ಲಕ್ಷ್ಮೇಶ್ವರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

KannadaprabhaNewsNetwork |  
Published : Aug 31, 2026, 02:45 AM IST
ಪೊಟೋ-ಲಕ್ಷ್ಮೇಶ್ವರ ತಾಲೂಕನ್ನು  ಬರ ಪೀಡಿತ ತಾಲೂಕಾಗಿ ಘೋಷಣೆ ಮಾಡುವಂತೆ ಬಿಜೆಪಿ ಪಕ್ಷದವತಿಯಿಂದ ತಹಸೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.  | Kannada Prabha

ಸಾರಾಂಶ

ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಮರ್ಪಕ ಮಳೆಯಿಲ್ಲದೆ ಬೆಳೆಗಳು ಒಣಗುತ್ತಿದ್ದು, ಬಿತ್ತನೆ ಮಾಡಿದ ಬೆಳೆಗಳಿಗೆ ನಿರೀಕ್ಷಿತ ಇಳುವರಿ ದೊರೆಯುವ ಸಾಧ್ಯತೆ ಕಡಿಮೆಯಾಗಿದೆ.

ಲಕ್ಷ್ಮೇಶ್ವರ: ತಾಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು, ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ಸಾಲ ಮರುಪಾವತಿಗೆ ಒತ್ತಡ ಹೇರದಂತೆ ಬ್ಯಾಂಕ್‌ಗಳಿಗೆ ಸೂಚನೆ ಕೊಡಬೇಕು ಎಂದು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಡಿ.ವೈ. ಹುನಗುಂದ ಹಾಗೂ ಶಿರಹಟ್ಟಿ ಮಂಡಲ ತಾಲೂಕು ಅಧ್ಯಕ್ಷ ಸುನೀಲ ಮಹಾಂತಶೆಟ್ಟರ ಆಗ್ರಹಿಸಿದರು.ಶನಿವಾರ ಶಿರಹಟ್ಟಿ ಬಿಜೆಪಿ ಮಂಡಲದಿಂದ ಗ್ರೇಡ್ 2 ತಹಸೀಲ್ದಾರ್ ಮಂಜುನಾಥ ಅಮಾಸಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಮರ್ಪಕ ಮಳೆಯಿಲ್ಲದೆ ಬೆಳೆಗಳು ಒಣಗುತ್ತಿದ್ದು, ಬಿತ್ತನೆ ಮಾಡಿದ ಬೆಳೆಗಳಿಗೆ ನಿರೀಕ್ಷಿತ ಇಳುವರಿ ದೊರೆಯುವ ಸಾಧ್ಯತೆ ಕಡಿಮೆಯಾಗಿದೆ. ಇದರಿಂದ ರೈತರು ಆರ್ಥಿಕವಾಗಿ ಬಹಳಷ್ಟು ತೊಂದರೆ ಅನುಭವಿಸುವಂತಾಗಿದೆ.

ಕೃಷಿ ಚಟುವಟಿಕೆಗಳಿಗೆ ಮಾಡಿರುವ ಖರ್ಚು ಸಹ ವಾಪಸ್ ಬಾರದ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಬೆಳೆ ನಷ್ಟದಿಂದಾಗಿ ಕೃಷಿ ಸಾಲ, ಬೆಳೆ ಸಾಲ ಹಾಗೂ ಇತರೆ ಸಾಲಗಳನ್ನು ಸಕಾಲದಲ್ಲಿ ಪಾವತಿಸಲು ಸಾಧ್ಯವಾಗದ ಸ್ಥಿತಿ ಎದುರಿಸುತ್ತಿದ್ದಾರೆ. ತಾಲೂಕಿನ ಬರ ಪರಿಸ್ಥಿತಿಯ ಕುರಿತು ತಕ್ಷಣ ಸಮಗ್ರ ಸಮೀಕ್ಷೆ ನಡೆಸಿ, ತಾಲೂಕನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳು ಭರ ಅಧ್ಯಯನ ಮಾಡಿ ಸರಿಯಾಗಿ ಸರ್ಕಾರಕ್ಕೆ ಮಾಹಿತಿ ಕೊಡದೆ ಇರುವುದರಿಂದ ಬರಪೀಡಿತ ತಾಲೂಕ ಘೋಷಣೆ ಕೈ ತಪ್ಪಿದೆ.

ಅಧಿಕಾರಿಗಳು ಬೇಜವಾಬ್ದಾರಿ ತೋರಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕೆಲವು ಬ್ಯಾಂಕ್‌ಗಳ ಅಧಿಕಾರಿಗಳು ರೈತರಿಗೆ ಸಾಲದ ಕಂತು ಹಾಗೂ ಬಾಕಿ ಮೊತ್ತವನ್ನು ತಕ್ಷಣ ಪಾವತಿಸುವಂತೆ ಒತ್ತಡ ಹೇರುತ್ತಿರುವುದು ರೈತರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಬೆಳೆ ನಷ್ಟದ ಕುರಿತು ಗ್ರಾಮವಾರು ಹಾಗೂ ರೈತವಾರು ಸಮೀಕ್ಷೆ ನಡೆಸಿ, ಅರ್ಹ ರೈತರಿಗೆ ಸರ್ಕಾರದ ಬರ ಪರಿಹಾರ ಹಾಗೂ ಇತರೆ ಸೌಲಭ್ಯಗಳು ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ಕೊಟ್ಟರು.

ಈ ವೇಳೆ ಬಿಜೆಪಿ ಮುಖಂಡ ನೀಲಪ್ಪ ಕರ್ಜಕಣ್ಣವರ, ನಿಂಗಪ್ಪ ಬನ್ನಿ, ನವೀನ ಹಿರೇಮಠ, ನಾಗಯ್ಯ ಮಠಪತಿ, ವೀರೇಶ ಸಾಸಲವಾಡ, ಅನಿಲ ಮುಳಗುಂದ ಮಾತನಾಡಿದರು. ಈ ವೇಳೆ ರೈತ ಮೋರ್ಚಾ ತಾಲೂಕು ಅಧ್ಯಕ್ಷ ಅಜ್ಜಪ್ಪ ಹೂಗಾರ, ಶಿರಹಟ್ಟಿ ಮಂಡಲ ಪ್ರ.ಕಾರ್ಯದರ್ಶಿ ಗಂಗಾಧರ ಮೆಣಸಿನಕಾಯಿ, ತಾಲೂಕು ಯುವ ಘಟಕ ಅಧ್ಯಕ್ಷ ಬಸವರಾಜ ಚಕ್ರಸಾಲಿ, ಎಂ.ಆರ್. ಪಾಟೀಲ, ನಗರ ಅಧ್ಯಕ್ಷ ವಿಜಯ ಕುಂಬಾರ, ಮಂಜನಗೌಡ ಕೆಂಚನಗೌಡ್ರ, ತುಕ್ಕಪ್ಪ ಪೂಜಾರ, ಪ್ರಕಾಶ ಮಾದನೂರ, ಗಿರೀಶ ಚೌರಡ್ಡಿ, ಜಗದೀಶಗೌಡ ಪಾಟೀಲ, ದುಂಡೇಶ ಕೋಟಗಿ, ವಿಜಯ ಮೆಕ್ಕಿ ಬಸವರಾಜ ಮಲ್ಲೂರ, ಅಪ್ಪಣ್ಣ ಮುಳಗುಂದ, ಕಿರಣ ಮಹಾಂತಶೆಟ್ಟರ, ಸಂತೋಷ ಚಕ್ರಸಾಲಿ, ಸಚಿನ ಮೇಲ್ಮುರಿ, ಸಿದ್ದು ಬಿಜ್ಜೂರಮಠ, ರಮೇಶ ಹಾಳದೊಟದ, ಸಂತೋಷ ಜಾವೂರ, ವಿಶಾಲ ಬಟಗುರ್ಕಿ, ಬಸವರಾಜ ಮಜ್ಜಿಗುಡ್ಡ, ಲಕ್ಷ್ಮಣ ಲಮಾಣಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಖ್ಯಾಬಲ ಕಾಂಗ್ರೆಸ್‌ಗಿದ್ದರೂ ಪಿಕಾರ್ಡ್ ಬ್ಯಾಂಕ್ ಗದ್ದುಗೆ ಬಿಜೆಪಿಗೆ!
ವೈಚಾರಿಕ ಚಿಂತನೆ ಬೆಳೆಸಲು ಅಂಬೇಡ್ಕರ್ ಓದು ಪ್ರೇರಣೆ: ಜಗದೀಶ್