ಕನ್ನಡಪ್ರಭ ವಾರ್ತೆ, ಕೊಪ್ಪ:
ಪ್ರಸ್ತಾವಿತ ರೈಲ್ವೇ ಮಾರ್ಗದ ಶಿವಮೊಗ್ಗ ಪ್ರಮುಖ ವಾಣಿಜ್ಯ ನಗರವಾಗಿದ್ದರೆ, ಭದ್ರಾವತಿ ಕೈಗಾರಿಕಾ ನಗರವಾಗಿದೆ. ಎನ್.ಆರ್.ಪುರ ಸ್ವಾತಂತ್ರ್ಯ ಪೂರ್ವದಿಂದಲೂ ಶಿವಮೊಗ್ಗದೊಂದಿಗೆ ರೈಲ್ವೆ ಸಂಪರ್ಕ ಹೊಂದಿದ ಇತಿಹಾಸ ಹೊಂದಿದೆ. ಬಾಳೆಹೊನ್ನೂರಿನಲ್ಲಿ ವಿಶ್ವ ಪ್ರಸಿದ್ಧ ಶ್ರೀ ರಂಭಾಪುರಿ ಮಹಾಸಂಸ್ಥಾನ ಮಠವಿದೆ. ಕೊಪ್ಪ ಮಲೆನಾಡಿನ ಪ್ರಮುಖ ವಾಣಿಜ್ಯ, ಶಿಕ್ಷಣ ಮತ್ತು ಆಡಳಿತ ಕೇಂದ್ರವಾಗಿದೆ. ಹರಪುರದಲ್ಲಿ ಐತಿಹಾಸಿಕ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನವಿದೆ. ಇನ್ನು ಶೃಂಗೇರಿಗೆ ಪ್ರತಿದಿನ ಹತ್ತಾರು ಸಾವಿರ ಜನ ಶ್ರೀ ಶಾರದಾ ಪೀಠಕ್ಕೆ ಆಗಮಿಸುತ್ತಾರೆ. ಹೀಗಾಗಿ ಈ ಮಾರ್ಗದಲ್ಲಿ ರೈಲ್ವೆ ಯೋಜನೆ ಆರಂಭಿಸುವುದು ಅತಿ ಸೂಕ್ತ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಶೃಂಗೇರಿ ವಿಧಾನಸಭಾ ಕ್ಷೇತ್ರ ಕರ್ನಾಟಕದ ಅತ್ಯಂತ ಸುಂದರವಾದ ಮಲೆನಾಡು ಪ್ರದೇಶವಾಗಿದ್ದರೂ, ಅಭಿವೃದ್ಧಿಯ ದೃಷ್ಟಿಯಿಂದ ಇನ್ನೂ ಹಿಂದುಳಿದಿದೆ. ಈ ಭಾಗಕ್ಕೆ ರೈಲ್ವೆ, ವಿಮಾನ ಸಂಪರ್ಕವೇ ಇಲ್ಲ. ಇದೇ ಕಾರಣದಿಂದ ಕೈಗಾರಿಕಾ ವಲಯಗಳು ದೊಡ್ಡ ದೊಡ್ಡ ಕೈಗಾರಿಕೆಗಳು ಮಾಹಿತಿ ತಂತ್ರಜ್ಞಾನ ಅಥವಾ ಸಾಪ್ಟ್ವೇರ್ ಕಂಪನಿಗಳು ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಈ ಭಾಗದಲ್ಲಿ ಯಾವುದೇ ಸಾರಿಗೆ ಸೌಕರ್ಯ ಇಲ್ಲದಿರುವುದರಿಂದ ಪ್ರತಿವರ್ಷ ಶಿಕ್ಷಣ ಪೂರ್ಣಗೊಳಿಸುವ ನಾಲ್ಕು ಸಾವಿರಕ್ಕೂ ಹೆಚ್ಚು ಯುವ ಜನತೆ ಉದ್ಯೋಗ ಅರಸಿ ಬೆಂಗಳೂರು, ಮೈಸೂರು, ಮಂಗಳೂರು, ಶಿವಮೊಗ್ಗ ನಗರಗಳಿಗೆ ವಲಸೆ ಹೋಗಬೇಕಾದ ಪರಿಸ್ಥಿತಿ ಇದೆ. ಹೊಸ ರೈಲ್ವೆ ಮಾರ್ಗ ನಿರ್ಮಾಣಗೊಂಡರೆ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಪ್ರತಿದಿನ ದೊಡ್ಡ ದೊಡ್ಡ ನಗರಗಳಿಗೆ ತೆರಳಬಹುದಾಗಿದೆ. ಅಲ್ಲದೆ ರೋಗಿಗಳು ಕಡಿಮೆ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇರುವ ನಗರಗಳಿಗೆ ತೆರಳಬಹುದಾಗಿದೆ. ಇನ್ನು ರೈತರು ತಾವು ಬಡಿತ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳನ್ನು ಸುಲಭವಾಗಿ ಮಾರುಕಟ್ಟೆಗೆ ಸಾಗಿಸಲು ಅನುಕೂಲವಾಗುತ್ತದೆ ಎಂದು ಮನವಿಯಲ್ಲಿ ಸವಿಸ್ತಾರವಾಗಿ ತಿಳಿಸಿದ್ದಾರೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಮೈಸೂರು ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಅಧ್ಯಕ್ಷ ಲಿಂಗರಾಜು ಉಪಸ್ಥಿತರಿದ್ದರು.