ಧಾರವಾಡ:
ಬುಧವಾರ ಸುದ್ದಿಗೋಷ್ಠಿಯಲ್ಲಿ ದಾಖಲೆ ಸಮೇತ ಮಾಹಿತಿ ನೀಡಿದ ಅವರು, ರಾಜ್ಯದ ಕೃಷಿ ಮತ್ತು ಸಂಬಂಧಿತ ವಿಜ್ಞಾನಗಳ ವಿವಿಗಳಲ್ಲಿ ಪಾರದರ್ಶಕತೆ, ನಿಷ್ಪಕ್ಷಪಾತತೆ ಹಾಗೂ ಸಾರ್ವಜನಿಕ ವಿಶ್ವಾಸ ಮತ್ತಷ್ಟು ಬಲಪಡಿಸಬೇಕು. ಆದರೆ, ಆಡಳಿತ ವ್ಯವಸ್ಥೆಯೇ ಅದನ್ನು ಕುಗ್ಗಿಸುವ ರೀತಿಯಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಲೋಕಾಯುಕ್ತ ಪ್ರಕರಣ ಎದುರಿಸುತ್ತಿರುವವರನ್ನು ಕುಲಪತಿ ನೇಮಕಾತಿಯ ಶೋಧನಾ ಸಮಿತಿ ಅಧ್ಯಕ್ಷರನ್ನಾಗಿ ಮಾಡಿರುವುದು ಸರಿಯೇ ಎಂದು ಕಮ್ಮರಡಿ ಪ್ರಶ್ನಿಸಿದ್ದಾರೆ.
ಧಾರವಾಡ ಕೃಷಿ ವಿವಿಗೆ ಡಾ. ರಾಜೇಂದ್ರ ಪ್ರಸಾದ ಹಾಗೂ ಶಿವಮೊಗ್ಗ ವಿವಿಗೆ ಡಾ. ಸುರೇಶ ಅವರನ್ನು ಶೋಧನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇವರಿಬ್ಬರೂ ಆಯಾ ವಿವಿಯಲ್ಲಿ ಸೇವೆ ಸಲ್ಲಿಸಿದವರು. ಯುಜಿಸಿ ನಿಯಮಾವಳಿ ಈ ಅಂಶವನ್ನು ಒಪ್ಪುವುದಿಲ್ಲ. ಜತೆಗೆ ಇವರಿಬ್ಬರ ಮೇಲೂ ಗಂಭೀರ ಸ್ವರೂಪದ ಆರೋಪಗಳಿವೆ. ರಾಜ್ಯದ ಕೃಷಿ ವಿವಿಗಳ ನಿವೃತ್ತ ಪ್ರಾಧ್ಯಾಪಕರು, ಹಳೆಯ ವಿದ್ಯಾರ್ಥಿಗಳು ಒಕ್ಕೂಟ ರಚಿಸಿಕೊಂಡು ಈ ಕುರಿತು ರಾಜ್ಯಪಾಲರ ಹಾಗೂ ಸರ್ಕಾರದ ಗಮನಕ್ಕೆ ತರಲಾಗಿದೆ. ಲೋಕಾಯುಕ್ತಕ್ಕೂ ಸಹ ದೂರು ಸಲ್ಲಿಸಲಾಗಿದೆ ಎಂದರು.ತಾವು ಮಾರ್ಗದರ್ಶಕರಾಗಿ ಸ್ವಯಂ ಪ್ರೇರಿತರಾಗಿ ಸಮಿತಿಯಿಂದ ಹೊರಬರಬೇಕೆಂಬ ಮನವಿ ಸಹ ಮಾಡಿಕೊಂಡಿದ್ದೇವೆ. ಜತೆಗೆ ವಿಧಾನಸಭೆ ಮಾಜಿ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಅವರು ಮೇ 23ರಂದು ಮುಖ್ಯಮಂತ್ರಿಗೆ ನೇರವಾಗಿ ಪತ್ರ ಬರೆದು ಶೋಧನಾ ಸಮಿತಿಯ ನೇಮಕಾತಿ ಮರುಪರಿಶೀಲಿಸಲು ಆಗ್ರಹಿಸಿರುವುದನ್ನು ಸಹ ಇಲ್ಲಿ ಸ್ಮರಿಸಬಹುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕೃಷಿ ವಿವಿ ನಿವೃತ್ತ ಕುಲಪತಿ ಡಾ. ಡಿ.ಪಿ. ಬಿರಾದಾರ, ಗ್ರಾಮೀಣಾಭಿವೃದ್ಧಿ ತಜ್ಞ ಡಾ. ಪ್ರಕಾಶ ಭಟ್, ಡಾ. ಎಸ್.ಎಂ. ಮಂಟೂರ ಇದ್ದರು.