ವಿವಿ ರದ್ದು, ವಿಲೀನಗೊಳಿಸದಂತೆ ಆಗ್ರಹ

KannadaprabhaNewsNetwork |  
Published : Mar 12, 2025, 12:46 AM IST
ಮುಖ್ಯಮಂತ್ರಿಗಳೊಂದಿಗೆ ಮನವಿ ಸಲ್ಲಿಕೆ ಸಂದರ್ಭ | Kannada Prabha

ಸಾರಾಂಶ

ಶಾಸಕ ಡಾ. ಮಂತರ್ ಗೌಡ ನೇತೃತ್ವದಲ್ಲಿ ಕುಶಾಲನಗರದಿಂದ ನಿಯೋಗ ತೆರಳಿ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳನ್ನು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕೊಡಗು ವಿವಿ ರದ್ದುಗೊಳಿಸದೆ ಇತರ ವಿಶ್ವವಿದ್ಯಾಲಯಗಳಿಗೆ ವಿಲೀನಗೊಳಿಸದಂತೆ ಆಗ್ರಹಿಸಿ ಮಡಿಕೇರಿ ಕ್ಷೇತ್ರ ಶಾಸಕ ಡಾ ಮಂತರ್ ಗೌಡ ನೇತೃತ್ವದಲ್ಲಿ ಕುಶಾಲನಗರದಿಂದ ನಿಯೋಗ ತೆರಳಿ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳನ್ನು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಕೊಡಗು ವಿವಿ ಹಿತರಕ್ಷಣಾ ಬಳಗದ ಪ್ರಮುಖರನ್ನು ಮುಖ್ಯಮಂತ್ರಿಗಳ ಬಳಿ ಕರೆದುಕೊಂಡು ಹೋದ ಶಾಸಕ ಮಂತರ್ ಗೌಡ ಕೊಡಗು ವಿವಿಯನ್ನು ಉಳಿಸುವ ಮೂಲಕ ಸೂಕ್ತ ಅನುದಾನ ನೀಡಬೇಕೆಂದು ಮುಖ್ಯಮಂತ್ರಿಗಳನ್ನು ಕೋರಿದರು.

ಈ ಸಂದರ್ಭ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಹಿಂದಿನ ಸರ್ಕಾರ ರಾಜಕಾರಣ ಮಾಡಲು ಅನಗತ್ಯವಾಗಿ ನೂತನ ವಿವಿಗಳನ್ನು ತೆರೆದು ಗೊಂದಲ ಸೃಷ್ಟಿ ಮಾಡಿದ್ದಾರೆ. ಈಗ ಅವುಗಳಿಗೆ ಅನುದಾನ ಕೊಡಲು ಸಾಧ್ಯವೇ ಎಂದಾಗ ಶಾಸಕರಾದ ಮಂತರ್ ಗೌಡ ಕೊಡಗು ವಿವಿ ಉಳಿಯಲೇಬೇಕು. ಕೊಡಗು ವಿವಿಗೋಸ್ಕರ ತನ್ನ ಶಾಸಕರ ಅನುದಾನವನ್ನು ಕೊಡಲು ತಾನು ಸಿದ್ದ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಇದಕ್ಕೆ ಪೂರಕವಾಗಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಸ್ಪಂದಿಸುವುದಾಗಿ ಭರವಸೆ ವ್ಯಕ್ತಪಡಿಸಿದ್ದಾರೆ.

ನಿಯೋಗ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನಿವಾಸಕ್ಕೆ ತೆರಳಿ ಕೊಡಗು ವಿವಿ ಯಾವುದೇ ಕಾರಣಕ್ಕೂ ರದ್ದುಗೊಳಿಸಬಾರದು. ಅಥವಾ ವಿಲೀನಗೊಳಿಸದಂತೆ ಮಾಡಿದ ಮನವಿಗೆ ಕೊಡಗಿನ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಜೊತೆಗೆ ಗುಣಮಟ್ಟದ ಶಿಕ್ಷಣ ಲಭಿಸಬೇಕು ದೇಶವಿದೇಶಗಳ ವಿವಿಗಳ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಾತ್ಮಕವಾಗಿ ಇರಬೇಕೆಂದು ಸರ್ಕಾರದ ಒತ್ತಾಸೆಯಾಗಿದೆ. ಕೊಡಗಿನ ವಿದ್ಯಾರ್ಥಿಗಳಿಗೆ ಮಂಗಳೂರು ಬೇಕೆ ಅಥವಾ ಕೊಡಗು ವಿವಿ ಬೇಕೆ ಎಂದು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಇದೀಗ ಮತ್ತೊಮ್ಮೆ ಪೂರ್ಣ ಮಾಹಿತಿ ತರಿಸಿಕೊಂಡು ಚರ್ಚಿಸಲಾಗುವುದು. ಕೊಡಗಿನ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅನಾನುಕೂಲವಾಗದಂತೆ ಎಚ್ಚರವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಮಂಗಳೂರು ವಿವಿಗೆ ಸಂಯೋಜಿತಗೊಂಡ ಕೆಲವು ಬೋಧಕ ವರ್ಗದವರು ಮಂಗಳೂರು ವಿವಿಯಲ್ಲಿ ಕೊಡಗು ವಿಲೀನಗೊಳಿಸುವಂತೆ ಪತ್ರ ಬರೆದು ಸರ್ಕಾರಕ್ಕೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದ ಉಪಮುಖ್ಯಮಂತ್ರಿಗಳು ತಮ್ಮ ಕ್ಷೇತ್ರದ ಕೋರಿಕೆಯನ್ನು ಸರ್ಕಾರ ಕಡೆಗಣಿಸುವುದಿಲ್ಲ ಎಂಬ ಭರವಸೆಯನ್ನು ಶಾಸಕರೊಂದಿಗೆ ನಿಯೋಗಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಮತ್ತೊಮ್ಮೆ ಸಂಪುಟ ಸಮಿತಿಯಲ್ಲಿ ಪರಾಮರ್ಶಿಸಿ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಪೂರಕವಾಗಿ ಸ್ಪಂದಿಸುವುದಾಗಿ ಡಿ ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಇರುವ ವಿವಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕೆಂದು ವಿವಿ ಹಿತರಕ್ಷಣಾ ಬಳಗದ ಗೌರವಾಧ್ಯಕ್ಷರಾದ ವಿ ಪಿ ಶಶಿಧರ್, ಹಿರಿಯ ವಕೀಲರಾದ ಹೆಚ್ ಎಸ್ ಚಂದ್ರ ಮೌಳಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ ಪಿ ಚಂದ್ರಕಲಾ ಉಪಮುಖ್ಯಮಂತ್ರಿಗಳನ್ನು ಕೋರಿದ್ದಾರೆ.

ನಿಯೋಗ ಉನ್ನತ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ನಿಯೋಗದಲ್ಲಿ ಉದ್ಯಮಿ ನಾಪಂಡ ಮುತ್ತಪ್ಪ, ಕುಶಾಲನಗರ ವಿವೇಕಾನಂದ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಎನ್ ಎನ್ ಶಂಭುಲಿಂಗಪ್ಪ ಬಳಗದ ಅಧ್ಯಕ್ಷರಾದ ಕೆ ಎಸ್ ಕೃಷ್ಣೇಗೌಡ, ಕರವೇ ರಾಜ್ಯ ಸಂಚಾಲಕಿ ದೀಪ ಪೂಜಾರಿ, ಕೆಪಿಸಿಸಿ ಕಾರ್ಯದರ್ಶಿ ಮಂಜುನಾಥ್ ಗುಂಡೂರಾವ್ ಕುಶಾಲನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಉಪನ್ಯಾಸಕ ಡಾ ಜಮೀರ್ ಅಹ್ಮದ್, ಎಚ್ ಎನ್ ರಾಜಶೇಖರ್ ಟಿ ಕೆ ಪಾಂಡುರಂಗ ಟಿ ಬಿ ಜಗದೀಶ್ ಕೆ ಎಸ್ ಮೂರ್ತಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''