ಶಿಕ್ಷಕರ ವರ್ಗಾವಣೆ ಮಾಡದಂತೆ ವಿದ್ಯಾರ್ಥಿಗಳಿಂದ ಪ್ರತಿಭಟನೆ

KannadaprabhaNewsNetwork |  
Published : Jan 10, 2026, 02:15 AM IST
ಹಿರೇಕೆರೂರು ತಾಲೂಕಿನ ಅರಳೀಕಟ್ಟಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆಗೆ ಕಾಯಂ ಶಿಕ್ಷಕರ ನೀಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಮಲಯಾಳಂ ಮಸೂದೆ ವಾಪಸ್ ಪಡೆಯಲು ಕೇರಳ ಸಿಎಂಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಆಗ್ರಹ ಮಾಡಿದ್ದು, ಮಸೂದೆಯಿಂದ ಕಾಸರಗೂಡನ್ನು ಕೈಬಿಡಲು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಯೋಗ ಹಾಗೂ ಕೇರಳದ ಕಾಸರಗೂಡು ಕನ್ನಡಿಗರು ಸೇರಿದಂತೆ ಜ.7ರಂದು ಕೇರಳ ಸರ್ಕಾರದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಳೆಕರ್ ಅವರಿಗೆ ಮನವಿ ನೀಡಲಾಗಿದೆ ಎಂದು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ತಿಳಿಸಿದ್ದಾರೆ.

ಹಿರೇಕೆರೂರು: ತಾಲೂಕಿನ ಅರಳೀಕಟ್ಟಿ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆಗೆ ಕಾಯಂ ಶಿಕ್ಷಕರ ನೇಮಕಾತಿ, ಹೆಚ್ಚುವರಿಯಾಗಿ ವರ್ಗಾವಣೆಗೊಂಡ ಶಿಕ್ಷಕರನ್ನು ಮುಂದುವರೆಯುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಹಾಗೂ ಎಸ್‌ಡಿಎಂಸಿ ಸದಸ್ಯರು ಪ್ರತಿಭಟಿಸಿದರು.ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಉನ್ನತೀಕರಿಸಿದ ಪ್ರೌಢಶಾಲೆಯಾಗಿ 2024-25ನೇ ಸಾಲಿನಲ್ಲಿ ಮಂಜೂರಾದ ಶಾಲೆಗೆ ಹೊಲಬಿಕೊಂಡ ಸರ್ಕಾರಿ ಶಾಲೆಯಿಂದ ರಘು ಎಮ್.ಎನ್. (ಟಿಜಿಟಿ) ನಿಯೋಜನೆ ಮೇರೆಗೆ ಜೂನ್ ತಿಂಗಳಿಂದ ಇಲ್ಲಿವರೆಗೂ ಕಾರ್ಯ ನಿರ್ವಹಿಸುತ್ತಿದ್ದಾರೆ.

1ರಿಂದ 9ನೇ ತರಗತಿಯವರೆಗೆ 204 ವಿದ್ಯಾರ್ಥಿಗಳ ಪೈಕಿ 8ನೇ ತರಗತಿಯವರೆಗೆ ವಿಷಯವಾರು ಶಿಕ್ಷಕರಿದ್ದಾರೆ. ಆದರೆ ನೂತನವಾಗಿ ಮಂಜೂರಾದ ಪ್ರೌಢಶಾಲೆಗೆ ಒಬ್ಬರೂ ಕಾಯಂ ಶಿಕ್ಷಕರಿಲ್ಲ. ನಿಯೋಜಿತ ವರ್ಗಾವಣೆಯಲ್ಲಿದ್ದ ಒಬ್ಬ ಶಿಕ್ಷಕರನ್ನು ರಾಣಿಬೆನ್ನೂರು ತಾಲೂಕಿನ ಅರೆಮಲ್ಲಾಪುರ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಶಾಲೆಗೆ ವರ್ಗಾವಣೆ ಆಗಿರುತ್ತದೆ.

ಮುಂದಿನ ದಿನಗಳಲ್ಲಿ ಪ್ರವೇಶಾತಿ ಮತ್ತು ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳು ಇರುವುದರಿಂದ ರಘು ಎಮ್. ಎನ್. ಶಿಕ್ಷಕರನ್ನು ವರ್ಗಾವಣೆ ಮಾಡಬಾರದು. ಮಕ್ಕಳ ಶೈಕ್ಷಣಿಕ ಮತ್ತು ಪರೀಕ್ಷಾ ದೃಷ್ಟಿಯಿಂದ ಅರಳಿಕಟ್ಟೆಯಲ್ಲಿ ಈ ಶೈಕ್ಷಣಿಕ ಅವಧಿ ಮುಗಿಯುವವರೆಗೂ ಮುಂದುವರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.ಶಿಕ್ಷಣ ಇಲಾಖೆಯ ತಂತ್ರಾಂಶದಲ್ಲಿ ನಮ್ಮ ಊರಿನ ಶಾಲೆಗೆ ಖಾಲಿ ಇರುವ ಹುದ್ದೆಗಳನ್ನು ತೋರಿಸುತ್ತಿಲ್ಲ. ಹುದ್ದೆಗಳು ಖಾಲಿರುವುದನ್ನು ಇತರೆ ಶಿಕ್ಷಕರ ನೋಡಿ ವರ್ಗಾವಣೆ ತೆಗೆದುಕೊಂಡು ಬರುತ್ತಿದ್ದರು. ಆದರೆ ಇಲಾಖೆಯ ನಿರ್ಲಕ್ಷ್ಯ ದಿಂದಾಗಿ ನಮ್ಮ ಶಾಲೆಗೆ ಖಾಲಿ ಇರುವ ಶಿಕ್ಷಕರ ಹುದ್ದೆಗಳು ಭರ್ತಿ ಮಾಡುತ್ತಿಲ್ಲ, ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ. ಸರ್ಕಾರ ಹಾಗೂ ಅಧಿಕಾರಿಗಳು ಸ್ಪಂದಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಊರಿನ ಗ್ರಾಮಸ್ಥರು ಬೃಹತ್ ಹೋರಾಟ ಮಾಡುತ್ತೇವೆ ಎಂದು ಕಾರ್ಮಿಕ ಮುಖಂಡ ಸಚಿನ್ ಬೂದಿಹಾಳ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾದ ಕಂತೇಶ್ ಮುದ್ದೆರ್, ರೈತ ಮುಖಂಡರಾದ ಫಕ್ಕೀರಪ್ಪ ಸಂಗೋಡ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುಭಾಷ್ ಉಕ್ಕುಂದ್ರು, ಪೋಷಕರಾದ ಶಿವಾನಂದ ಮಾದರ್, ರಮೇಶ್ ಮಾಡ್ಲೆರ್, ನಾಗರಾಜ್ ಬಿದರಿ, ಹೇಗಪ್ಪಾ ಹದಗಲ್ , ಗುಡ್ಡಪ್ಪ ಕಾಸೆಂಬರ್, ವಿದ್ಯಾರ್ಥಿಗಳಾದ ದಿವ್ಯಾ ಕಡೆಮನಿ, ದೀಪಾ ಅರಳಕಟ್ಟಿ, ರಮ್ಯಾ ಮುಡೇರ್, ಸುಮನ್ ಬಾನು ಅಜೀಜ, ತಾಸಿನ ಬಾನು, ಶಿಲ್ಪಾ ಬೂದಿಹಾಳ, ಪವಿತ್ರಾ ಬಸೂರ್, ಕಾವ್ಯ ಗುಡ್ಡಪ್ಪ, ಅನು ರಟ್ಟಿಹಳ್ಳಿ, ವೇದ ಹುಚ್ಚಪ್ಪ, ನಿರ್ಮಲ, ರಾಘು ಎನ್., ಕಾರ್ತಿಕ್ ಬಿ., ಯಲ್ಲಪ್ಪ ಹೆಚ್ಚ, ಪೃಥ್ವಿ ಕಾಸಂಬಿ, ಪ್ರದೀಪ ಅರ್, ಶ್ರೀಧರ ಬಿ., ಸಿದ್ದು ಎಚ್‌., ಮನು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ