ಜೈನ ಅಭಿವೃದ್ದಿ ನಿಗಮ ಸ್ಥಾಪಿಸಲು ಮನವಿ

KannadaprabhaNewsNetwork |  
Published : Feb 05, 2025, 12:32 AM IST
37 | Kannada Prabha

ಸಾರಾಂಶ

ಬೆಂಗಳೂರಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ನಡೆದ ಮತೀಯ ಅಲ್ಪಸಂಖ್ಯಾತರ ಪ್ರತಿನಿಧಿಗಳ ಬಜೆಟ್ ಮುನ್ನಾ ಸಮಾಲೋಚನಾ ಸಭೆಯಲ್ಲಿ ಈ ಮನವಿ

ಕನ್ನಡಪ್ರಭ ವಾರ್ತೆ ಮೈಸೂರು

ಜೈನ ಅಭಿವೃದ್ಧಿ ನಿಗಮ ಸ್ಥಾಪನೆ, ಜೈನ ಬಸದಿಗಳ ಜೀರ್ಣೋದ್ಧಾರಕ್ಕೆ 50 ಕೋಟಿ ಅನುದಾನ, ಜೈನರಿಗೆ ಪ್ರತ್ಯೇಕ ಸ್ಮಶಾನ ಭೂಮಿ ಮಂಜೂರಾತಿ ಇತ್ಯಾದಿ ಬೇಡಿಕೆಗಳ ಮನವಿಯನ್ನು ಜೈನ ಮುಖಂಡರು ವಸತಿ, ಅಲ್ಪಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಸಲ್ಲಿಸಿದ್ದಾರೆ.

ಬೆಂಗಳೂರಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ನಡೆದ ಮತೀಯ ಅಲ್ಪಸಂಖ್ಯಾತರ ಪ್ರತಿನಿಧಿಗಳ ಬಜೆಟ್ ಮುನ್ನಾ ಸಮಾಲೋಚನಾ ಸಭೆಯಲ್ಲಿ ಈ ಮನವಿಯನ್ನು ಸಚಿವರಿಗೆ ನೀಡಿದ್ದಾರೆ. ಈ ವೇಳೆ ಜೀತೊ ಮೈಸೂರು ವಲಯದ ಅಧ್ಯಕ್ಷ ವಿನೋದ್ ಬಾಕ್ಲಿವಾಲ್, ಅಲ್ಪಸಂಖ್ಯಾತ ಘಟಕದ ಸಂಚಾಲಕ ಸುರೇಶ್ ಕುಮಾರ್ ಜೈನ್, ಕರ್ನಾಟಕ ಜೈನ ಅಸೋಸಿಯೇಷನ್ ಉಪಾಧ್ಯಕ್ಷರಾದ ರಾಜ್ ಕೀರ್ತಿ, ಶೀತಲ್ ಪಾಟೀಲ, ಪ್ರಧಾನ ಕಾರ್ಯದರ್ಶಿ ಆಶಾ ಪ್ರಭು, ಸದಸ್ಯರಾದ ಪ್ರಕಾಶ್, ಉತ್ತಮ ಪಾಟೀಲ್, ಕರ್ನಾಟಕ ತೀರ್ಥಕ್ಷೇತ್ರ ಸಮಿತಿಯ ಉಪಾಧ್ಯಕ್ಷ ಅರುಣ್ ಯಲಗುದ್ರಿ, ಸದಸ್ಯ ಉತ್ತಮ್ ಪಾಟೀಲ್ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!