ಭೀಮಾನದಿಗೆ ನೀರು ಬಿಡುಗಡೆಗೆ ಆಗ್ರಹ: ಜು.20ರಂದು ಹೆದ್ದಾರಿ ತಡೆ ಎಚ್ಚರಿಕೆ

KannadaprabhaNewsNetwork |  
Published : Jul 19, 2026, 02:30 AM IST
 | Kannada Prabha

ಸಾರಾಂಶ

indefinite,Circle,demanding immediate, release, water

-ನೀರು ಬಿಡುಗಡೆಗೆ ಆಗ್ರಹಿಸಿ ಅನಿರ್ದಿಷ್ಟ ಧರಣಿ ನಾಲ್ಕನೇ ದಿನಕ್ಕೆ

---

ಕನ್ನಡಪ್ರಭ ವಾರ್ತೆ ಅಫಜಲಪುರ

ಭೀಮಾನದಿಗೆ ತಕ್ಷಣ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿ ಅಂಬೇಡ್ಕರ್ ವೃತ್ತದಲ್ಲಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರ ತಕ್ಷಣ ಸ್ಪಂದಿಸದಿದ್ದರೆ ಸೋಮವಾರ ರಾಜ್ಯ ಹೆದ್ದಾರಿ ತಡೆದು ಉಗ್ರ ಪ್ರತಿಭಟನೆ ನಡೆಸುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡ ರಮೇಶ ಶೆಟ್ಟಿ, ಭೀಮರಾವ ಗೌರ, ಶ್ರೀಮಂತ ಬಿರಾದಾರ, ರಮೇಶ ಪಾಟೀಲ, ಶಾಂತು ಅಂಜುಟಗಿ, ಗುರು ಚಾಂದಕವಟೆ ಮಾತನಾಡಿ, ನಾರಾಯಣಪುರ, ಜಲಾಶಯದಿಂದ 1.5 ಟಿಎಂಸಿ ನೀರು ಬಿಡುಗಡೆ ಮಾಡಿದರೂ ಅದು ಭೀಮಾನದಿಗೆ ತಲುಪುವ ಭರವಸೆ ಇಲ್ಲ. ಕಾವೇರಿ ನದಿಗೆ ನೀಡುವಷ್ಟೇ ಆದ್ಯತೆಯನ್ನು ಭೀಮಾನದಿಗೂ ನೀಡಬೇಕು. ಅಭಿವೃದ್ಧಿ ಎಂದರೆ ನೀರು, ವಿದ್ಯುತ್ ಹಾಗೂ ರೈತರಿಗೆ ನ್ಯಾಯಯುತ ಬೆಂಬಲ ಬೆಲೆ ಒದಗಿಸುವುದಾಗಿದೆ. ಉಜನಿ ಅಣೆಕಟ್ಟಿನಿಂದ ಭೀಮಾನದಿಗೆ ನೀರು ಬಿಡುಗಡೆ ಕುರಿತು ಸರ್ಕಾರ ತಕ್ಷಣ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು. ದೇವಲ

ಗಾಣಗಾಪುರ, ಘತ್ತರಗಾ ಸೇರಿದಂತೆ ಭೀಮಾನದಿ ತೀರದ ಗ್ರಾಮಗಳಲ್ಲಿ ಕುಡಿವ ನೀರು ಹಾಗೂ ಭಕ್ತರ ಸ್ನಾನಕ್ಕೆ ತೀವ್ರ ನೀರಿನ ಕೊರತೆ ಉಂಟಾಗಿದ್ದು, ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷ ಎರಡಕ್ಕೂ ರೈತರ ಸಮಸ್ಯೆಗಳ ಬಗ್ಗೆ ಕಾಳಜಿ ಇಲ್ಲ. ಭಾನುವಾರದೊಳಗೆ ಭೀಮಾನದಿಗೆ ನೀರು ಹರಿಸದಿದ್ದರೆ ಜುಲೈ 20ರಂದು ರಾಜ್ಯ ಹೆದ್ದಾರಿ ತಡೆದು ಉಗ್ರ ಪ್ರತಿಭಟನೆ ನಡೆಸುವುದಾಗಿ ರೈತ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಅಣ್ಣರಾವ್‌ ಪಾಟೀಲ, ರಮೇಶ ಶೆಟ್ಟಿ, ಭೀಮರಾವ ಗೌರ, ಶ್ರೀಮಂತ ಬಿರಾದಾರ, ರಮೇಶ ಪಾಟೀಲ, ಶಾಂತು ಅಂಜುಟಗಿ ಗುರು ಚಾಂದಕವಟೆ ಗುರು ಹುಲ್ಲೂರ, ನೂರಅಹ್ಮದ್‌ ಭಾಗವಾನ, ಅರ್ಜುನ ಸೋಮಜಾಳ, ಶ್ರೀಕಾಂತ ದಿವಾಣಜಿ,ಮಹಾಂತೇಶ ಪಾಟೀಲ, ಚಂದು ಬನ್ನೆಟ್ಟಿ, ಮಹಿಬೂಬ ಸಿಧನೂರ ಇದ್ದರು

ಫೋಟೊ

ಅಫ್ಜಲಪುರದಲ್ಲಿ ರೈತ ಮುಖಂಡರು ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಅಣ್ಣರಾವ್‌ ಪಾಟೀಲ, ರಮೇಶ ಶೆಟ್ಟಿ, ಭೀಮರಾವ ಗೌರ, ಶ್ರೀಮಂತ ಬಿರಾದಾರ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭತ್ತದ ಬಿತ್ತನೆಯಿಂದ ಹಿಡಿದು ಕಟಾವಿನವರೆಗೂ ಯಂತ್ರದ ಮೂಲಕ ಕೃಷಿ ಅನುಷ್ಠಾನ: ರವಿ
ಜೆಜೆಎಂ ಯೋಜನೆ: ಯಾವುದೇ ಮನೆಗೂ ಸಮರ್ಪಕ ನೀರು ಬಂದಿಲ್ಲ