ಮಾಗಡಿ: ರಾಜ್ಯ ಸರ್ಕಾರ ನಿಗದಿಪಡಿಸಿರುವ ಜನಗಣತಿ ಸಮೀಕ್ಷೆಗೆ ಇರುವ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ತಹಸೀಲ್ದಾರ್ ಶರತ್ ಕುಮಾರ್ಗೆ ಶಿಕ್ಷಕರು ಮನವಿ ಸಲ್ಲಿಸಿದರು.
ತಾಲೂಕಿನ ಕೆಲವು ಗ್ರಾಮಗಳಲ್ಲಿ ಇಂಟರ್ನೆಟ್ ಸಮಸ್ಯೆ ಇದ್ದು ಮೊಬೈಲ್ ಆ್ಯಪ್ ಸಮರ್ಪಕವಾಗಿ ಕಾರ್ಯ ನಿರ್ವಹಿಸಿದಿರುವ ಕಾರಣ ಅವುಗಳನ್ನು ಆಪ್ಲೈನ್ನಲ್ಲಿ ನಮೂದಿಸುವಂತೆ ಅನುಕೂಲ ಮಾಡಿಕೊಡಬೇಕು. ಗಣತಿದಾರರು ಸಮೀಕ್ಷೆ ಸಮಯದಲ್ಲಿ ಒಟಿಪಿ ಸಮಸ್ಯೆ, ಜತೆಗೆ ಸಮೀಕ್ಷೆಯ ಮನೆಗಳ ಪಟ್ಟಿ ನೀಡುವುದು, ವಿಕಲಚೇತನ ಶಿಕ್ಷಕರಿಗೆ ವಿನಾಯಿತಿ ಹಾಗೂ 55 ವರ್ಷ ದಾಟಿದ ಶಿಕ್ಷಕರಿಗೂ ವಿನಾಯಿತಿ ಮತ್ತು ಆಯಾ ಕ್ಲಸ್ಟರ್ಗಳ ಮೇಲ್ವಿಚಾರಕರ ಮಾಹಿತಿ ಮತ್ತು ಕಾರ್ಯ ನಿರ್ವಹಣೆಗೆ ಸೂಚನೆ ಹಾಗೂ ಬಿಎಲ್ ಒ ಆಗಿ ಸಮೀಕ್ಷೆ ಸಮಿತಿಯಿಂದ ಕೈಬಿಡುವಂತೆ ಮನವಿ ಸಲ್ಲಿಸಿದರು.
ತಹಸೀಲ್ದಾರ್ ಶರತ್ ಕುಮಾರ್ ಮಾತನಾಡಿ, ಇದು ರಾಜ್ಯದ ಸಮಸ್ಯೆಯಾಗಿದ್ದು ಆ್ಯಪ್ ನಲ್ಲಿ ದೋಷ ಕಂಡು ಬಂದಿರುವುದರಿಂದ ಶಿಕ್ಷಕರ ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳ ತಂಡ ವಿಶೇಷ ಸಭೆ ಕರೆದು ಸಮಸ್ಯೆ ಬಗೆಹರಿಸಿ ನಾಳೆಯಿಂದ ಜನಗಣತಿ ಎಂದಿನಂತೆ ನಡೆಯುವಂತೆ ಮಾಡಲಾಗುತ್ತದೆ. ಯಾವುದೇ ರೀತಿ ತೊಂದರೆ ಬಂದರೂ ಅದನ್ನು ಸರಿಪಡಿಸಿ ಸರ್ಕಾರ ನೀಡಿರುವ ಜನಗಣತಿಯನ್ನು ತಾಲೂಕಿನಲ್ಲಿ ಪೂರ್ಣಗೊಳಿಸುತ್ತೇವೆ ಎಂದು ಭರವಸೆ ನೀಡಿದರು.ಪ್ರತಿಭಟನೆಯಲ್ಲಿ ಸರ್ವೆ ಕಾರ್ಯದಲ್ಲಿ ತೊಡಗಿರುವ ತಾಲೂಕಿನ ಬಹುತೇಕ ಶಿಕ್ಷಕರು ಭಾಗವಹಿಸಿದ್ದರು.
(ಫೋಟೋ ಕ್ಯಾಪ್ಷನ್)ಮಾಗಡಿ ತಾಲೂಕು ಕಚೇರಿ ಮುಂದೆ ಜನಗಣತಿಯಲ್ಲಿ ಆ್ಯಪ್ ಸಮಸ್ಯೆ ಸರಿಪಡಿಸುವಂತೆ ತಹಸೀಲ್ದಾರ್ ಶರತ್ ಕುಮಾರ್ಗೆ ಶಿಕ್ಷಕರು ಮನವಿ ಸಲ್ಲಿಸಿದರು.