ಕನ್ನಡಪ್ರಭ ವಾರ್ತೆ ಮೈಸೂರು
ಅಕ್ರಮ ನಿವೇಶನ ಹಂಚಿಕೆ ಮತ್ತು ಭೂದರೋಡೆ ನಡೆದಿದೆ. ಈ ಸಂಬಂಧ ಕೂಡಲೇ ಸರ್ಕಾರ ತನಿಖಾ ತಂಡ ರಚಿಸಿ ಕ್ರಮ ಕೈಗೊಳ್ಳಬೇಕು. ಅಲ್ಲದೆ, ತಪ್ಪಿತಸ್ಥರನ್ನು ಜೈಲಿಗಟ್ಟಬೇಕು. ಇಲ್ಲದಿದ್ದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸುವುದಾಗಿ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.
ಈ ಹಗರಣ ಸಂಬಂಧ ಜಿಲ್ಲಾಧಿಕಾರಿ ಹಾಗೂ ಸರ್ಕಾರದ ಅಧಿಕಾರಿಗಳು ತನಿಖೆ ನಡೆಸದಂತೆ ಕಾಣದ ಕೈಗಳು ತಡೆಯುತ್ತಿವೆ. ಹೀಗಾಗಿ ಇದರ ಜವಾಬ್ದಾರಿ ಹೊತ್ತ ಸಚಿವ ಬೈರತಿ ಸುರೇಶ್ ರಾಜೀನಾಮ ನೀಡಬೇಕು. ತಪ್ಪಿದರೆ ಮುಖ್ಯಮಂತ್ರಿಗಳೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.ಎಂಡಿಎಯಲ್ಲಿ ಸಾವಿರಾರು ಕೋಟಿ ರೂ.ಗಳ ಹಗರಣದ ವಿರುದ್ದ ಪಾರದರ್ಶಕ ತನಿಖೆ ನಡೆಸಬೇಕು. ಅದನ್ನು ಬಿಟ್ಟು ಪ್ರಾಮಾಣಿಕವಾಗಿ ತನಿಖೆ ನಡೆಸುವ ಅಧಿಕಾರಿಗಳನ್ನು ಬೆದರಿಸುವ ಕೆಲಸ ಮಾಡಬಾರದು. ಅಲ್ಲದೆ, ಶೇ. 50ರ ಅನುಪಾತದಲ್ಲಿ ಅಕ್ರಮ ನಿವೇಶನಗಳ ಫಲಾನುಭವಿಗಳ ಪಟ್ಟಿ ತಯಾರಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.
ನಂತರ, ಈ ರೀತಿ ನಿವೇಶನ ಪಡೆದವರು ಸ್ವಯಂ ಪ್ರೇರಿತರಾಗಿ ನಿವೇಶನ ಹಿಂದಿರುಗಿಸಲು ಅವಕಾಶ ನೀಡಬೇಕು. ಈ ಅನುಪಾತದಡಿ ನಿರ್ದಿಷ್ಟ ಅವಧಿ ನಿಗದಿಪಡಿಸಿ ಮುಟ್ಟುಗೋಲು ಹಾಕಿಕೊಳ್ಳಬೇಕು. ತಪ್ಪಿದರೆ ಅಕ್ರಮ ನಿವೇಶನ ಪಡೆದವರ ಮೇಲೂ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದರು.