ಕನ್ನಡಪ್ರಭ ವಾರ್ತೆ ಮೊಳಕಾಲ್ಮುರು
ದೆಹಲಿಯಲ್ಲಿ ಇತ್ತೀಚೆಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ನೌಕರರ ಸಂಘದ ಸಭೆ ನಡೆಸಿ ಕೇಂದ್ರ ಸರ್ಕಾರ ಹಳೆ ಪಿಂಚಣಿ ವ್ಯವಸ್ಥೆ ಬದಲಿಗೆ ಏಕೀಕೃತ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಿದೆ. ಇದೂ ಸಹ ಷೇರು ಮಾರುಕಟ್ಟೆ ಆಧಾರಿತವಾಗಿದೆ. ನೌಕರರ ಸಂಧ್ಯಾ ಕಾಲದ ಬದುಕಿಗೆ ಭದ್ರತೆ ಒದಗಿಸುವ ಅಂಶಗಳು ಇದರಲ್ಲಿ ಇಲ್ಲದಾಗಿವೆ. ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಏಕಿಕೃತ ಪಿಂಚಣಿ ವ್ಯವಸ್ಥೆ ಹಿಂಪಡೆದು ರಾಜ್ಯದಲ್ಲಿ ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿ ಮಾಡಬೇಕೆಂದು ಆಗ್ರಹಿಸಿದರು.
ಈ ವೇಳೆ ಸಂಘದ ಅಧ್ಯಕ್ಷ ನಾಗಭೂಷಣರೆಡ್ಡಿ, ಗೌರವಾಧ್ಯಕ್ಷ ಕೆ.ಎಸ್. ತಿಪ್ಪೇಸ್ವಾಮಿ, ಕಾರ್ಯದರ್ಶಿ ನವೀನ್ ಕುಮಾರ್, ನೌಕರರಾದ ನೀಲರಾಜ್, ಮುರುಗೇಶ್, ಚಂದ್ರಶೇಖರ, ಗಿರೀಶ್ ಬಾಬು, ಟಿಎಂ. ಅಶೋಕ್, ಜೆ. ಮಂಜುನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಅಶೋಕ್, ಕರಿ ಬಸಣ್ಣ, ವಾಲೇಕರ್, ಆನಂದ್ ಸೇರಿದಂತೆ ಇತರರು ಇದ್ದರು.