ಖಾಸಗಿ ಶಾಲೆಗಳಲ್ಲಿ ಇಂಗ್ಲಿಷ್ ನಾಮಫಲಕ ತೆರವುಗೊಳಿಸಲು ಶಾಮಸುಂದರ ಅಡಿಗ ಆಗ್ರಹ

KannadaprabhaNewsNetwork |  
Published : Jul 07, 2025, 11:48 PM IST
ರಾಣಿಬೆನ್ನೂರಿನಲ್ಲಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಸೀಲ್ದಾರ್ ಆರ್.ಎಚ್. ಭಾಗವಾನ ಅವರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಸರ್ಕಾರದ ಆದೇಶದ ಪ್ರಕಾರ ಕನ್ನಡ ಅಕ್ಷರಗಳು ಶೇ. 60ರಷ್ಟು ಮತ್ತು ಇಂಗ್ಲಿಷ್ ಅಕ್ಷರಗಳು ಶೇ. 40ರಷ್ಟು ಇರಬೇಕು. ಆದರೆ ಈ ಎಲ್ಲ ನಿಯಮಗಳನ್ನು ಮೀರಿ ಇಂಗ್ಲಿಷ್‌ ನಾಮಫಲಕಗಳೇ ನಗರದಾದ್ಯಂತ ರಾರಾಜಿಸುತ್ತಿದ್ದು, ಕನ್ನಡ ನಾಮಫಲಕಗಳು ಇಲ್ಲದಂತಾಗಿವೆ.

ರಾಣಿಬೆನ್ನೂರು: ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದಲ್ಲಿರುವ ಖಾಸಗಿ ಶಾಲೆಗಳಲ್ಲಿ ಅಳವಡಿಸಿರುವ ಇಂಗ್ಲಿಷ್ ನಾಮಫಲಕಗಳನ್ನು ತೆರವುಗೊಳಿಸಿ ಕನ್ನಡ ನಾಮಫಲಕ ಅಳವಡಿಸುವಂತೆ ಆಗ್ರಹಿಸಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ತಹಸೀಲ್ದಾರ್ ಆರ್.ಎಚ್. ಭಾಗವಾನ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಶಾಮಸುಂದರ ಅಡಿಗ ಅವರಿಗೆ ಪ್ರತ್ಯೇಕ ಮನವಿ ಸಲ್ಲಿಸಿದರು. ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಜಾಧವ ಮಾತನಾಡಿ, ನಗರದಲ್ಲಿರುವ ಖಾಸಗಿ ಶಾಲೆಗಳಲ್ಲಿ ಇಂಗ್ಲಿಷ್ ನಾಮಫಲಕಗಳು ರಾರಾಜಿಸುತ್ತಿವೆ. ಸರ್ಕಾರದ ಆದೇಶದ ಪ್ರಕಾರ ಕನ್ನಡ ಅಕ್ಷರಗಳು ಶೇ. 60ರಷ್ಟು ಮತ್ತು ಇಂಗ್ಲಿಷ್ ಅಕ್ಷರಗಳು ಶೇ. 40ರಷ್ಟು ಇರಬೇಕು. ಆದರೆ ಈ ಎಲ್ಲ ನಿಯಮಗಳನ್ನು ಮೀರಿ ಇಂಗ್ಲಿಷ್‌ ನಾಮಫಲಕಗಳೇ ನಗರದಾದ್ಯಂತ ರಾರಾಜಿಸುತ್ತಿದ್ದು, ಕನ್ನಡ ನಾಮಫಲಕಗಳು ಇಲ್ಲದಂತಾಗಿವೆ.

ಈ ಎಲ್ಲ ಖಾಸಗಿ ಶಾಲೆಗಳಲ್ಲಿ ಕನ್ನಡ ನಾಮಫಲಕಗಳನ್ನು ಹಾಕಲು ಕೂಡಲೇ ವಿಷಯ ತಿಳಿಸಿ ಸರಿಪಡಿಸುವಂತೆ ಆಯಾ ಶಾಲೆಗೆ ನೋಟಿಸ್ ಕೊಡಬೇಕು. ನಗರಸಭೆ ಪೌರಾಯುಕ್ತರು ಸಹ ಇದರ ಬಗ್ಗೆ ಗಮನಹರಿಸಬೇಕು. ಎಲ್ಲ ಖಾಸಗಿ ಶಾಲೆಗಳಿಗೂ ನೋಟಿಸ್ ಕಳಿಸಿ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸುವಂತೆ ಅಲ್ಲಿಯ ಮುಖ್ಯೋಪಾಧ್ಯಾಯರಿಗೆ ತಿಳಿಸಬೇಕು. ಒಂದು ವೇಳೆ ಕನ್ನಡ ನಾಮಫಲಕ ಅಳವಡಿಸದಿದ್ದರೆ ಖಾಸಗಿ ಶಾಲೆಗೆ ತೆರಳಿ ನಾಮಫಲಕಗಳಿಗೆ ಕಪ್ಪುಮಸಿ ಬಳಿದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಮುಂದೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ತಾಲೂಕು ಅಧ್ಯಕ್ಷ ಚಂದ್ರಪ್ಪ ಬಣಕಾರ ಮಾತನಾಡಿದರು. ಸಂಘಟನೆಯ ರಾಜ್ಯಾಧ್ಯಕ್ಷ ನಿತ್ಯಾನಂದ ಕುಂದಾಪುರ, ರಾಜ್ಯ ಸಂಚಾಲಕ ಮಲ್ಲಿಕಾರ್ಜುನ ಸಾವಕ್ಕಳವರ, ಪರಶುರಾಮ ಕುರುವತ್ತಿ, ಬಾಷ ಹಂಪಪಟ್ಟಣ, ಗೋಪಿ ಕುಂದಾಪುರ, ಮೃತುಂಜಯ ಕರಿಯಜ್ಜಿ, ಆನಂದ ಲಮಾಣಿ, ಮರಡೆಪ್ಪ ಚಳಗೇರಿ, ರೇವಣಸಿದ್ದಯ್ಯ ಸಣ್ಣಸಂಗಾಪುರ, ಹನುಮಂತ ನೇಕಾರ ಮತ್ತಿತರರಿದ್ದರು.ಮಂತ್ರಿಗಿರಿ ನೀಡುವಂತೆ ಸುರ್ಜೇವಾಲಾರನ್ನು ಕೇಳುವೆ: ರುದ್ರಪ್ಪ ಲಮಾಣಿ

ಹಾವೇರಿ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನನಗೆ ಜು. 8ರಂದು ಭೇಟಿಗೆ ಸಮಯ ನೀಡಿದಾರೆ. ಭೇಟಿಯಾದ ನಂತರ ಏನೆಂದು ಗೊತ್ತಾಗಲಿದೆ. ಸರ್ಕಾರದ ಸಾಧನೆ, ಸಂಘಟನೆ ಬಗ್ಗೆ ಚರ್ಚೆ ಮಾಡಬಹುದು. ಸಚಿವ ಸ್ಥಾನ ನೀಡುವಂತೆ ಕೇಳುತ್ತೇನೆ ಎಂದು ವಿಧಾನಸಭೆ ಉಪಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ತಿಳಿಸಿದರು.ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನಸಭಾ ಉಪಾಧ್ಯಕ್ಷರಾದ ಮೇಲೆ ನಾನು ಕೇಳಿದ ಅನುದಾನ ಕೊಟ್ಟಿದ್ದಾರೆ. 100ಕ್ಕೆ 100ರಷ್ಟು ಕೊಡುವುದು ಆ ದೇವರಿಂದಲೂ ಸಾಧ್ಯವಿಲ್ಲ ಎಂದರು. ನನಗೆ ಸಚಿವ ಸ್ಥಾನ ಕೊಡುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಯಾರಿಗೆ ಕೊಡಬೇಕು, ಏನು ಕೊಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ. ಸಚಿವ ಸ್ಥಾನ ಕೊಟ್ಟರೆ ಯಾರು ಬೇಡ ಅಂತಾರೆ? ಶಾಸಕರಾದವರಿಗೆ ಸಚಿವರಾಗುವ ಆಸೆ ಇರುತ್ತೆ, ಕೊಟ್ಟರೆ ಯಾರೂ ಬೇಡ ಅನ್ನಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ. ಸಚಿವ ಸ್ಥಾನ ಕೊಡುವುದಾಗಿ ಸುರ್ಜೇವಾಲಾ ಹಿಂದೆಯೂ ಹೇಳಿದ್ದರು. ಅವರನ್ನು ಭೇಟಿಯಾದಾಗ ಸಚಿವ ಸ್ಥಾನ ಕೇಳುತ್ತೇನೆ. ಕೇಳುವುದಕ್ಕೆ ಏನು ರೊಕ್ಕ ಕೊಡಬೇಕಾ? ನಮ್ಮ ಡಿಮ್ಯಾಂಡ್ ಇದೆ. ಕೊಡಿ ಎಂದು ಕೇಳುತ್ತೇನೆ. ಕೊಡುವುದು ಬಿಡುವುದು ಅವರಿಗೆ ಬಿಟ್ಟಿದ್ದು ಎಂದು ಲಮಾಣಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''