ಶಾಸಕ ಎ. ಆರ್. ಕೃಷ್ಣಮೂರ್ತಿಗೆ ಸಚಿವ ಸ್ಥಾನ ನೀಡಲು ಆಗ್ರಹ

KannadaprabhaNewsNetwork |  
Published : Jul 06, 2025, 01:49 AM IST
ಶಾಸಕರಿಗೆ ಸಚಿವ ಸ್ಥಾನಕ್ಕೆ ತಿಮ್ಮರಾಜಿಪುರ ಆಗ್ರಹ | Kannada Prabha

ಸಾರಾಂಶ

ಶಾಸಕ ಎ. ಆರ್. ಕೃಷ್ಣಮೂರ್ತಿ ಜನಪ್ರಿಯ ನಾಯಕರು, ವಯಸ್ಸು, ಅನುಭವದಲ್ಲಿ ಹಿರಿಯರಾದ ಅವರಿಗೆ ಹೈಕಮಾಂಡ್ ಸಚಿವ ಸ್ಥಾನ ನೀಡಬೇಕು ಎಂದು ಅಖಿಲ ವೀರಶೈವ ಮಹಾಸಭೆ ತಾಲೂಕು ಘಟಕದ ಉಪಾಧ್ಯಕ್ಷ ತಿಮ್ಮರಾಜಿಪುರ ರಾಜು ಒತ್ತಾಯಿಸಿದ್ದಾರೆ

ಕೊಳ್ಳೇಗಾಲ: ಶಾಸಕ ಎ. ಆರ್. ಕೃಷ್ಣಮೂರ್ತಿ ಜನಪ್ರಿಯ ನಾಯಕರು, ವಯಸ್ಸು, ಅನುಭವದಲ್ಲಿ ಹಿರಿಯರಾದ ಅವರಿಗೆ

ಹೈಕಮಾಂಡ್ ಸಚಿವ ಸ್ಥಾನ ನೀಡಬೇಕು ಎಂದು ಅಖಿಲ ವೀರಶೈವ ಮಹಾಸಭೆ ತಾಲೂಕು ಘಟಕದ ಉಪಾಧ್ಯಕ್ಷ

ತಿಮ್ಮರಾಜಿಪುರ ರಾಜು ಒತ್ತಾಯಿಸಿದ್ದಾರೆ .

ಕೃಷ್ಣಮೂರ್ತಿ ಸಂತೇಮರಳ್ಳಿ ಕ್ಷೇತ್ರದಲ್ಲಿ ಸತತ ಎರಡು ಬಾರಿ ಹಾಗೂ ಕೊಳ್ಳೇಗಾಲದಲ್ಲಿ 1 ಬಾರಿ ಶಾಸಕರಾಗಿ ಆಯ್ಕೆಗೊಂಡು ಅನುಭವಿ ರಾಜಕಾರಣಿಯಾಗಿದ್ದಾರೆ. ಈ ಬಾರಿ ಅವರು ಅತ್ಯಧಿಕ ಮತಗಳಿಂದ ಗೆದ್ದು ದಾಖಲೆ ಬರೆದಿದ್ದಾರೆ, ಕ್ಷೇತ್ರದ ಅಭಿವೃದ್ದಿ ದೃಷ್ಠಿಯಿಂದಾಗಿ ಅವರಿಗೆ ಮುಖ್ಯಮಂತ್ರಿಗಳು ಸಚಿವ ಸ್ಥಾನ ನೀಡಬೇಕು. ಶಾಸಕರು ವೀರಶೈವ ಸಮುಧಾಯ ಭವನಗಳ ನಿರ್ಮಾಣಕ್ಕೆ ಹಾಗೂ ಮುಂದುವರೆದ ಕಾಮಗಾರಿಗಳಿಗೆ ₹2.40 ಕೋಟಿ ಅನುದಾನ ನೀಡಿದ್ದಾರೆ. ಇದು ಸಂತಸದ ವಿಚಾರ, ಈ ಹಿನ್ನೆಲೆ ಅವರ ಕೈಬಲಪಡಿಸಲು ಹೈಕಮಾಂಡ್ ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುರ್ಚಿ ಕಿತ್ತಾಟ ರಾಜ್ಯದವರೇ ಬಗೆಹರಿಸಿಕೊಳ್ಳಬೇಕು: ಖರ್ಗೆ
ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ