ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಒತ್ತಾಯ

KannadaprabhaNewsNetwork |  
Published : Jan 25, 2025, 01:00 AM IST
ರೋಣ ತಾಲೂಕಿನ ಯಾವಗಲ್ಲ ಗ್ರಾಮದ ಹಿಂದು ಲಿಂಗಾಯತ ಸಮಾಜಕ್ಕೆ ಸ್ಮಶಾನ ಮಂಜೂರು ಮಾಡುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ನೂರಾರು ವರ್ಷಗಳಿಂದ ಆ ಜಮೀನಿನಲ್ಲೇ ಅಂತ್ಯಕ್ರಿಯೆಗಳು ನಡೆಯುತ್ತಿವೆ. ಈಗ ಪಂಚಾಯಿತಿಯ ನಿರ್ಧಾರದಿಂದ ಏನು ಮಾಡಬೇಕು ಎಂಬುದು ತೋಚುತ್ತಿಲ್ಲ

ಗದಗ: ರೋಣ ತಾಲೂಕಿನ ಯಾವಗಲ್ಲ ಗ್ರಾಮದ ಹಿಂದು ಲಿಂಗಾಯತ ಸಮಾಜಕ್ಕೆ ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿ ಗ್ರಾಮಸ್ಥರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.

ಗ್ರಾಮದ ಸರ್ವೆ ನಂ. 283/1 ರಲ್ಲಿ ನೂರಾರು ವರ್ಷಗಳಿಂದ ಶವಸಂಸ್ಕಾರ ಮಾಡುತ್ತಿದ್ದೇವೆ. ಆ ಜಾಗದಲ್ಲಿ ಅಂತ್ಯಸಂಸ್ಕಾರ ಮಾಡದಂತೆ ಗ್ರಾಪಂ ಏಕಾಏಕಿ ನೋಟಿಸ್ ಅಂಟಿಸಿದೆ. ಇದರಿಂದ ಹಿಂದು ಲಿಂಗಾಯತ ಸಮಾಜದ ಜನರಿಗೆ ತೊಂದರೆಯಾಗಿದೆ. ಅಧಿಕಾರಿಗಳ ಈ ಕುರಿತು ಸ್ಥಳ ಪರಿಶೀಲನೆ ಮಾಡಿ ಯಥಾ ಸ್ಥಿತಿ ಕಾಪಾಡಬೇಕು. ನಿಯಮಾನುಸಾರ ಜಮೀನನ್ನು ರುದ್ರಭೂಮಿ ಎಂದು ದಾಖಲು ಮಾಡಿ ಎಂದು ಮನವಿಯಲ್ಲಿ ಕೋರಿದ್ದಾರೆ.

ನೂರಾರು ವರ್ಷಗಳಿಂದ ಆ ಜಮೀನಿನಲ್ಲೇ ಅಂತ್ಯಕ್ರಿಯೆಗಳು ನಡೆಯುತ್ತಿವೆ. ಈಗ ಪಂಚಾಯಿತಿಯ ನಿರ್ಧಾರದಿಂದ ಏನು ಮಾಡಬೇಕು ಎಂಬುದು ತೋಚುತ್ತಿಲ್ಲ. ಜಿಲ್ಲಾಧಿಕಾರಿ, ತಹಸೀಲ್ದಾರ್‌ ಇಬ್ಬರಿಗೂ ಮನವಿ ಸಲ್ಲಿಸಿದ್ದೇವೆ ಎಂದು ಗ್ರಾಮಸ್ಥರು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೀದಿ ನಾಯಿ ಮರಿ ದತ್ತು ಪಡೆದು ಮಾನವೀಯತೆ ತೋರಿ
5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಕಡ್ಡಾಯ