ಬಸ್ಸುಗಳಲ್ಲಿ ಯುಪಿಐ ಪಾವತಿ ಸಮಸ್ಯೆ ಪರಿಹಾರ ಆಗ್ರಹ

KannadaprabhaNewsNetwork |  
Published : Jun 26, 2026, 03:00 AM IST
ಚಿತ್ರ : 25ಎಂಡಿಕೆ2 : ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.  | Kannada Prabha

ಸಾರಾಂಶ

ಪೊನ್ನಂಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯಸೌಧದಲ್ಲಿ ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ

ಪೊನ್ನಂಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯಸೌಧದಲ್ಲಿ ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.ಶಕ್ತಿ ಯೋಜನೆ:

ಶಕ್ತಿ ಯೋಜನೆಯಿಂದ ಕೆಲಸ ಮಾಡುವ ಮಹಿಳೆಯರಿಗೆ ಹೆಚ್ಚು ಅನುಕೂಲವಾಗಿದ್ದು, ಗೋಣಿಕೊಪ್ಪದಿಂದ- ಮೈಸೂರು, ಬೆಂಗಳೂರು ಮಾರ್ಗವಾಗಿ ಚಲಿಸುವ ಬಸ್ಸುಗಳ ಸಂಖ್ಯೆಯನ್ನು ರಜಾ ದಿನಗಳಲ್ಲಿ ಹೆಚ್ಚುವರಿ ಮಾಡಿ, ಸಾರ್ವಜನಿಕರು ರಜಾ ದಿನಗಳಲ್ಲಿ ಈ ಮಾರ್ಗವಾಗಿ ಹೆಚ್ಚು ಪ್ರಯಾಣಿಸುತ್ತಾರೆ. ನೂಕು-ನುಗ್ಗಲುಗಳಂತಹ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದು ಕೂಡಲೇ ಹೆಚ್ಚುವರಿ ಬಸ್ಸುಗಳನ್ನು ನಿಯೋಜಿಸಿ ಸಮಸ್ಯೆ ಬಗೆಹರಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಬಸ್ಸುಗಳಲ್ಲಿ ಟಿಕೇಟ್ ಪಡೆಯಲು ಪೋನ್ ಪೇ ಮಾತ್ರ ಬಳಕೆಯಲಿದ್ದು, ಗೂಗಲ್ ಪೇ ತಾಂತ್ರಿಕ ಸಮಸ್ಯೆ ಎಂದು ಬರುತ್ತಿದ್ದು ಈ ಸಮಸ್ಯೆ ಬಗೆಹರಿಸಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವ್ಯವಸ್ಥೆಯನ್ನು ಕಲ್ಪಿಸಲು ತಿಳಿಸಲಾಯಿತು.ಯುವನಿಧಿ:

ಪೊನ್ನಂಪೇಟೆ ತಾಲೂಕಿನಲ್ಲಿ ಡಿಪ್ಲೋಮ ಹಾಗೂ ಐ.ಟಿ.ಐ.ಕಾಲೇಜುಗಳಿದ್ದು ಇಂತಹ ವಿದ್ಯಾರ್ಥಿಗಳನ್ನು ಹೆಚ್ಚು ನೊಂದಣಿ ಮಾಡಿಸಿ. ಇಲಾಖೆಯಿಂದ ಹೆಚ್ಚಿನ ಪ್ರಚಾರ ಮಾಡಬೇಕು, ವಿದ್ಯಾರ್ಥಿಗಳಿಗೆ ಈ ಯೋಜನೆಯ ಸದುಪಯೋಗವಾಗಬೇಕು. ಅದ್ದರಿಂದ ತಾಲೂಕಿನ ವ್ಯಾಪ್ತಿಯಲ್ಲಿ ಉದ್ಯೋಗ ಮೇಳ ಕೈಗೊಂಡು ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕಿಸಿಕೊಡುವಲ್ಲಿ ಸಹಕರಿಸಿ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್ ತಿಳಿಸಿದರು.ಅನ್ನಭಾಗ್ಯ:

ನ್ಯಾಯಬೆಲೆ ಅಂಗಡಿಗಳಿಗೆ ಅಕ್ಕಿಯನ್ನು ತಿಂಗಳಲ್ಲಿ ಬೇಗ ಕಳುಹಿಸಿ 15 ರಿಂದ 20 ದಿನಗಳ ಒಳಗಾಗಿ ಅಕ್ಕಿ ಬರುವ ರೀತಿ ನೋಡಿಕೊಳ್ಳಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಹೆಚ್ಚಿನ ಹಣ ಪಡೆಯುತ್ತಿದ್ದಾರೆ ಎಂಬ ದೂರು ಕೇಳಿಬರುತ್ತಿದ್ದು, ಈ ಸಂಬಂಧ ಗಮನಹರಿಸಿ ಇಂತಹ ಪ್ರಕರಣಗಳು ಆಗದಂತೆ ತಡೆಗಟ್ಟಲು ಅಧ್ಯಕ್ಷರು ಸೂಚಿಸಿದರು. ಎಸ್.ಸಿ. ಹಾಗೂ ಎಸ್.ಟಿ ಸಮುದಾಯದವರಿಗೆ ಹೊಸ ನ್ಯಾಯಬೆಲೆ ಅಂಗಡಿ ಆರಂಭಕ್ಕೆ ಅವಕಾಶವಿದ್ದು ಇದರ ಸದುಪಯೋಗಪಡಿಸಿಕೊಳ್ಳುವಂತೆ ಸಭೆಯಲ್ಲಿ ತಿಳಿಸಲಾಯಿತು. ಗೃಹಲಕ್ಷ್ಮಿ:

ಮಾರ್ಚ್ ತಿಂಗಳ ಹಣ ಜಮೆಯಾಗದ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಂಬಂಧಪಟ್ಟ ಅಧಿಕಾರಿಗಳು ಉತ್ತರಿಸಿ ಏಪ್ರಿಲ್ ತಿಂಗಳ ಹಣವು ಫಲಾನುಭವಿಗಳ ಖಾತೆಗೆ ಜಮೆಯಾಗಿದ್ದು ಅದರಲ್ಲಿ ಪೂರ್ತಿಯಾಗಿ ಎಲ್ಲಾ ಫಲಾನುಭವಿಗಳಿಗೆ ಹಣ ಜಮೆಯಾಗಿಲ್ಲ, ಈ ಕುರಿತು ರಾಜ್ಯ ತಂಡದ ಗಮನಕ್ಕೆ ತರಲಾಗಿದ್ದು ಕೆಲವು ತಾಂತ್ರಿಕ ಸಮಸ್ಯೆಗಳಿಂದ ಹಾಗೂ ಮರಣ ಹೊಂದಿದ ಫಲಾನುಭವಿಗಳಿಗೂ ಸಹ ಹಣ ಜಮೆಯಾಗುತ್ತಿರುವುದು ಕಂಡುಬಂದಿದ್ದು ಮುಂದಿನ ದಿನಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಉತ್ತರಿಸಿದರು.ಗೃಹಜ್ಯೋತಿ:

ಈಗಾಗಲೇ ಶೇ.98 ರಷ್ಟು ಪ್ರಗತಿಯಾಗಿದ್ದು, ಹೊಸದಾಗಿ ಗೃಹಜ್ಯೋತಿಗೆ ಅರ್ಜಿ ಸಲ್ಲಿಸಲು ಹತ್ತಿರದ ಗ್ರಾಮ ಒನ್ ಸೆಂಟರ್‌ಗೆ ಭೇಟಿ ನೀಡಲು ಸಭೆಯಲ್ಲಿ ತಿಳಿಸಲಾಯಿತು. ಮಳೆಗಾಲ ಪ್ರಾರಂಭವಾಗಿದ್ದು ತಾಲೂಕಿನ ಕೆಲವು ಕಡೆ ಕಬ್ಬಿಣದ ಪೋಲ್ (ಕಬ್ಬಿಣದ ಕಂಬ) ಗಳಿದ್ದು ಬದಲಾಯಿಸಲು ಸೆಸ್ಕ್ ಅಧಿಕಾರಿಗಳಿಗೆ ಸೂಚಿಸಲಾಯಿತು.ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ವಿರಾಜಪೇಟೆ ಸಹಾಯಕ ಲೆಕ್ಕಾಧಿಕಾರಿಗಳಾದ ಗಣೇಶ್ ಕುಮಾರ್, ಗ್ಯಾರಂಟಿ ಯೋಜನೆಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಸ್ತೂರ್ಬಾ ಆಸ್ಪತ್ರೆಯಲ್ಲಿ ಬಿಎಚ್‌ಐಎಂ ಘಟಕ ಉದ್ಘಾಟನೆ
ಕುಶಾಲನಗರ: ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಪ್ರಗತಿ ಪರಿಶೀಲನೆ