ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣಕ್ಕೆ ಒತ್ತಾಯ

KannadaprabhaNewsNetwork |  
Published : Jul 15, 2026, 02:30 AM IST
ಫೋಟೋವಿವರ- (13ಎಚ್‌ಪಿಟಿ3) ಹೊಸಪೇಟೆ ನಗರದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾ ಯುವ ಘಟಕವು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿ ಬಳ್ಳಾರಿ ನಗರದಲ್ಲಿ ಶೀಘ್ರದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮಾಡಬೇಕು ಎಂದು ಒತ್ತಾಯಿಸಿದು | Kannada Prabha

ಸಾರಾಂಶ

ಕಳೆದ ಕೆಲ ತಿಂಗಳ ಹಿಂದೆ ಪ್ರತಿಷ್ಠಾಪನೆಗೊಳ್ಳಬೇಕಿದ್ದ ವಾಲ್ಮೀಕಿ ಪ್ರತಿಮೆ ಕಾರ್ಯಕ್ರಮ ರಾಜಕೀಯ ಕಾರಣಗಳಿಗಾಗಿ ಮುಂದೂಡಲಾಗಿತ್ತು.

ಹೊಸಪಪೇಟೆ:ಬಳ್ಳಾರಿ ನಗರದಲ್ಲಿ ಶೀಘ್ರದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮಾಡಲು ಒತ್ತಾಯಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾ ಯುವ ಘಟಕವು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ, ಗೃಹ ಸಚಿವರು, ಬಳ್ಳಾರಿ ಜಿಲ್ಲಾಧಿಕಾರಿ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರಿಗೆ ಸೋಮವಾರ ಮನವಿ ಸಲ್ಲಿಸಿ ಒತ್ತಾಯಿಸಿದರು.ಪ್ರತಿಭಟನೆಯನ್ನು ಉದ್ದೇಶಿಸಿ ನಗರಸಭೆ ಸದಸ್ಯ ತಾರಿಹಳ್ಳಿ ಜಂಬುನಾಥ, ಮುಂಖಡರಾದ ಗುಜ್ಜಲ್ ಗಣೇಶ್, ಎನ್.ವೆಂಕಟೇಶ್ ಮಾತನಾಡಿ, ಕಳೆದ ಕೆಲ ತಿಂಗಳ ಹಿಂದೆ ಪ್ರತಿಷ್ಠಾಪನೆಗೊಳ್ಳಬೇಕಿದ್ದ ವಾಲ್ಮೀಕಿ ಪ್ರತಿಮೆ ಕಾರ್ಯಕ್ರಮ ರಾಜಕೀಯ ಕಾರಣಗಳಿಗಾಗಿ ಮುಂದೂಡಲಾಗಿತ್ತು. ಇದರಲ್ಲಿ ಕೆಲ ಮುಖಂಡರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ಮುಂದೂಡುತ್ತಾ ಬರುತ್ತಿರುವುದನ್ನು ವಾಲ್ಮೀಕಿ ನಾಯಕ ಮಹಾಸಭಾದ ಯುವ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದರು.

ಅವರು ರಾಜಕೀಯ ಏನೇ ಮಾಡಲಿ. ಆದರೆ ಪ್ರತಿಮೆ ಅನಾವರಣ ವಿಷಯದಲ್ಲಿ ರಾಜಕೀಯ ಮಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಡಳಿತ, ಬಳ್ಳಾರಿ ನಗರ ಶಾಸಕರು ಶೀಘ್ರವೇ ದಿನಾಂಕ ನಿಗದಿಪಡಿಸಿ, ಕೂಡಲೇ ವಾಲ್ಮೀಕಿ ಪುತ್ಥಳಿ ಅನಾವರಣ ಮಾಡಬೇಕು. ಮಹರ್ಷಿ ವಾಲ್ಮೀಕಿ ಜಯಂತಿಯೊಳಗೆ ಪುತ್ಥಳಿ ಅನಾವರಣ ಮಾಡಬೇಕು. ಇಲ್ಲದಿದ್ದರೆ ವಾಲ್ಮೀಕಿ ನಾಯಕ ಮಹಾಸಭಾದ ಯುವ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ವಾಲ್ಮೀಕಿ ನಾಯಕ ಮಹಾಸಭಾದ ಯುವ ಘಟಕದ ಜಿಲ್ಲಾಧ್ಯಕ್ಷ ಕಿರಣ್ ಗುಜ್ಜಲ್, ಪ್ರಧಾನ ಕಾರ್ಯದರ್ಶಿ ವ್ಯಾಸರಾಜ, ಯುವ ಮುಖಂಡ ಕಾಸಟಿ ಮಂಜುನಾಥ ಮಾತನಾಡಿ, ಬಳ್ಳಾರಿಯ ರಾಜಕೀಯ ಕೆಸರೆರಚಾಟದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಲೋಕಾರ್ಪಣೆ ವಿಳಂಬ ಮಾಡುವುದು ಸರಿಯಲ್ಲ. ಲೋಕಕ್ಕೆ ರಾಮನನ್ನು ಪರಿಚಯಿಸಿದ ಪವಿತ್ರ ರಾಮಾಯಣ ಗ್ರಂಥವನ್ನು ಬರೆದವರು ಆದಿಕವಿ ಮಹರ್ಷಿ ವಾಲ್ಮೀಕಿ. ಅವರ ಪುತ್ಥಳಿ ಲೋಕಾರ್ಪಣೆ ಸಮಾರಂಭವು ಈ ಹಿಂದೆ ನಿಗದಿಗೊಂಡು ಬಳ್ಳಾರಿಯಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆ ಹಾಗೂ ದೊಂಬಿಯ ಕಾರಣದಿಂದಾಗಿ ಮುಂದೂಡಲ್ಪಟ್ಟಿತ್ತು. ಈಗ ಎಲ್ಲವೂ ಸರಿಯಾಗಿದೆ. ಪರಿಸ್ಥಿತಿ ತಿಳಿಯಾಗಿದೆ. ಇಷ್ಟಾದರೂ ಪುತ್ಥಳಿ ಅನಾವರಣಕ್ಕೆ ಬಳ್ಳಾರಿಯ ಜನಪ್ರತಿನಿಧಿಗಳು ಮುಂದಾಗುತ್ತಿಲ್ಲ ಎಂದರು.

ಪ್ರತಿಭಟನಯಲ್ಲಿ ಸೂರಿ ಬಂಗಾರು, ಜೆ.ಡಿ. ಮಂಜುನಾಥ, ಪ್ರಮೋದ್ ಬಾವಿಕಟ್ಟಿ, ಎನ್.ವೆಂಕಟೇಶ್, ಎರಿಸ್ವಾಮಿ, ತಳವಾರ ಮಂಜುನಾಥ, ಲಕ್ಷ್ಮಣ, ತಿಪ್ಪೇಸ್ವಾಮಿ, ಬಾಣದ ಗೋಪಿ, ಕೆ.ಭರತಕುಮಾರ್, ಜಯಣ್ಣ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಸ್ವೀಕರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಂಗಾರು ಹಂಗಾಮಿನಲ್ಲೇ ಬರಿದಾದ ಚೆಕ್‌ ಡ್ಯಾಂಗಳು
15ನೇ ಹಣಕಾಸು ಅನುದಾನ ವಿಳಂಬ: ಸಂಕಷ್ಟದಲ್ಲಿ ಗ್ರಾಮ ಪಂಚಾಯಿತಿಗಳು