ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಗಂಗಾಮತಸ್ಥ ಸಮುದಾಯದವರು, ಮೀನುಗಾರರ ಅನ್ನಕ್ಕೆ ಕೈ ಹಾಕಿದ ಕಳ್ಳರನ್ನು ಹಿಡಿದುಕೊಟ್ಟಂತಹ ಮಹಿಳೆಯರ ಮೇಲೆ ಕೇಸ್ ಹಾಕಿ ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರ ಪರ ನಡೆದ ಸಮಾಲೋಚನಾ ಸಭೆಯಲ್ಲಿ ಇದನ್ನು ಪ್ರಶ್ನಿಸಿದ ಪ್ರಮೋದ್ ಮಧ್ವರಾಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ರೀತಿಯ ಸಂವಿಧಾನ ವಿರೋಧಿ ನಡೆಯನ್ನು ಸಮಸ್ತ ಮೀನುಗಾರ ಸಮಾಜ ತೀವ್ರವಾಗಿ ಖಂಡಿಸುತ್ತದೆ.
ಕಳ್ಳರನ್ನು ಹಿಡಿದು ಕೊಟ್ಟಂತಹ ಮೀನುಗಾರ ಮಹಿಳೆಯರ ಮೇಲೆ ಕೇಸ್ ದಾಖಲು ಮಾಡಿದ್ದು ಎಷ್ಟರಮಟ್ಟಿಗೆ ಸರಿ. ಇದನ್ನು ಪ್ರಶ್ನಿಸಿದ್ದನ್ನೇ ಪ್ರಚೋದನೆ ಎಂದು ಬಿಂಬಿಸಿ ಸುಮೋಟೋ ಪ್ರಕರಣ ದಾಖಲಿಸಿರುವುದು ಹೋರಾಟವನ್ನು ಹತ್ತಿಕ್ಕುವ ತಂತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯ ಮಟ್ಟದ ನಾಯಕನ ಮೇಲೆ ಪ್ರಕರಣ ದಾಖಲಿಸಿರುವುದು ಮೀನುಗಾರ ಸಮುದಾಯವನ್ನು ಹತ್ತಿಕ್ಕುವ ಹುನ್ನಾರವಾಗಿದೆ. ಆದ್ದರಿಂದ ನಮ್ಮ ಹಕ್ಕು ಮತ್ತು ನಾಯಕರ ಸಮಗ್ರತೆ ರಕ್ಷಿಸಲು ದಿಟ್ಟ ನಿರ್ಧಾರ ನಡೆಸಬೇಕಾಗುತ್ತದೆ. ಅಂತೆಯೇ ಸುಮೋಟೋ ಪ್ರಕರಣ ಹಿಂಪಡೆಯದಿದ್ದರೆ ಮುಂದಿನ ದಿನದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಕನ್ನಿಕಾ ನವೋದಯ ವಿದ್ಯಾಸಂಸ್ಥೆಯ 42 ವಿದ್ಯಾರ್ಥಿಗಳು ಆಯ್ಕೆ
ಇಲ್ಲಿನ ಗಾಂಧಿನಗರದ ಕನ್ನಿಕಾ ಶಿಲ್ಪ ನವೋದಯ ಎಜುಕೇಷನ್ ಟ್ರಸ್ಟ್ನ 42 ವಿದ್ಯಾರ್ಥಿಗಳು ೨೦೨೪-೨೫ನೇ ಸಾಲಿನ ನವೋದಯ ಪ್ರವೇಶ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ. ಸತತ ಎಂಟು ವರ್ಷದಿಂದ ಸಂಸ್ಥೆಯ ಶೇ.50ರಷ್ಟು ವಿದ್ಯಾರ್ಥಿಗಳು ನವೋದಯ ಪರೀಕ್ಷೆಗೆ ಆಯ್ಕೆಯಾಗುತ್ತಿದ್ದಾರೆ.
ರಿಷಿತಾ.ಎಸ್ , ಪವನ್ ಆದಿತ್ಯ, ಆರ್.ದೈವಿಕ್, ಜಿ.ಎನ್.ಗಣನ್ ಇತರರು ನವೋದಯ ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.
ನವೋದಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮಕ್ಕಳಿಗೆ ಕನ್ನಿಕಾ ಶಿಲ್ಪ ನವೋದಯ ಎಜುಕೇಷನ್ ಟ್ರಸ್ಟ್ ಮುಖ್ಯಸ್ಥೆ ಎಚ್.ಆರ್.ಕನ್ನಿಕಾ ಶುಭ ಹಾರೈಸಿದ್ದಾರೆ.