ಚಿತ್ರಾವತಿ ಅಣೆಗೆ ಶ್ರೀರಾಮರೆಡ್ಡಿ ಹೆಸರಿಡಲು ಆಗ್ರಹ

KannadaprabhaNewsNetwork |  
Published : Aug 04, 2025, 11:45 PM IST
ಸಿಕೆಬಿ-3 ಚಿತ್ರಾವತಿ ಅಣೆಕಟ್ಟು ಹೋರಾಟ ಸಮಿತಿ ವತಿಯಿಂದ ಚಿತ್ರಾವತಿ ಜಲಾಶಯಕ್ಕೆ ಕಾಂ.ಜಿ.ವಿ.ಶ್ರೀರಾಮರೆಡ್ಡಿ ಹೆಸರಿಡಲು ಆಗ್ರಹಿಸಿ   ಜಿಲ್ಲಾ ಪ್ರಜಾ ಸೌಧದ ಮುಂದೆ  ಪ್ರತಿಭಟನೆ ನಡೆಸಲಾಯಿತು | Kannada Prabha

ಸಾರಾಂಶ

ದೂರದೃಷ್ಟಿ ಹಾಗೂ ಅವಿರತ ಶ್ರಮದ ಫಲವಾಗಿ ಮತ್ತು ಚಿತ್ರಾವತಿ ಅಣೆಕಟ್ಟು ಹೋರಾಟ ಸಮಿತಿ ನೇತೃ ತ್ವದಲ್ಲಿ ನಡೆದ ನಿರಂತರ ಹೋರಾಟ ದಿಂದ ಅಸ್ತಿತ್ವಕ್ಕೆ ಬಂದಿರುವ ಬಾಗೇ ಪಲ್ಲಿ ತಾಲೂಕಿನ ಜೀವನಾಡಿ ಚಿತ್ರಾವತಿ ಜಲಾಶಯಕ್ಕೆ ,ಬಾಗೇಪಲ್ಲಿ ತಾಲ್ಲೂಕು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಸಂಬಂಧ ಇಲ್ಲದ ಎಸ್‌.ಎಂ.ಕೃಷ್ಣ ಹೆಸರು ನಾಮಕರಣ ಮಾಡಬಾರದು

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಚಿತ್ರಾವತಿ ಅಣೆಕಟ್ಟು ಹೋರಾಟ ಸಮಿತಿ ವತಿಯಿಂದ ಚಿತ್ರಾವತಿ ಜಲಾಶಯಕ್ಕೆ ಕಾಂ.ಜಿ.ವಿ.ಶ್ರೀರಾಮರೆಡ್ಡಿ ಹೆಸರಿಡಲು ಆಗ್ರಹಿಸಿ ಸೋಮವಾರ ಬಾಗೇಪಲ್ಲಿಯಿಂದ ಜಿಲ್ಲಾ ಪ್ರಜಾಸೌಧದ ವರೆಗೆ ಬೈಕ್ ರ್‍ಯಾಲಿ ಮೂಲಕ ಆಗಮಿಸಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಸಿಪಿಎಂ ರಾಜ್ಯ ಸಮಿತಿ ಸದಸ್ಯ ಡಾ,ಅನಿಲ್ ಕುಮಾರ್ ಮಾತನಾಡಿ, ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಚಿತ್ರಾವತಿ ಜಲಾಶಯಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಹೆಸರು ನಾಮಕರಣ ಮಾಡುವ ಪ್ರಸ್ತಾಪವು ಅಭಿವೃದ್ಧಿ ರಾಜಕಾರಣದ ಗಂಧ-ಗಾಳಿ ಗೊತ್ತಿಲ್ಲದ ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ರವರ ರಾಜಕೀಯ ಕುಚೇಷ್ಟೆಯಾಗಿದ್ದು, ಈ ಚೇಷ್ಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ರವರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದರು.

ಡ್ಯಾಂಗೆ ಶ್ರೀರಾಮ್ ರೆಡ್ಡಿ ಕಾರಣ

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಸಿಪಿಐಎಂ ನ ಶಾಸಕರಾಗಿದ್ದ ಕಾಮ್ರೇಡ್ ಜಿ.ವಿ.ಶ್ರೀರಾಮ್ ರೆಡ್ಡಿ ರವರ ದೂರದೃಷ್ಟಿ ಹಾಗೂ ಅವಿರತ ಶ್ರಮದ ಫಲವಾಗಿ ಮತ್ತು ಚಿತ್ರಾವತಿ ಅಣೆಕಟ್ಟು ಹೋರಾಟ ಸಮಿತಿ ನೇತೃ ತ್ವದಲ್ಲಿ ನಡೆದ ನಿರಂತರ ಹೋರಾಟ ದಿಂದ ಅಸ್ತಿತ್ವಕ್ಕೆ ಬಂದಿರುವ ಬಾಗೇ ಪಲ್ಲಿ ತಾಲೂಕಿನ ಜೀವನಾಡಿ ಚಿತ್ರಾವತಿ ಜಲಾಶಯಕ್ಕೆ ,ಬಾಗೇಪಲ್ಲಿ ತಾಲ್ಲೂಕು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಯಾವುದೇ ರೀತಿಯಲ್ಲೂ ಸಂಬಂಧ ಇಲ್ಲದ ಬಿಜೆಪಿ ಮುಖಂಡರ ಹೆಸರು ನಾಮಕರಣ ಮಾಡಬಾರದು ಎಂದರು.

ಕಾಂಗ್ರೆಸ್‌- ಬಿಜೆಪಿ ಅನೈತಿಕ ಮೈತ್ರಿ

ಬಾಗೇಪಲ್ಲಿಯ ಕೆಂಬಾವುಟ ಹೋರಾಟದ ಚರಿತ್ರೆಯನ್ನು ಹಾಗೂ ಸಿಪಿಎಂ ಶಾಸಕರ ಅವಧಿಯ ಅಭಿವೃದ್ದಿ ಪರ್ವವನ್ನು ಮಸುಕುಗೊಳಿಸಲು ಕಾಂಗ್ರೆಸ್ ಹಾಗೂ ಬಿಜೆಪಿ ಜಂಟಿಯಾಗಿ ಹೆಣೆದಿರುವ ರಾಜಕೀಯ ಕುತಂತ್ರದಿಂದ ಕಾಂಗ್ರೆಸ್ ಸಚಿವರು ಬಿಜೆಪಿ ಮುಖಂಡರ ಹೆಸರಲ್ಲಿ ಅಣೆಕಟ್ಟಿಗೆ ನಾಮಕರಣ ಮಾಡುವುದಾಗಿ ಹೇಳುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐಎಂ ಅಭ್ಯರ್ಥಿ ಸೋಲಿಸಲು ಕಾಂಗ್ರೆಸ್ ಹಾಗೂ ಬಿಜೆಪಿ ಮಾಡಿಕೊಂಡಿದ್ದ ಅನೈತಿಕ ಮೈತ್ರಿಯು, ಈ ನಾಮಕರಣ ಪ್ರಸ್ತಾಪದ ಮೂಲಕ ಮತ್ತೊಮ್ಮೆ ಬಹಿರಂಗಗೊಂಡಿದೆ ಎಂದು ಆರೋಪಿಸಿದರು.

ಚಿತ್ರಾವತಿ ಜಲಾಶಯಕ್ಕೆ ಎಸ್.ಎಂ.ಕೃಷ್ಣ ರವರ ಹೆಸರು ನಾಮಕರಣ ಮಾಡಲು ಬಾಗೇಪಲ್ಲಿ ಪುರಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನ ಆಗಿದೆ ಎಂಬ ಪುರಸಭೆ ಮುಖ್ಯಾಧಿಕಾರಿ ಹೇಳಿಕೆ ಬಹಳ ವ್ಯವಸ್ಥಿತವಾಗಿ ಹೆಣೆದಿರುವ ಕುತಂತ್ರವಾಗಿದೆ. ಈ ಮೂಲಕ ಪಕ್ಷಾತೀತವಾಗಿ ಜನ ಮನ್ನಣೆ ಗಳಿಸಿದ್ದ ಕಾಂ.ಜಿ.ವಿ.ಶ್ರೀರಾಮರೆಡ್ಡಿ ರವರ ಅಪಾರ ಬೆಂಬಲಿಗರನ್ನು ಹಾಗೂ ಅಣೆಕಟ್ಟು ಹೋರಾಟ ಸಮಿತಿಯ ನೇತೃತ್ವದಲ್ಲಿ ಶ್ರಮಿಸಿದ್ದ ರೈತ ಹೋರಾಟಗಾರರನ್ನು ಅಪಮಾನಿಸಿದೆ ಎಂದರು.

ಪುರಸಭೆ ತೀರ್ಮಾನ ರದ್ದಾಗಲಿ

. ಈ ಕೂಡಲೇ ಪುರಸಭೆ ತೀರ್ಮಾನವನ್ನು ರದ್ದುಪಡಿಸಬೇಕು. ಚಿತ್ರಾ ವತಿ ಜಲಾಶಯಕ್ಕೆ ನಾಮಕರಣ ಮಾಡುವುದಾದರೆ ಈ ಜಲಾಶಯ ನಿರ್ಮಾಣಕ್ಕಾಗಿ ಎಲ್ಲಾ ರೀತಿಯಿಂದ ಲೂ ಶ್ರಮಿಸಿದ್ದ ಕಾಂ.ಜಿ.ವಿ ಶ್ರೀರಾಮರೆಡ್ಡಿ ರವರ ಹೆಸರನ್ನೇ ನಾಮಕರಣ ಮಾಡಬೇಕು. ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಕುತಂತ್ರ ರಾಜಕೀಯ ನಿಲ್ಲಿಸಬೇಕು ಎಂದು ಚಿತ್ರಾವತಿ ಅಣೆಕಟ್ಟು ಹೋರಾಟ ಸಮಿತಿ ಆಗ್ರಹಿಸುತ್ತದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಕೃಷಿಕೂಲಿಕಾರರ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಪಿ ಮುನಿವೆಂಕಟಪ್ಪ, ರಾಜ್ಯ ರೈತಸಂಘ ಪುಟ್ಟಣ್ಣಯ್ಯ ಬಣದ ರಾಜ್ಯ ಉಪಾಧ್ಯಕ್ಷ ಲಕ್ಷ್ಮೀನಾ ರಾಯನರೆಡ್ಡಿ. ಕೆಪಿಆರ್ ಎಸ್ ನ ಜಿಲ್ಲಾ ಮುಖಂಡರಾದ ಬಿ.ಎನ್.ಮುನಿಕೃಷ್ಣಪ್ಪ , ಚನ್ನರಾಯಪ್ಪ ರಮಣ, ಶಿವಪ್ಪ, ಬೈರಾರೆಡ್ಡಿ, ದೇವರಾಜ್, ಕೃಷಪ್ಪ, ರಾಜಪ್ಪ, ದಲಿತ ಹಕ್ಕುಗಳ ಸಮಿತಿಯ ನಾಗರಾಜ್ ,ರಘು ರಾಮರೆಡ್ಡಿ, ಮುನಿಯಪ್ಪ, ರಮಣ, ಈಶ್ವರ ರೆಡ್ಡಿ, ರಮಾಮಣಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ಕುರಿತು ಇಂದು ರಾಜ್ಯ ವಿಶೇಷ ಸಂಪುಟ ಸಭೆ
ಫೆ.13ಕ್ಕೆ ಕಾಂಗ್ರೆಸ್‌ ಸರ್ಕಾರಕ್ಕೆ 1000 ದಿನ