ನರಗುಂದ: ಉತ್ತರ ಕರ್ನಾಟಕ ಭಾಗದ ಜನರ ಕುಡಿಯುವ ನೀರಿನ ಯೋಜನೆಯಾದ ಕಳಸಾ- ಬಂಡೂರಿ ನಾಲಾ ಯೋಜನೆ ಜಾರಿ ಮಾಡಬೇಕೆಂದು ರೈತ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಆಗ್ರಹಿಸಿದರು.
ನ್ಯಾಯಾಧೀಕರಣವು 2018ರ ಆ.14ರಂದು ಧಾರವಾಡ, ಗದಗ, ಬೆಳಗಾವಿ, ಬಾಗಲಕೋಟೆಯ 4 ಜಿಲ್ಲೆಯ 11 ತಾಲೂಕಿಗೆ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದ ಮಹದಾಯಿ ಕಳಸಾ- ಬಂಡೂರಿ ಯೋಜನೆಯಡಿ ನೀರು ಬಳಕೆಗೆ ತೀರ್ಪು ನೀಡಿದೆ. ಅದರಲ್ಲಿ 3.09 ಟಿಎಂಸಿ ಕುಡಿಯುವುದಕ್ಕಾಗಿ ಆದೇಶ ಮಾಡಿ 8 ವರ್ಷ ಗತಿಸಿದರೂ ಇಲ್ಲಿಯವರೆಗೂ ಜಾರಿಯಾಗಿಲ್ಲ ಎಂದರು. ಈ ಯೋಜನೆ ಜಾರಿಯಾಗಲು ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ದೇವೇಂದ್ರಪ್ಪ ದ್ಯಾಪಲೀಶಿ, ಸಿದ್ದಪ್ಪ ಹದ್ದಣ್ಣವರ, ವಿಶ್ವನಾಥ ಬಡಿಗೇರ, ಮೃತ್ಯುಂಜಯ ಕುಸಗಲ್, ಭರಮಪ್ಪ, ಸೇರಿದಂತೆ ಮುಂತಾದವರು ಇದ್ದರು.ಇಂದು ವಿದ್ಯುತ್ ವ್ಯತ್ಯಯ
ನರಗುಂದ: ತಾಲೂಕಿನ ಕೊಣ್ಣೂರಿನ 110/11ಕೆವಿ ಮತ್ತು ಶಿರೋಳದ 33 ಕೆವಿ ಸ್ಟೇಷನ್ ವಿದ್ಯುತ್ ವಿತರಣಾ ಉಪಕೇಂದ್ರದಿಂದ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಜೂ. 24ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ವರಗೆ ವಿದ್ಯುತ್ ವ್ಯತ್ಯಯವಾಗಲಿದೆ. ಈ ವಿದ್ಯುತ್ ವಿತರಣಾ ಉಪಕೇಂದ್ರಗಳಿಂದ ವಿದ್ಯುತ್ ಪೂರೈಕೆಯಾಗುವ 9 ಗ್ರಾಪಂ ವ್ಯಾಪ್ತಿಯ ಗ್ರಾಮಗಳಾದ ಶಿರೋಳ, ಕೊಣ್ಣೂರು, ಹಿರೇಕೊಪ್ಪ, ಚಿಕ್ಕನರಗುಂದ, ಹದಲಿ, ರಡ್ಡೇರನಾಗನೂರ, ಭೈರನಹಟ್ಟಿ, ವಾಸನ, ಬೆನಕನಕೊಪ್ಪ, ಗ್ರಾಪಂನ ಹಳ್ಳಿಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಸಬೇಕೆಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.