ಕನ್ನಡಪ್ರಭ ವಾರ್ತೆ ಹಾಸನ
ಎಬಿವಿಪಿ ಆಂತರಿಕ ಸಮೀಕ್ಷೆ ಪ್ರಕಾರ ಹಾಸನ ಜಿಲ್ಲಾದ್ಯಂತ ೫೦೦೦ಕ್ಕೂ ಹೆಚ್ಚು ಬಾಂಗ್ಲಾದೇಶದ ನುಸುಳುಕೋರರು ವಾಸಿಸುತ್ತಿದ್ದಾರೆ. ಅವರಿಗೆ ಸ್ಥಳೀಯರೇ ಸಹಕರಿಸುತ್ತಿರುವುದು ದುರಾದೃಷ್ಟಕರ. ಅದಲ್ಲದೆ ಅವರಿಗೆ ನಕಲಿ ಆಧಾರ್ ಕಾರ್ಡ್ ನಂತಹ ಮಹತ್ತರ ದಾಖಲೆಗಳನ್ನು ಸೃಷ್ಟಿಸಿ ಕೊಡುತ್ತಿರುವುದು ಮತ್ತು ಇದಕ್ಕೆ ಪ್ರಭಾವಿಗಳು ಮತ್ತು ಸರ್ಕಾರಿ ನೌಕರರೇ ಸಹಕರಿಸುತ್ತಿರುವುದು ದೇಶದ್ರೋಹವೇ ಸರಿ. ಇಂತಹ ದೇಶದ್ರೋಹದ ಕೆಲಸ ಮಾಡುತ್ತಿರುವ ಅಧಿಕಾರಿಗಳು ಮತ್ತು ಅವರಿಗೆ ಸಹಕರಿಸುತ್ತಿರುವ ಸ್ಥಳೀಯರನ್ನು ದೇಶದ್ರೋಹದ ಪ್ರಕರಣದಲ್ಲಿ ಬಂಧಿಸಿ ಶಿಕ್ಷಿಸಬೇಕಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಎಬಿವಿಪಿ ಮುಖಂಡರಾದ ಶ್ರೀನಿವಾಸ್ ಸಾವರ್ಕರ್, ಜಿಲ್ಲಾ ಸಹಸಂಚಾಲಕ ಸಿ. ಭರತ್, ಜ್ಞಾನ, ಅದಿತಿ, ಮನೋಜ್ ಸೇರಿದಂತೆ ನೂರಾರು ಜನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.