ಕಸ್ತೂರಿರಂಗನ್‌ ವರದಿ ಕೈಬಿಡಲು ಆಗ್ರಹ

KannadaprabhaNewsNetwork |  
Published : Sep 16, 2024, 01:53 AM IST
ರವೀಂದ್ರ ನಾಯ್ಕ ಅವರ ನೇತೃತ್ವದಲ್ಲಿ ಸಚಿವ ಮಂಕಾಳ ವೈದ್ಯ ಅವರಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಕಸ್ತೂರಿರಂಗನ್ ವರದಿ ಸಚಿವ ಸಂಪುಟ ಉಪಸಮಿತಿ ಸದ್ಯಸರು ಆಗಿರುವ ಸಚಿವರು, ತಿರಸ್ಕರಿಸಲು ತೀವ್ರ ಒತ್ತಡ ರಾಜ್ಯಾದಂತ ಇದ್ದು, ವರದಿ ತಿರಸ್ಕರಿಸಲು ಒತ್ತಡ ತರಲಾಗುವುದು ಎಂದು ಸಚಿವ ಮಂಕಾಳ ವೈದ್ಯ ಅವರು ಭರವಸೆ ನೀಡಿದರು.

ಹೊನ್ನಾವರ: ಅವೈಜ್ಞಾನಿಕ ಕಸ್ತೂರಿರಂಗನ್ ವರದಿಯ ಕುರಿತು ಸರ್ಕಾರಕ್ಕೆ ಗಾಂಭೀರ್ಯತೆ ಅರಿವಿದೆ. ಸರ್ಕಾರದ ನಿಲುವು ಜನಪರವಾಗಿರುವುದು ಅಲ್ಲದೇ, ಕರಡು ಕಸ್ತೂರಿರಂಗನ್ ವರದಿ ವಿರೋಧಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದರು.

ಸೆ. 19ರಂದು ಕಸ್ತೂರಿರಂಗನ್ ವರದಿ ಕುರಿತು, ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ಸಭೆ ಹಾಗೂ ಸೆ. 25ರಂದು ರಾಜ್ಯ ಸರ್ಕಾರ ವರದಿಯ ಕುರಿತು ನಿಲುವು ಪ್ರಕಟಿಸುವುದರಿಂದ, ಅರಣ್ಯವಾಸಿಗಳ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಭಾನುವಾರ ಸಚಿವರ ಹೊನ್ನಾವರ ತಾಲೂಕಿನ ಕಚೇರಿಯಲ್ಲಿ ನಿಯೋಗ ಭೇಟಿಯಾಗಿ ಮನವಿ ನೀಡಿದ ಸಂದರ್ಭದಲ್ಲಿ ಮಾತನಾಡಿದರು.ಕಸ್ತೂರಿರಂಗನ್ ವರದಿ ಸಚಿವ ಸಂಪುಟ ಉಪಸಮಿತಿ ಸದ್ಯಸರು ಆಗಿರುವ ಸಚಿವರು, ತಿರಸ್ಕರಿಸಲು ತೀವ್ರ ಒತ್ತಡ ರಾಜ್ಯಾದಂತ ಇದ್ದು, ವರದಿ ತಿರಸ್ಕರಿಸಲು ಒತ್ತಡ ತರಲಾಗುವುದು ಎಂದು ಭರವಸೆ ನೀಡಿದರು.

ಉತ್ತರ ಕನ್ನಡದಲ್ಲಿ ವರದಿಯಿಂದ ಜನರ ಮೂಲ ಸೌಕರ್ಯ ಮತ್ತು ಅರಣ್ಯವಾಸಿಗಳ ಹಕ್ಕಿಗೆ ಆತಂಕ ಉಂಟಾಗುವುದು ಎಂದರು.ಜೆ.ಎಂ. ಶೆಟ್ಟಿ ಮಾತನಾಡಿ, ವರದಿ ಜಾರಿಯಿಂದ ಜನರ ಜೀವನಕ್ಕೆ ಬಾಧಕ ಉಂಟಾಗುವುದು ಎಂದರು.ಅವೈಜ್ಞಾನಿಕ ವರದಿ: ಕಸ್ತೂರಿರಂಗನ್ ವರದಿ ಅವೈಜ್ಞಾನಿಕವಾಗಿದ್ದು, ಸೆಟ್‌ಲೈಟ್ ಚಿತ್ರಣದ ಮೂಲಕ ತಯಾರಿಸಿದ ವರದಿಯು ವಾಸ್ತವಿಕ ಮತ್ತು ನೈಜತೆಯ ಚಿತ್ರಣಕ್ಕೆ ವ್ಯತಿರಿಕ್ತವಾಗಿದೆ. ಅಲ್ಲದೇ ಗ್ರಾಮದ ಶೇ. 20ಕ್ಕಿಂತ ಹೆಚ್ಚು ಭೌಗೋಳಿಕ ಪ್ರದೇಶ ಜೀವಿವೈವಿಧ್ಯ ಪರಿಸರ ಸೂಕ್ಷ್ಮವಾಗಿರುವ ಮಾನದಂಡದ ಅಡಿಯಲ್ಲಿ ಸೂಕ್ಷ್ಮ ಪ್ರದೇಶವೆಂದು ಗುರುತಿಸುವುದು ಅವೈಜ್ಞಾನಿಕ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ನಿಯೋಗದಲ್ಲಿ ಪಧಾದಿಕಾರಿಗಳಾದ ದೇವರಾಜ್ ಗೊಂಡ, ಬಾಲಚಂದ್ರ ಶೆಟ್ಟಿ ಆಚವೆ, ಮಹಾಬಲೇಶ್ವರ್ ನಾಯ್ಕ ಬೇಡ್ಕಣಿ, ಸಂಕೇತ ಹೊನ್ನಾವರ, ದಿನೇಶ ನಾಯ್ಕ ಸಿದ್ದಾಪುರ, ವಿನೋದ ನಾಯ್ಕ ಯಲಕೊಟಗಿ, ಚಂದು ಬೆಳಕೆ, ಸುರೇಶ ಕರ್ನಾಕೊಲ್, ಆಯೂಬ್ ಉಮ್ಮರ್ ಬೆಟ್ಟುಳಿ, ಜಿ.ಕೆ. ಗೌಡ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ