ವೈಜ್ಞಾನಿಕ ಅಕಾಡೆಮಿ ಸ್ಥಾಪನೆಗೆ ಒತ್ತಾಯ

KannadaprabhaNewsNetwork |  
Published : Feb 07, 2024, 01:47 AM IST
6ಕೆಪಿಎಲ್21 ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಕೊಪ್ಪಳ ಜಿಲ್ಲಾ ಘಟಕ  ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳವಾರ ಮನವಿ ಸಲ್ಲಿಸಿತು. | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಹುಲಿಕಲ್ ನಟರಾಜ್ ನೇತೃತ್ವದಲ್ಲಿ ಹಲವು ವರ್ಷಗಳಿಂದ ಮೌಢ್ಯದ ಕುರಿತು ರಾಜ್ಯದ ಜನರಲ್ಲಿ ಜಾಗೃತಿ ಮೂಡಿ ಸುತ್ತ ಬಂದಿದೆ. ಹಲವಾರು ಕಾರ್ಯಕ್ರಮ ಹಮ್ಮಿಕೊಂಡು ಮೌಢ್ಯದಲ್ಲಿರುವ ಜನರನ್ನು ಮುಖ್ಯ ವಾಹಿನಿಯ ತರುವಲ್ಲಿ ಪರಿಷತ್ತು ಶ್ರಮಿಸುತ್ತಿದೆ

ಕೊಪ್ಪಳ: ಜನರಲ್ಲಿರುವ ಮೌಢ್ಯದ ವಿರುದ್ಧ ಜಾಗೃತಿ ಮೂಡಿಸಿ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ವೈಜ್ಞಾನಿಕ ಅಕಾಡೆಮಿ ಸ್ಥಾಪನೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಕೊಪ್ಪಳ ಜಿಲ್ಲಾ ಘಟಕ ಒತ್ತಾಯಿಸಿದೆ.

ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳವಾರ ಮನವಿ ಸಲ್ಲಿಸಿ ಆಗ್ರಹಿಸಲಾಯಿತು.

ಪರಿಷತ್ತಿನ ಜಿಲ್ಲಾಧ್ಯಕ್ಷ ಸಿದ್ದಲಿಂಗೇಶ್ವರ ಪೂಲಬಾವಿ ಮಾತನಾಡಿ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಹುಲಿಕಲ್ ನಟರಾಜ್ ನೇತೃತ್ವದಲ್ಲಿ ಹಲವು ವರ್ಷಗಳಿಂದ ಮೌಢ್ಯದ ಕುರಿತು ರಾಜ್ಯದ ಜನರಲ್ಲಿ ಜಾಗೃತಿ ಮೂಡಿ ಸುತ್ತ ಬಂದಿದೆ. ಹಲವಾರು ಕಾರ್ಯಕ್ರಮ ಹಮ್ಮಿಕೊಂಡು ಮೌಢ್ಯದಲ್ಲಿರುವ ಜನರನ್ನು ಮುಖ್ಯ ವಾಹಿನಿಯ ತರುವಲ್ಲಿ ಪರಿಷತ್ತು ಶ್ರಮಿಸುತ್ತಿದೆ. ಇದಕ್ಕೆ ಪೂರಕವಾಗಿ ಸರ್ಕಾರದ ವತಿಯಿಂದ ವೈಜ್ಞಾನಿಕ ಅಕಾಡೆಮಿ ಸ್ಥಾಪಿಸುವ ಮೂಲಕ ಪರಿಷತ್ತಿನ ಕಾರ್ಯಕ್ಕೆ ಶಕ್ತಿ ತುಂಬಬೇಕು ಎಂದು ಒತ್ತಾಯಿಸಲಾಯಿತು.

ಈ ಕುರಿತು ಸರ್ಕಾರ ಆಸಕ್ತಿ ವಹಿಸಿ ಆದಷ್ಟು ಶೀಘ್ರ ಅಕಾಡೆಮಿ ಸ್ಥಾಪಿಸಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ವೈಜ್ಞಾನಿಕ ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಸರ್ಕಾರಕ್ಕೆ ಕಳಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪರಿಷತ್ತಿನ ಸದಸ್ಯರಾದ ಕುಬೇರ ಮಜ್ಜಿಗಿ, ಅಮರೇಶ ಪಾಟೀಲ್, ನಿಂಗಜ್ಜ ಶಹಪುರ್, ಆನಂದ ಕಿನ್ನಾಳ, ಹನುಮಂತಪ್ಪ ಕುರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಜೃಂಭಣೆಯ ಚಂದ್ರಮೌಳೇಶ್ವರ ಸ್ವಾಮಿ ರಥೋತ್ಸವ
ಸನಾತನ ಪರೀಕ್ಷೆಗೊಳಗಾದ್ರೂ ಅಳಿಸಲಸಾಧ್ಯ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್