ಮರ ತೆರವಿಗೆ ಆಗ್ರಹ

KannadaprabhaNewsNetwork |  
Published : Dec 02, 2025, 02:45 AM IST
ಫೋಟೋ :- ಸೋಮವಾರಪೇಟೆ ಶನಿವಾರಸಂತೆ ರಾಜ್ಯ ಹೆದ್ದಾರಿಗೆ  ಮರ ಬಿದ್ದು ಸಂಚಾರಕ್ಕೆ ಅಡಚಣೆಯಾಗಿರುವುದು. | Kannada Prabha

ಸಾರಾಂಶ

ಬೆಳಗ್ಗೆ ಸಂಜೆ ವಾಹನ ದಟ್ಟಣೆ ಹೆಚ್ಚಾದ ಸಮಯದಲ್ಲಿ ಟ್ರಾಫಿಕ್‌ ಸಮಸ್ಯೆ ಕೂಡ ಉದ್ಭವಿಸಿದೆ.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಸೋಮವಾರಪೇಟೆಯಿಂದ ಶನಿವಾರಸಂತೆಗೆ ತೆರಳುವ ರಾಜ್ಯ ಹೆದ್ದಾರಿಯ ಗೌಡಳ್ಳಿ ಸೇತುವೆ ಸಮೀಪ ಆಲದ ಮರ ರಸ್ತೆಗೆ ಬಿದ್ದಿದ್ದು ಇದನ್ನು ಸರಿಯಾದ ರೀತಿಯಲ್ಲಿ ತೆರವುಗೊಳಿಸದೆ ಅರಣ್ಯ ಇಲಾಖೆ ಸಿಬ್ಬಂದಿ ಕೈಕಟ್ಟಿ ಕುಳಿತಿದ್ದಾರೆ. ಮರ ಬಿದ್ದಿದ್ದ ಸ್ಥಳದಲ್ಲಿ ತಿರುವು ರಸ್ತೆ ಇರುವುದರಿಂದ ವಾಹನ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ.

ಬೆಳಗ್ಗೆ ಮತ್ತು ಸಂಜೆ ವಾಹನ ದಟ್ಟಣೆ ಹೆಚ್ಚಾದ ಸಮಯದಲ್ಲಿ ಟ್ರಾಫಿಕ್ ಸಮಸ್ಯೆಯೂ ಕೂಡ ಉದ್ಭವಿಸಿದೆ. ಕೂಡಲೇ ಅರಣ್ಯ ಇಲಾಖೆಯವರು ರಸ್ತೆಗೆ ಬಿದ್ದಿರುವ ಮರವನ್ನು ತೆರೆವುಗೊಳಿಸದಿದ್ದರೆ ಅಪಘಾತ ಸಂಭವಿಸಿ ಪ್ರಾಣ ಹಾನಿ ಆಗಬಹುದು. ಈ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲಾ ಘಟಕದ ಉಪಾಧ್ಯಕ್ಷ ಜಿ ಎಂ ಹೂವಯ್ಯ ಮತ್ತು ಸಾರ್ವಜನಿಕರು ಮರವನ್ನು ತೆರವುಗೊಳಿಸುವಂತೆ ಶನಿವಾರಸಂತೆ ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.

---------------------------------

ಕೆ.ಎಂ.ಎಸ್.ಎ. ಗೆ ನಾಲ್ವರು ನಿರ್ದೇಶಕರ ನೇಮಕ

ಪೊನ್ನಂಪೇಟೆ : ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ)ಯ ಆಡಳಿತ ಮಂಡಳಿಗೆ ನೂತನವಾಗಿ ನಾಲ್ವರು ನಿರ್ದೇಶಕರನ್ನು ನೇಮಿಸಲಾಗಿದೆ. ಕಂಡಂಗಾಲದ ಮಂದಮಾಡ ರಫೀಕ್ (ಮುನ್ನ), ಬೇಗೂರಿನ ಆಲೀರ ಬಿ. ಮೂಸ, ಎಡಪಾಲದ ಕುಪ್ಪೋಡಂಡ ಮಹಮ್ಮದ್ ಮತ್ತು ಚೆರಿಯಪರಂಬುವಿನ ಪರವಂಡ ಸಿರಾಜ್ ಎಂಬುವವರೇ ನೂತನವಾಗಿ ನೇಮಕಗೊಂಡ ನಿರ್ದೇಶಕರಾಗಿದ್ದಾರೆ. ಕೆ.ಎಂ.ಎಸ್.ಎ. ಅಧ್ಯಕ್ಷರಾದ ಆಲೀರ ರಶೀದ್ ಅವರ ಅಧ್ಯಕ್ಷತೆಯಲ್ಲಿ ವಿರಾಜಪೇಟೆಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ನೇಮಕ ಪ್ರಕ್ರಿಯೆ ನಡೆಯಿತು.ಈ ಕುರಿತು ಹೇಳಿಕೆ ನೀಡಿರುವ ಕೆ.ಎಂ.ಎಸ್.ಎ. ಅಧ್ಯಕ್ಷರಾದ ಆಲೀರ ರಶೀದ್, ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿಯನ್ನು ವಿವಿಧ ಕ್ರೀಡಾ ಆಯೋಜನಾ ಮತ್ತು ಪ್ರತಿಭೆಗಳಿಗೆ ಉತ್ತೇಜನಕಾರಿ ಸಂಘಟನೆಯಾಗಿ ರೂಪಿಸಲಾಗುವುದು. ಇದರ ಭಾಗವಾಗಿ ಜಿಲ್ಲೆಯ ವಿವಿಧೆಡೆಗಳಲ್ಲಿರುವ ಕೊಡವ ಮುಸ್ಲಿಂ ಸಮುದಾಯದ ಕ್ರೀಡಾಸಕ್ತರನ್ನು ಸಂಘಟಿಸಿ ಅಕಾಡೆಮಿಯನ್ನು ಹಂತಹಂತವಾಗಿ ವಿಸ್ತರಿಸಲಾಗುವುದು. ಇದರ ಮೊದಲ ಭಾಗವಾಗಿ ಇವರು ನಿರ್ದೇಶಕರನ್ನು ಆಡಳಿತ ಮಂಡಳಿಗೆ ನೇಮಕಗೊಳಿಸಲಾಗಿದೆ. ಮುಂದೆಯೂ ಮತ್ತಷ್ಟು ಕ್ರೀಡಾಸಕ್ತರನ್ನು ಸೇರಿಸಿ ಕೆ.ಎಂ.ಎಸ್.ಎ. ಯನ್ನು ಇನ್ನಷ್ಟು ವಿಸ್ತರಿಸಿ ಸಂಘಟಿಸುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿತ್ವ ರೂಪಿಸುವುದೇ ಮನೆಗೊಂದು ಗ್ರಂಥಾಲಯದ ಉದ್ದೇಶ-ಡಾ. ಮಾನಸ
ಲೋಕಾ ದಾಳಿಗೆ ಹೆದರಿ ಬಾತ್‌ರೂಂನಲ್ಲಿ ಹಣ ಪ್ಲಶ್‌ ಮಾಡಿದ ಅಧಿಕಾರಿ