ಕೋಲೂರು ಸಾಂಸ್ಕೃತಿಕ ಭವನದ ಹೆಸರು ಬದಲಿಸಲು ಆಗ್ರಹ

KannadaprabhaNewsNetwork |  
Published : Sep 20, 2024, 01:37 AM IST
ಪೊಟೋ೧೯ಸಿಪಿಟಿ: ತಾಲೂಕಿನ ಕೋಲೂರು ಗ್ರಾಮದಲ್ಲಿ ಗ್ರಾಮಸ್ಥರು ಪತ್ರಿಕಾಗೋಷ್ಠಿ ನಡೆಸಿದರು. | Kannada Prabha

ಸಾರಾಂಶ

ಚನ್ನಪಟ್ಟಣ: ತಾಲೂಕಿನ ಕೋಲೂರು ಗ್ರಾಮದ ಸರ್ಕಾರಿ ಜಾಗದಲ್ಲಿ ಜನಪ್ರತಿನಿಧಿಗಳ ಕ್ಷೇತ್ರಾಭಿವೃದ್ಧಿ ಅನುದಾನದಡಿ ನಿರ್ಮಿಸುತ್ತಿರುವ ಸಾಂಸ್ಕೃತಿಕ ಭವನಕ್ಕೆ ಖಾಸಗಿ ವ್ಯಕ್ತಿ ಹೆಸರಿಡುವುದನ್ನು ವಿರೋಧಿಸಿ, ಅನುದಾನದ ಲೆಕ್ಕಪತ್ರ ಮಂಡಿಸಬೇಕು ಎಂದು ಕೋಲೂರು ಗ್ರಾಮಸ್ಥರು ಆಗ್ರಹಿಸಿದರು.

ಚನ್ನಪಟ್ಟಣ: ತಾಲೂಕಿನ ಕೋಲೂರು ಗ್ರಾಮದ ಸರ್ಕಾರಿ ಜಾಗದಲ್ಲಿ ಜನಪ್ರತಿನಿಧಿಗಳ ಕ್ಷೇತ್ರಾಭಿವೃದ್ಧಿ ಅನುದಾನದಡಿ ನಿರ್ಮಿಸುತ್ತಿರುವ ಸಾಂಸ್ಕೃತಿಕ ಭವನಕ್ಕೆ ಖಾಸಗಿ ವ್ಯಕ್ತಿ ಹೆಸರಿಡುವುದನ್ನು ವಿರೋಧಿಸಿ, ಅನುದಾನದ ಲೆಕ್ಕಪತ್ರ ಮಂಡಿಸಬೇಕು ಎಂದು ಕೋಲೂರು ಗ್ರಾಮಸ್ಥರು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗ್ರಾಪಂ ಸದಸ್ಯ ಇಂದುಕುಮಾರ್, ಸರ್ಕಾರಿ ಜಾಗದಲ್ಲಿ ನಿರ್ಮಿಸಿರುವ ಭವನಕ್ಕೆ ವ್ಯಕ್ತಿಯೊಬ್ಬರ ಹೆಸರಿವುದು ಸರಿಯಲ್ಲ. ಕೂಡಲೇ ಈ ನಿರ್ಣಯವನ್ನು ಕೈಬಿಡಬೇಕು. ಸಾಂಸ್ಕೃತಿಕ ಭವನ ಗ್ರಾಮ ಪಂಚಾಯಿತಿಗೆ ಸೇರಿದ ಸ್ವತ್ತಾಗಿದ್ದು, ಭವನದ ನಿರ್ಮಾಣಕ್ಕೆ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರ ಕ್ಷೇತ್ರಾಭಿವೃದ್ಧಿ ನಿಧಿಯಿಂದ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅನುದಾನ ಪಡೆಯಲಾಗಿದೆ. ಇಂತಹ ಭವನಕ್ಕೆ ಕೆ.ಪಿ.ಭವನ ಎಂದು ಹೆಸರಿಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಕೆಲ ವರ್ಷಗಳ ಹಿಂದೆ ಟ್ರಸ್ಟ್ ರಚಿಸಿಕೊಂಡು ಭವನ ನಿರ್ಮಿಸಲಾಗಿದೆ. ಭವನದ ಹೆಸರಿನ ಎಲ್ಲಾ ದಾಖಲೆಗಳಲ್ಲಿ ಸಾಂಸ್ಕೃತಿಕ ಭವನ ಎಂದೇ ಇದೆ. ಇದೀಗ ಉದ್ಘಾಟನೆ ಆದ ಬಳಿಕ ಭವನಕ್ಕೆ ಕೆ.ಪಿ.ಭವನ ಎಂದು ಹೆಸರಿಡುವುದು ನಿಯಮ ಬಾಹಿರ. ಈ ಬಗ್ಗೆ ಜಿಪಂ ಸಿಇಒ ಹಾಗೂ ತಾಪಂ ಇಒ ಅವರ ಗಮನಕ್ಕೆ ತಂದು, ಜತೆಗೆ ಗ್ರಾಪಂ ಸಭೆಯಲ್ಲೂ ಹೆಸರು ತೆರವು ಮಾಡಲು ಸೂಚಿಸಲಾಗಿತ್ತು. ಆದರೆ ಇದೀಗ ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ಸಹ ನಿರ್ಣಯ ಪಾಲಿಸುತ್ತಿಲ್ಲ. ಈ ನಿಟ್ಟಿನಲ್ಲಿ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೂ ಅದಕ್ಕೆ ಜಿಲ್ಲಾ ಪಂಚಾಯ್ತಿಯ ಸಿಇಒ ಅವರೆ ಕಾರಣವಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಗ್ರಾಪಂ ಮಾಜಿ ಸದಸ್ಯ ಮಹೇಶ್, ಯಜಮಾನ್ ಶಂಕರೇಗೌಡ, ಪುಟ್ಟರಾಜು, ರಾಮಚಂದ್ರು, ಮಹೇಶ್, ಶಿವರಾಮು, ಶಿವಲಿಂಗಯ್ಯ, ಮರಿಯಪ್ಪ, ಮರಿದೇವರು, ಉಮಾಶಂಕರ್, ಗೋಪಾಲಕೃಷ್ಣ, ಮದುಕುಮಾರ್, ದೊರೆಸ್ವಾಮಿ, ಸುಮಂತ್ ಇತರರಿದ್ದರು.

ಪೊಟೋ೧೯ಸಿಪಿಟಿ:

ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮಸ್ಥರು ಗ್ರಾಮದಲ್ಲಿ ಸಾಂಸ್ಕೃತಿಕ ಭವನಕ್ಕೆ ಹೆಸರಿಡುವುದನ್ನು ವಿರೋಧಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಕ್ಷ್ಮೇಶ್ವರದಲ್ಲಿ ಪ್ರಾರಂಭವಾದ ಮೆಕ್ಕೆಜೋಳ ಖರೀದಿ, ಮುಗಿಯದ ಗೊಂದಲ!
ವಿಶ್ವಕರ್ಮ ಮಹಾ ಒಕ್ಕೂಟ ಜಿಲ್ಲಾ ಘಟಕ ಉದ್ಘಾಟನೆ