ಲಕ್ಷ್ಮೇಶ್ವರ: ಬಿಎಲ್ಓ ಕಾರ್ಯದಿಂದ ಶಿಕ್ಷಕರನ್ನು ಕೈಬಿಡಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಶುಕ್ರವಾರ ಗ್ರೇಡ್ 2 ತಹಸೀಲ್ದಾರ್ ಮಂಜುನಾಥ ಅಮಾಸಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಸಭೆಗಳಿಗೆ ಹಾಜರಾಗುವುದು, ಮತದಾರರ ಚೀಟಿಗೆ ಆಧಾರ ಲಿಂಕ್ ಮಾಡುವುದು, ಮತದಾರರ ಸೇರ್ಪಡೆ, ತೆಗೆದು ಹಾಕುವಿಕೆ, ತಿದ್ದುಪಡಿ ಇತರ ಬಹಳಷ್ಟು ಕೆಲಸಗಳಿರುವುದರಿಂದ ಒತ್ತಡಕ್ಕೆ ಸಿಲುಕುವಂತಾಗಿದೆ. ಬೋಧನೆ ಮತ್ತು ಬಿಎಲ್ಓ ಎರಡು ಕೆಲಸ ಸಮರ್ಪಕವಾಗಿ ಮಾಡಲಾಗುತ್ತಿಲ್ಲ. ಕಾರಣ ಶಿಕ್ಷಕರನ್ನು ಈ ಕೆಲಸದಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದರು.ಈ ವೇಳೆ ತಾಲೂಕಿನ ಸರ್ವ ಸಂಘಗಳ ಗೌರವಾಧ್ಯಕ್ಷ ಬಸವರಾಜ ಕುಂಬಾರ, ಸಂಘದ ಖಜಾಂಚಿ ಬಿ.ಬಿ.ಯತ್ತಿನಹಳ್ಳಿ, ಎನ್ ಪಿ ಎಸ್ ಸಂಘದ ಉಪಾಧ್ಯಕ್ಷ ಶ್ರೀಕಾಂತ ನಂದೆಣ್ಣವರ, ಕ ರಾ ಸ ನೌಕರರ ಸಂಘದ ಲಕ್ಷ್ಮೇಶ್ವರ ತಾಲೂಕು ಪ್ರಧಾನ ಕಾರ್ಯದರ್ಶಿ ಎಮ್.ಎ. ನದಾಫ, ಸಂಘದ ಸಂಘಟನಾ ಕಾರ್ಯದರ್ಶಿ ಗೀತಾ ಹಳ್ಯಾಳ, ಕ ರಾ ಸ ನೌ ಸಂಘದ ನಿರ್ದೇಶಕ ಬಿ.ಎಮ್.ಯರಗುಪ್ಪಿ, ಸತೀಶ್ ಬೊಮಲೆ, ಉಮೇಶ ನೇಕಾರ, ಪಿ ಸಿ ಕಾಳಶೆಟ್ಟಿ, ಡಿ.ಎಲ್.ಪಾಟೀಲ, ಎಸ್.ಎನ್. ಕ್ಷತ್ರಿಯ, ಎಸ್.ಎಮ್. ತಾಯಮ್ಮನವರ, ಪಿ.ಪಿ. ಹಿರೇಮಠ, ಎಸ್.ವಿ. ಸೋಗಿ, ಎಲ್.ಆರ್. ಮಲಸಮುದ್ರ, ಎನ್.ಎಸ್. ಬಂಕಾಪೂರ, ಜೆ.ವಿ. ಪಾಟೀಲ, ಎಮ್.ಪಿ. ಹರ್ಲಾಪೂರ,.ಎಸ್.ಎಸ್. ಪಾಟೀಲ, ವಿ.ಎಸ್. ಹಿರೇಮಠ, ಪಿ.ಎಮ್. ಆಡ್ನೂರ, ರಾಜೇಶ್ವರಿ ಅಡರಕಟ್ಟಿ, ಸಿ.ಎಫ್.ಪಾಟೀಲ, ಶ್ರೀನಿವಾಸ ಮತ್ತೂರ ಹಾಗೂ ತಾಲೂಕಿನ ಶಿಕ್ಷಕರು ಹಾಜರಿದ್ದು ಮನವಿ ಸಲ್ಲಿಸಿದರು.