ಕೊಪ್ಪಳವನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ

KannadaprabhaNewsNetwork |  
Published : Sep 17, 2026, 02:15 AM IST
ಪಾದಯಾತ್ರೆ ಬಳಿಕ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ ನೇತೃತ್ವದಲ್ಲಿ ಎರಡು ದಿನ ನಡೆದ ‘ನ್ಯಾಯಕ್ಕಾಗಿ ನಡಿಗೆ’ ಪಾದಯಾತ್ರೆಯ ಸಮಾರೋಪದಲ್ಲಿ ಕೊಪ್ಪಳವನ್ನು ತಕ್ಷಣ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಜೆಡಿಎಸ್ ಮುಖಂಡರು ಸರ್ಕಾರವನ್ನು ಒತ್ತಾಯಿಸಿದರು.

ಕೊಪ್ಪಳ: ಕೊಪ್ಪಳವನ್ನು ತಕ್ಷಣ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಜೆಡಿಎಸ್ ಮುಖಂಡರು ಸರ್ಕಾರವನ್ನು ಒತ್ತಾಯಿಸಿದರು.

ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ ನೇತೃತ್ವದಲ್ಲಿ ಎರಡು ದಿನ ನಡೆದ ‘ನ್ಯಾಯಕ್ಕಾಗಿ ನಡಿಗೆ’ ಪಾದಯಾತ್ರೆಯ ಸಮಾರೋಪದಲ್ಲಿ ಮಾತನಾಡಿದ ಅವರು, ಹವಾಮಾನ ಇಲಾಖೆ ಏಪ್ರಿಲ್‌ನಲ್ಲೇ ಬರದ ಮುನ್ಸೂಚನೆ ನೀಡಿದ್ದರೂ ಸರ್ಕಾರ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಜೂನ್‌ನಲ್ಲಿ ಮುಂಗಾರು ವಿಫಲವಾದ ಬಳಿಕ ಬೆಳೆಹಾನಿ ಸಮೀಕ್ಷೆ ನಡೆಸಿ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು ಹಾಗೂ ಕೊಪ್ಪಳವನ್ನು ಬರಪೀಡಿತ ತಾಲೂಕು ಎಂದು ಘೋಷಿಸಬೇಕು ಎಂದು ಒತ್ತಾಯಿಸಲಾಗಿತ್ತು. ಆದರೆ, ಸರ್ಕಾರ ಹಾಗೂ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸ್ಪಂದಿಸಿಲ್ಲ ಎಂದು ಚಂದ್ರಶೇಖರ ಆರೋಪಿಸಿದರು.

ಪಾದಯಾತ್ರೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ, ಆ. 27ರಂದು ಪ್ರಕಟಿಸಿದ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಕೊಪ್ಪಳವನ್ನು ಸೇರಿಸದಿರುವುದು ಜನರ ಸಂಕಷ್ಟದ ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂದರು.

ತಾಲೂಕು ಗೌರವಾಧ್ಯಕ್ಷ ಈಶಪ್ಪ ಮಾದಿನೂರು ಮಾತನಾಡಿ, ಏತ ನೀರಾವರಿ ಕಾಮಗಾರಿಗಳನ್ನು ಪೂರ್ಣಗೊಳಿಸುವುದಾಗಿ ಹೇಳಲಾಗುತ್ತಿದೆ. ಆದರೆ ಕಾಲುವೆ, ಪೈಪ್ ಕಾಮಗಾರಿಗಳೇ ಪೂರ್ಣಗೊಂಡಿಲ್ಲ ಎಂದು ಟೀಕಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಜಡಿ, ಜಿಲ್ಲಾ ಉಪಾಧ್ಯಕ್ಷ ಮೂರ್ತೆಪ್ಪ ಗಿಣಿಗೇರಿ, ಓಬಿಸಿ ಘಟಕದ ಅಧ್ಯಕ್ಷ ಕರಿಯಪ್ಪ ಹಾಲವರ್ತಿ ಹಾಗೂ ಯುವ ಘಟಕದ ಕಾರ್ಯಾಧ್ಯಕ್ಷ ರಾಜು ನಾಯಕ್ ಮಾತನಾಡಿದರು.

ದೇವದುರ್ಗ ಶಾಸಕಿ ಕರಿಯಮ್ಮ ನಾಯಕ ಅವರು ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಬರ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು.

ನಿಯೋಗದಿಂದ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ್, ಈಗಾಗಲೇ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಶೀಘ್ರದಲ್ಲೇ ಮತ್ತಷ್ಟು ತಾಲೂಕುಗಳನ್ನು ಪಟ್ಟಿಗೆ ಸೇರಿಸುವ ನಿರೀಕ್ಷೆಯಿದೆ. ಕೊಪ್ಪಳವೂ ಸೇರುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಜೆಡಿಎಸ್ ಬಿಜೆಯಿಂದ ಒಬ್ಬರೇ ಅಭ್ಯರ್ಥಿ: ಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಇರುವುದರಿಂದ ಒಬ್ಬರೇ ಅಭ್ಯರ್ಥಿಯಾಗಲಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ ಹೇಳಿದ್ದಾರೆ. ಪಾದಯಾತ್ರೆಯಲ್ಲಿ ಸುದ್ದಿಗಾರರ ಪ್ರಶ್ನೆ ಉತ್ತರಿಸಿದ ಅವರು, ಈ ಸಲ ಎರಡು ಪಕ್ಷಗಳ ಜಂಟಿಯಾಗಿ ಗೆಲುವಿಗಾಗಿ ಶ್ರಮಿಸಲಿದ್ದಾರೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೋಗ - ಮುಪ್ಪುಮೀರಲು ಉಷಃಪಾನ, ನಾಸಾಪಾನ ಸಹಕಾರಿ
ಗೌರಿ​ಗಣೇಶ ಹಬ್ಬಕ್ಕೆ ಮನಸೋತ ಜರ್ಮನ್ ಪ್ರಜೆ