ಬೇಡಿಕೆ ಈಡೇರಿಕೆ: ರಾಜ್ಯ ರೈತ ಸಂಘ ಧರಣಿ ಅಂತ್ಯ

KannadaprabhaNewsNetwork |  
Published : Feb 24, 2024, 02:31 AM IST
ಧರಣಿ | Kannada Prabha

ಸಾರಾಂಶ

ಕಳೆದ 20 ವರ್ಷಗಳಿಂದಲೂ ಹೋರಾಟ ನಡೆಸುತ್ತಾ ಬಂದಿದ್ದರೂ ಕೃಷಿಗೆ ಉಚಿತ ವಿದ್ಯುತ್ ನೀಡಿಲ್ಲ. ಇತರ ಬೆಳೆಗಳಂತೆ ಕಾಫಿ ಬೆಳೆಗೂ ಸೌಲಭ್ಯ ಕಲ್ಪಿಸಬೇಕು. ಕಾಫಿ ಬೆಳೆಗಾರರ 10 ಎಚ್.ಪಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತಗೊಳಿಸುವುದನ್ನು ನಿಲ್ಲಿಸಬೇಕು ಎಂಬುವುದು ನಗರದ ಚೆಸ್ಕಾಂ ಕಚೇರಿಯ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ರೈತರ ಆಗ್ರಹವಾಗಿತ್ತು. ಈ ಬೇಡಿಕೆ ಈಡೇರುವ ಭರವಸೆ ದೊರಕಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ ಕಾಫಿ ಬೆಳೆಗಾರರ 10 ಎಚ್.ಪಿ ಪಂಪ್ ಸೆಟ್ ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕ ಕಳೆದೆರಡು ದಿನಗಳಿಂದ ಮುಂದುವರೆಸಿದ್ದ ಆಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಶುಕ್ರವಾರ ಅಂತ್ಯಗೊಳಿಸಿದೆ.ಕಳೆದ 20 ವರ್ಷಗಳಿಂದಲೂ ಹೋರಾಟ ನಡೆಸುತ್ತಾ ಬಂದಿದ್ದರೂ ಕೃಷಿಗೆ ಉಚಿತ ವಿದ್ಯುತ್ ನೀಡಿಲ್ಲ. ಇತರ ಬೆಳೆಗಳಂತೆ ಕಾಫಿ ಬೆಳೆಗೂ ಸೌಲಭ್ಯ ಕಲ್ಪಿಸಬೇಕು. ಕಾಫಿ ಬೆಳೆಗಾರರ 10 ಎಚ್.ಪಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತಗೊಳಿಸುವುದನ್ನು ನಿಲ್ಲಿಸಬೇಕು ಎಂಬುವುದು ನಗರದ ಚೆಸ್ಕಾಂ ಕಚೇರಿಯ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ರೈತರ ಆಗ್ರಹವಾಗಿತ್ತು.ಸರ್ಕಾರದ ಸೂಚನೆ ಹಾಗೂ ಮೇಲಧಿಕಾರಿಗಳ ಆದೇಶದ ಮೇರೆಗೆ ಕಡಿತಗೊಳಿಸಲಾಗಿದ್ದ ಕಾಫಿ ಬೆಳೆಗಾರರ ವಿದ್ಯುತ್ ಸಂಪರ್ಕವನ್ನು ಶುಕ್ರವಾರ ಮರಳಿ ನೀಡಲಾಗಿದ್ದು, ಸೆಸ್ಕ್ ಕಾರ್ಯ ನಿರ್ವಾಹಕ ಅಧಿಕಾರಿ ಮುಂದಕ್ಕೆ ಕಾಫಿ ಬೆಳೆಗಾರರ ವಿದ್ಯುತ್ ಕಡಿತಗೊಳಿಸುವುದಿಲ್ಲ ಎಂಬ ಭರವಸೆ ನೀಡಿದ ಹಿನ್ನೆಲೆ ರೈತರು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ. ರೈತ ಸಂಘದ ಜಿಲ್ಲಾಧ್ಯಕ್ಷ ಮನು ಸೋಮಯ್ಯ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ರೈತ ಮುಖಂಡ ಹೇರೂರು ಚಂದ್ರಶೇಖರ್, ವಿರಾಜಪೇಟೆ ಹೋಬಳಿ ಅಧ್ಯಕ್ಷ ಪ್ರವೀಣ್ ಬೋಪಯ್ಯ, ಸದಸ್ಯರಾದ ಗೌತಮ್, ಅರುಣ್‌ ಕುಮಾ‌ರ್, ಶಾಶ್ವತ್, ಅಯ್ಯಣ್ಣ ಸೇರಿದಂತೆ ಜಿಲ್ಲೆಯ ವಿವಿಧ ಕಡೆಯ ರೈತರು ಪಾಲ್ಗೊಂಡಿದ್ದರು.ಆಹೋರಾತ್ರಿ ಧರಣಿ

ಕಾಫಿ ಬೆಳೆಗಾರರ 10 ಹೆಚ್.ಪಿ ಪಂಪ್ ಸೆಟ್ ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕ ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಎರಡನೇ ದಿನವಾದ ಗುರುವಾರವೂ ಮುಂದುವರಿದಿತ್ತು.ಸರ್ಕಾರದ ಆದೇಶದ ಪ್ರತಿ ಇಲ್ಲದೆ, ಕೊಡಗಿನ ಸಣ್ಣ ರೈತರ ಜಮೀನುಗಳಿಗೆ ಅತಿಕ್ರಮ ಪ್ರವೇಶ ಮಾಡಿ ಮೋಟರ್‌ನ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದರು.ರೈತ ಸಂಘದ ಜಿಲ್ಲಾಧ್ಯಕ್ಷ ಮನು ಸೋಮಯ್ಯ ಮಾತನಾಡಿ, ಸರ್ಕಾರ ಕಾಫಿ ಬೆಳೆಗಾರರ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದೆ. ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಲವಾರು ಬಾರಿ ಸರ್ಕಾರದ ಗಮನ ಸೆಳೆಯಲಾಗಿತ್ತು. ಆದರೆ ಹಿಂದಿನ ಬಿಜೆಪಿ ಸರ್ಕಾರವಾಗಲಿ ಈಗಿನ ಕಾಂಗ್ರೆಸ್ ಸರ್ಕಾರವಾಗಲಿ ರೈತಪರವಾದ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದರು.ಸರ್ಕಾರ ಬೆಳೆಗಾರರನ್ನು ಬೀದಿಗೆಳೆಯುವುದು ಬೇಡ, ಈಗಾಗಲೇ ಪ್ರಾಣಿ ಮಾನವ ಸಂಘರ್ಷದಿಂದ ಸಾಕಷ್ಟು ಕಷ್ಟ ನಷ್ಟಗಳು ಎದುರಾಗಿದೆ. ಅಲ್ಲದೆ ಅಕಾಲಿಕ ಮಳೆ, ಬೆಳೆಹಾನಿಯಿಂದಾಗಿಯೂ ರೈತರು ಕಂಗಾಲಾಗಿದ್ದಾರೆ. ಹೀಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿದ್ದರೆ ತೀವ್ರ ತರದ ಹೋರಾಟದ ಮೂಲಕ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದರು.ಈ ಕುರಿತು ಪ್ರತಿಕ್ರಿಯಿಸಿರುವ ಸೆಸ್ಕ್ ಕಾರ್ಯ ನಿರ್ವಾಹಕ ಅಧಿಕಾರಿ, ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರ ಸುಮಾರು 29 ಸಾವಿರ ಕೋಟಿ ರು. ಬಿಲ್ ಬಾಕಿ ಇರುವ ಹಿನ್ನೆಲೆ ನಾವು ನಮ್ಮ ಸಂಸ್ಥೆಯ ನಿಯಮಾನುಸಾರ ವಿದ್ಯುತ್ ಕಡಿತ ಗೊಳಿಸಿದ್ದೇವು. ಇದನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು ನಿನ್ನೆಯಿಂದ ನಮ್ಮ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ನಮ್ಮ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಅವರ ನಿರ್ದೇಶನದಂತೆ ಕಡಿತಗೊಳಿಸಿರುವ ಪಂಪ್ ಸೆಟ್ ವಿದ್ಯುತ್ ಸಂಪರ್ಕವನ್ನು ರಿಕನೆಕ್ಟ್ ಮಾಡಲು ಸಿಬ್ಬಂದಿಗೆ ಸೂಚಿಸಲಾಗಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ