ಶುದ್ಧ ಕುಡಿವ ನೀರಿನ ಘಟಕ ರಿಪೇರಿಗೆ ಒತ್ತಾಯ

KannadaprabhaNewsNetwork |  
Published : Apr 09, 2026, 02:00 AM IST
ಚಿತ್ರ 2 | Kannada Prabha

ಸಾರಾಂಶ

ಹಿರಿಯೂರು ತಾಲೂಕಿನಲ್ಲಿ ಕೆಟ್ಟು ಹೋಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಮಾಡಿಸಿ ಎಂದು ರೈತ ಸಂಘದ ವತಿಯಿಂದ ತಾಲೂಕು ಪಂಚಾಯ್ತಿ ಮುಂದೆ ಪ್ರತಿಭಟನೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಹಿರಿಯೂರು

ತಾಲೂಕಿನಲ್ಲಿ ಶುದ್ಧ ಕುಡಿಯುವ ನೀರಿನ ಬಹಳಷ್ಟು ಘಟಕಗಳು ಕೆಟ್ಟು ಹೋಗಿದ್ದು ಅವುಗಳನ್ನು ರಿಪೇರಿ ಮಾಡಿಸದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಗರದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ಉದ್ದೇಶಿಸಿ ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಮಾತನಾಡಿ, ಹಿರಿಯೂರು ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ಹೋಗಿದ್ದು ಮೂರ್ನಾಲ್ಕು ವರ್ಷವಾದರೂ ಅವುಗಳನ್ನು ರಿಪೇರಿ ಮಾಡಿಲ್ಲ. ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ಕೊಡಲು ಅಧಿಕಾರಿಗಳು ವಿಫಲವಾಗಿದ್ದಾರೆ. ಜಲಜೀವನ್ ಯೋಜನೆ ಅಡಿಯಲ್ಲಿ ಅನೇಕ ಗ್ರಾಮಗಳಲ್ಲಿ ಕಳಪೆ ಕಾಮಗಾರಿ ನಡೆಸಲಾಗಿದೆ. ಆದ್ದರಿಂದ ಪ್ರತಿ ಗ್ರಾಮದಲ್ಲೂ ರೈತರ ಸಮ್ಮುಖದಲ್ಲಿ ಕಾಮಗಾರಿ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಮತ್ತು ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಬೇಕು ಎಂದು ಒತ್ತಾಯಿಸಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ಪ್ರಮೋದ್ ಮಾತನಾಡಿ, ಇನ್ನೂ ಎರಡ್ಮೂರು ದಿನದ ಒಳಗಾಗಿ ತಾಲೂಕಿನ ಎಲ್ಲಾ ಘಟಕಗಳ ಸಂಪೂರ್ಣ ಮಾಹಿತಿ ಪಡೆದು ಕೆಟ್ಟಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಮಾಡಿಸಲಾಗುವುದು ಎಂದರು.

ರೈತ ಸಂಘದ ತಾಲೂಕು ಅಧ್ಯಕ್ಷ ಬಳಗಟ್ಟೆ ವೆಂಕಟೇಶ್ ಮಾತನಾಡಿ, ಒಂದು ವಾರದ ಒಳಗಾಗಿ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಮಾಡಿಸದಿದ್ದರೆ ಜಿಲ್ಲಾ ಪಂಚಾಯಿತಿ ಮುಂಭಾಗದಲ್ಲಿ ಚಳುವಳಿ ಹಮ್ಮಿಕೊಳ್ಳಲಾಗುವುದು ಎಂದರು.

ಈ ವೇಳೆ ಆಲೂರು ಸಿದ್ದರಾಮಣ್ಣ, ಸಣ್ಣಈರಪ್ಪ, ಅರಳಿಕೆರೆ ತಿಪ್ಪೇಸ್ವಾಮಿ, ಕನ್ಯಪ್ಪ, ಈರಣ್ಣ, ವೀರಣ್ಣ ಗೌಡ, ಆರ್‌.ಕೆ.ಗೌಡ, ಹೊಸಕೆರೆ ಜಯಣ್ಣ, ಜಗದೀಶ್, ತಿಮ್ಮಯ್ಯ, ಚಂದ್ರಪ್ಪ, ರಾಜಪ್ಪ, ರಾಜಕುಮಾರ್ ಮುಂತಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಂಬದಿ ರಾಜಕೀಯ ಬಿಟ್ಟು ಚುನಾವಣೆ ನಡೆಸಲಿ: ಹಾರೋಹಳ್ಳಿ ಕೃಷ್ಣ
150 ವಸಂತ ಪೂರೈಸಿರುವ ಸರ್ಕಾರಿ ಶಾಲೆ ಬಲವರ್ಧನೆ ಮಾಡಿ: ಕೆ.ಆರ್.ಶ್ರೀನಿವಾಸ್