ಅತಿಥಿ ಉಪನ್ಯಾಸಕರಿಗೆ ಹರಿಯಾಣ ಮಾದರಿ ಸೇವಾ ಭದ್ರತೆ ನೀಡಲು ಒತ್ತಾಯ

KannadaprabhaNewsNetwork |  
Published : Feb 15, 2026, 03:15 AM IST
ಸಸಸಸಸ | Kannada Prabha

ಸಾರಾಂಶ

ಅತಿಥಿ ಉಪನ್ಯಾಸಕರನ್ನು ನಮ್ಮ ಸರ್ಕಾರ ಕೈಬಿಡುವುದಿಲ್ಲ. ಅನ್ಯಾಯವನ್ನೂ ಮಾಡುವುದಿಲ್ಲ. ಕಾದು ನೋಡಿ...

ಗಜೇಂದ್ರಗಡ: ಅಖಿಲ ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್‌ ಅತಿಥಿ ಉಪನ್ಯಾಸಕರಿಗೆ ಹರಿಯಾಣ ಮಾದರಿಯಂತೆ ಸೇವಾ ಭದ್ರತೆ ನೀಡಲು ಒತ್ತಾಯಿಸಿ ಎಂಎಲ್‌ಸಿ ಎಸ್‌.ವಿ. ಸಂಕನೂರ ನೇತೃತ್ವದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಅವರಿಗೆ ಮನವಿ ಸಲ್ಲಿಸಲಾಯಿತು.

ಬೆಂಗಳೂರಿನಲ್ಲಿ ಸಚಿವ ಡಾ.ಎಂ.ಸಿ. ಸುಧಾಕರ ಅವರಿಗೆ ಹಮ್ಮಿಕೊಳ್ಳಲಾದ ಗೌರವ ಸಮರ್ಪಣೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಸಂಘದ ನಿಯೋಗವು ವಿವಿಧ ಬೇಡಿಕೆಗಳನ್ನು ಮಂಡಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಯಶವಂತ ಆರೇರ, ಅತಿಥಿ ಉಪನ್ಯಾಸಕರಿಗೆ ಕೆಲಸವೇ ಆಧಾರವಾಗಿದೆ. ಬಹಳಷ್ಟು ಜನರ ವಯೋಮಿತಿ ಮೀರುತ್ತಿದೆ. ಹೀಗಾಗಿ ರಾಜ್ಯ ಸರ್ಕಾರವು ಹರಿಯಾಣ ಮಾದರಿಯಲ್ಲಿ ಸೇವಾ ಭದ್ರತೆ ಕಲ್ಪಿಸಬೇಕು. ಮಾನವೀಯ ನೆಲೆಯಲ್ಲಿ ನೆರವಾಗಬೇಕು. ಸದ್ಯ 941 ಪಾಲಿಟೆಕ್ನಿಕ್‌ ಕಾಯಂ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ತಡೆ ಹಿಡಿಯಬೇಕೆಂದು ಒತ್ತಾಯಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಸಚಿವ ಡಾ.ಎಂ.ಸಿ. ಸುಧಾಕರ, ಅತಿಥಿ ಉಪನ್ಯಾಸಕರನ್ನು ನಮ್ಮ ಸರ್ಕಾರ ಕೈಬಿಡುವುದಿಲ್ಲ. ಅನ್ಯಾಯವನ್ನೂ ಮಾಡುವುದಿಲ್ಲ. ಕಾದು ನೋಡಿ ಎಂದು ಹೇಳಿದರು.

ಎಂಎಲ್‌ಸಿ ಎಸ್‌.ವಿ. ಸಂಕನೂರ ಮಾತನಾಡಿ, ಅತಿಥಿ ಉಪನ್ಯಾಸಕರಿಗೆ ಸರ್ಕಾರವು ಸೇವಾ ಭದ್ರತೆ ಕೊಡಬೇಕೆಂದು ಸಚಿವ ಡಾ.ಎಂ.ಸಿ. ಸುಧಾಕರ ಅವರ ಮನವೊಲಿಸಲು ಯತ್ನಿಸಿದರು.

ಸನ್ಮಾನ: ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಳ, ಹೆರಿಗೆ ರಜೆ, ತಿಂಗಳ ಒಂದು ರಜೆ, ಇಡಿಗಂಟು ಸೇರಿದಂತೆ ವಿವಿಧ ಸೌಲಭ್ಯ ಕಲ್ಪಿಸಲಾಗಿದೆ. ಉನ್ನತ ಶಿಕ್ಷಣಕ್ಕೆ ಹಾಗೂ ಅತಿಥಿ ಉಪನ್ಯಾಸಕರಿಗೆ ಅಪಾರ ಕೊಡುಗೆ ನೀಡಿದ ಹಿನ್ನೆಲೆಯಲ್ಲಿ ಸಚಿವ ಡಾ.ಎಂ.ಸಿ. ಸುಧಾಕರ ಅವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಪ್ರವೀಣಕುಮಾರ ಬೇವಿನಕಟ್ಟಿ, ವಿನೋದ ಗೊಂದನವಾಡಿ, ಶುಭಂ, ಶ್ರೀಧರ ದಿವಾನದ, ರಾಕೇಶ ಕಡಬಿನ, ಅರುಣಕುಮಾರ, ವಿನೋದ ಮರಿನಾಯ್ಕರ್ ಸೇರಿದಂತೆ 500ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಂತ ಖರ್ಚಲ್ಲಿ ವಿದ್ಯಾರ್ಥಿಗಳನ್ನುಕಾಪ್ಟರಲ್ಲಿ ಹಾರಾಡಿಸಿದ ಜಮೀರ್‌
ನಾಟಕ ಕಲೆ ಮಕ್ಕಳ ಭವಿಷ್ಯ ಉತ್ತಮಗೊಳಿಸಲಿದೆ