ಬಳ್ಳಾರಿ: ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರಿಗೆ ಕೇರಳ ಮಾದರಿಯಲ್ಲಿ ಗೌರವಧನ ವಿತರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಪಿಡಿಒಗಳು, ಗ್ರಾಪಂ ನೌಕರರು ಬೇಡಿಕೆಗಳ ಈಡೇರಿಕೆಗೆ ವಿಧಾನಪರಿಷತ್ತಿನಲ್ಲಿ ವಿಷಯವನ್ನು ಪ್ರಸ್ತಾಪ ಮಾಡುವುದಾಗಿ ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಭರವಸೆ ನೀಡಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಒಕ್ಕೂಟದ ಅಧ್ಯಕ್ಷ ಬಾಣಾಪುರದ ನಾಗರಾಜಗೌಡ ಅವರು ಪಂಚಾಯಿತಿ ಸದಸ್ಯರು, ಸಿಬ್ಬಂದಿ ಹಾಗೂ ಪಿಡಿಒಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ವೈ.ಎಂ.ಸತೀಶ್, ಒಕ್ಕೂಟದಿಂದ ನ್ಯಾಯಯುತ ಬೇಡಿಕೆಗಳ ಆಧಾರದಲ್ಲಿ ಹೋರಾಟ ನಡೆದಿದೆ. ನಿಮ್ಮ ಹೋರಾಟವನ್ನು ಸರ್ಕಾರ ಸ್ಪಂದಿಸಬೇಕು. ಈ ಹಿನ್ನೆಲೆಯಲ್ಲಿ ಸದನದಲ್ಲಿ ಧ್ವನಿ ಎತ್ತುವೆ ಎಂದರು. ಒಕ್ಕೂಟದ ಪ್ರಮುಖರಾದ ವೆಂಕಟಮ್ಮ, ಮಂಜುಳಾ, ಎಂ. ಹುಸೇನ್, ಎಂ. ಶಾಷಾವಲಿ, ದಾದಾಸಾಹೇಬ್, ರಾಜಶೇಖರಗೌಡ, ಕುಮಾರ, ಎಂ. ಮರಿಸ್ವಾಮಿ ಇನ್ನಿತರರು ಪಾಲ್ಗೊಂಡಿದ್ದರು.
ಬಳ್ಳಾರಿ ಜಿಪಂ ಎದುರು ಪ್ರತಿಭಟನೆ ನಡೆಸುತ್ತಿರುವ ಪಿಡಿಒಗಳು, ಗ್ರಾಪಂ ನೌಕರರು-ಸದಸ್ಯರು ಮತ್ತು ಸಿಬ್ಬಂದಿಯ ಬೇಡಿಕೆಗಳ ಈಡೇರಿಕೆಗೆ ವಿಧಾನಪರಿಷತ್ತಿನಲ್ಲಿ ಧ್ವನಿ ಎತ್ತುವುದಾಗಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಭರವಸೆ ನೀಡಿದರು.