ಹೆಚ್ಚಿದ್ದು, ಸರ್ಕಾರ ಈ ಬಗ್ಗೆ ಗಮನ ಹರಿಸಿ ಬಾಕಿ ಇರುವ ಬಿಲ್‌ಗಳನ್ನು ಪಾವತಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಆಸ್ಪತ್ರೆಯಲ್ಲಿ ಔಷಧಿಗಳ ಕೊರತೆ, ಪತ್ಯಾಹಾರದ ಕೊರತೆ ಆಗಿದೆ. ವಿದ್ಯುತ್‌ ಬಿಲ್ ಸಹ ಬಾಕಿ ಇದೆ. ಹಿರಿಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು. ಕೂಡಲೇ ಸಮರ್ಪಕ ಅನುದಾನ ಬಿಡುಗಡೆಗೊಳಿಸಿ ಎಲ್ಲ ಸೌಲಭ್ಯಗಳನ್ನು ವದಗಿಸಬೇಕು ಎಂದು ಶಾಸಕ ಜಗದೀಶ ಗುಡಗುಂಟಿ ಸರ್ಕಾರಕ್ಕೆ ಆಗ್ರಹಿಸಿದರು.

ಗುರುವಾರ ಸಾರ್ವನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಸರ್ಕಾರ ನೀಡುತ್ತಿದ್ದ ಪಥ್ಯಾಹಾರ ಸ್ಥಗಿತಗೊಂಡಿದೆ. ಆಹಾರ ಒದಗಿಸುತ್ತಿದ್ದ ಗುತ್ತಿಗೆದಾರರಿಗೆ ಕಳೆದ 15 ತಿಂಗಳಿನಿಂದ ಬಿಲ್‌ ಪಾವತಿಸಲಾಗಿಲ್ಲ. ಜೊತೆಗೆ ಗುತ್ತಿಗೆಯ ಅವಧಿ ಮುಕ್ತಾಯವಾಗಿದ್ದರಿಂದ ರೋಗಿಗಳಿಗೆ ಒದಗಿಸಬೇಕಾದ ಆಹಾರ ವಿತರಣೆ ನಡೆಯುತ್ತಿಲ್ಲ. ಕಳೆದ 15 ತಿಂಗಳಿನಿಂದ ಪಥ್ಯಾಹಾರ ವಿತರಿಸುತ್ತಿದ್ದ ಗುತ್ತಿಗೆದಾರರಿಗೆ ₹1,13,46,072 ಗಳನ್ನು ಪಾವತಿಸಬೇಕಿದೆ. ಸದ್ಯ ಅವಧಿಯು ಮುಕ್ತಾಯವಾಗಿದ್ದು, ಸರ್ಕಾರ ಪುನಃ ಆದೇಶ ಹೊರಡಿಸಿದ ನಂತರ ಆಹಾರ ವಿತರಣೆ ನಡೆಸಬಹುದೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರಿಂದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ತೊಂದರೆಯಾಗಿದೆ. ಶಾಸಕರು, ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕೂಡಲೇ ಗುತ್ತಿಗೆದಾರರ ಹಣ ಬಿಡುಗಡೆ ಮಾಡಬೇಕು ಹಾಗೂ ರೋಗಿಗಳಿಗೆ ತೊಂದರೆಯಾಗದಂತೆ ಆಹಾರದ ವ್ಯವಸ್ಥೆ ಮಾಡಬೇಕು ಎಂದರು.ಕಳೆದ ವರ್ಷ ಜನವರಿಯಿಂದ ಮಾರ್ಚ್‌ 2025 ರವರೆಗಿನ ಬಿಲ್‌ ಪಾವತಿಯಾಗಿಲ್ಲ. ಆಸ್ಪತ್ರೆಯಲ್ಲಿ ಶೇ.40ರಷ್ಟು ಔಷಧಿಗಳ ಪೂರೈಕೆ ನಡೆಯುತ್ತಿದೆ. ಉಳಿದ ಔಷಧಿಯನ್ನು ಹೊರಗಿನಿಂದ ತರಬೇಕಾಗುತ್ತದೆಂಬ ದೂರುಗಳು ಕೇಳಿ ಬರುತ್ತಿದ್ದು, ಅಧಿಕಾರಿಗಳು ಸೂಕ್ತಕ್ರಮ ಜರುಗಿಸಬೇಕು. ಸರ್ಕಾರಕ್ಕೆ ಸಮಸ್ಯೆಯ ಕುರಿತು ಮಾಹಿತಿ ನೀಡಬೇಕು ಎಂದು ತಿಳಿಸಿದರು. ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಯಾವುದೇ ಮಾಹಿತಿ ನೀಡುತ್ತಿಲ್ಲ. ಬಡ ರೋಗಿಗಳೇ ಹೆಚ್ಚಾಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಅಂತವರಿಗೆ ಅನುಕೂಲ ಕಲ್ಪಿಸಿಕೊಡಬೇಕು.

-ಜಗದೀಶ ಗುಡಗುಂಟಿ, ಶಾಸಕರು.

PREV

Recommended Stories

ರಾಹುಲ್‌ ಗಾಂಧಿ ಧರಣಿಗೆ 4500 ಪೊಲೀಸರ ಭದ್ರತೆ
ಹಳಿತಪ್ಪಿದ ಬೆಂಗಳೂರು ಉಪನಗರ ರೈಲು ಯೋಜನೆ : ಕೆ-ರೈಡ್ ಜತೆಗಿನ ಎಲ್‌ ಆ್ಯಂಡ್‌ ಟಿ ಗುತ್ತಿಗೆ ರದ್ದು