ರಸ್ತೆ ಗುಂಡಿಗಳ ದುರಸ್ತಿ ಮಾಡಲು ಆಗ್ರಹ: ರಮೇಶ್ ಮಾನೆ

KannadaprabhaNewsNetwork |  
Published : Oct 25, 2025, 01:00 AM IST
24 HRR. 02ಹರಿಹರದ ರಸ್ತೆಗಳೆಲ್ಲ ಗುಂಡಿಮಯ ವಾಗಿದ್ದು,  ದುರಸ್ತಿ ಮಾಡಿಸುವಂತೆ ಒತ್ತಾಯಿಸಿ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ರಮೇಶ್ ಮಾನೆ ಸುದ್ದಿಗೊಷ್ಠಿಯಲ್ಲಿ ತಿಳಿಸಿದರು. | Kannada Prabha

ಸಾರಾಂಶ

ನಗರದ ರಸ್ತೆಗಳೆಲ್ಲ ಗುಂಡಿಮಯವಾಗಿದ್ದು, ಕೂಡಲೇ ಅವುಗಳನ್ನು ದುರಸ್ತಿ ಮಾಡಿಸುವಂತೆ ಒತ್ತಾಯಿಸಿ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆಯಿಂದ ಅ.28ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ತಾಲೂಕು ಅಧ್ಯಕ್ಷ ರಮೇಶ್ ಮಾನೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹರಿಹರ

ನಗರದ ರಸ್ತೆಗಳೆಲ್ಲ ಗುಂಡಿಮಯವಾಗಿದ್ದು, ಕೂಡಲೇ ಅವುಗಳನ್ನು ದುರಸ್ತಿ ಮಾಡಿಸುವಂತೆ ಒತ್ತಾಯಿಸಿ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆಯಿಂದ ಅ.28ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ತಾಲೂಕು ಅಧ್ಯಕ್ಷ ರಮೇಶ್ ಮಾನೆ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಆಟೋ ಮಾಲೀಕರ, ಚಾಲಕರ ಸಂಘದ ವತಿಯಿಂದ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ನಗರದ 31 ವಾರ್ಡ್‌ಗಳಲ್ಲಿ ರಸ್ತೆಗಳು ಗುಂಡಿಮಯವಾಗಿ ಹಾಳಾಗಿದ್ದು ನಗರಸಭೆಯಿಂದ ಕೂಡಲೇ ರಸ್ತೆಗಳನ್ನು ದುರಸ್ತಿ ಮಾಡುವಂತೆ ಆಗ್ರಹಿಸಿದರು.

ನಗರದ ರಸ್ತೆಗಳಷ್ಟೇ ಅಲ್ಲದೆ ನಗರದ ಮಧ್ಯ ಭಾಗದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ರಾಜ್ಯ ಹೆದ್ದಾರಿಗಳು ಗುಂಡಿಮಯವಾಗಿದ್ದು, ಅವುಗಳನ್ನು ದುರಸ್ತಿ ಮಾಡುವಂತೆ ಸಂಬಂಧಪಟ್ಟ ಇಲಾಖೆಗೆ ಅದೇ ದಿನ ಒತ್ತಾಯಿಸಲಿದ್ದೇವೆ. ಈ ಪ್ರತಿಭಟನೆಗೆ ಆಟೋ ಮಾಲೀಕರ,ಚಾಲಕರ ಸಂಘ ಸೇರಿದಂತೆ ಸಾರ್ವಜನಿಕರು, ಕೆಲವು ಸಂಘ ಸಂಸ್ಥೆಗಳು ಕೈಜೋಡಿಸಲು ಒಪ್ಪಿರುವುದಾಗಿ ತಿಳಿಸಿದರು.

ಆಟೋ ಮಾಲೀಕರ ಚಾಲಕರ ಸಂಘದ ಗೌರವಾಧ್ಯಕ್ಷ ಸಿದ್ದಲಿಂಗ ಸ್ವಾಮಿ ಮಾತನಾಡಿ, ಹಲವಾರು ವರ್ಷಗಳಿಂದ ಹರಿಹರದ ರಸ್ತೆಗಳ ಸಮಸ್ಯೆ ಇದ್ದು, ನಮ್ಮ ಸಂಘದಿಂದ ಅನೇಕ ಹೋರಾಟಗಳನ್ನು ಮಾಡಿದ್ದೇವೆ. ಹೋರಾಟ ಮಾಡಿದ ಸಂದರ್ಭದಲ್ಲಿ ಕೆಲವೊಂದು ರಸ್ತೆಗಳನ್ನು ದುರಸ್ತಿ ಮಾಡಿದಂತೆ ಮಾಡಿ ಮತ್ತೆ ಸುಮ್ಮನಾಗುವ ನಗರಸಭೆಯನ್ನು ಎಚ್ಚರಿಸುವ ಕೆಲಸವಾಗಬೇಕಾಗಿದೆ ಎಂದರು.

ಪ್ರತಿದಿನ ಆಟೋದಲ್ಲಿ ಶಾಲಾ ಮಕ್ಕಳನ್ನು, ವಯೋ ವೃದ್ಧರನ್ನು, ಗರ್ಭಿಣಿಯರನ್ನು ಕರೆದುಕೊಂಡು ಹೋಗುವ ಸಂದರ್ಭದಲ್ಲಿ ರಸ್ತೆಯಲ್ಲಿನ ಗುಂಡಿಗಳ ಪರಿಣಾಮವಾಗಿ ಪ್ರಯಾಣಿಕರಿಗೆ ತುಂಬಾ ತೊಂದರೆ ಯಾಗುತ್ತಿದೆ ಆಟೋ ಮಾಲೀಕರಿಗೂ ಚಾಲಕರಿಗೂ ಸಹ ಹಿಂಸೆಯಾಗುತ್ತಿದೆ ಇದರಿಂದ ಪರ ಊರಿನಿಂದ ಬರುವ ಕೆಲವರು ಹರಿಹರದ ಬಗ್ಗೆ ಅಸಹ್ಯ ಪಟ್ಟುಕೊಳ್ಳುವಂತಾಗಿದೆ. ಇದನ್ನು ಗಮನಿಸಿ ನಗರ ಸಭೆಯವರು ಕೂಡಲೇ ರಸ್ತೆಗಳನ್ನು ಸರಿಪಡಿಸುವ ಕೆಲಸಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಕರವೇ ನಗರ ಘಟಕದ ಅಧ್ಯಕ್ಷ ಪ್ರೀತಂ ಬಾಬು ಮಾತನಾಡಿ, ಮಂಗಳವಾರ ನಡೆಯಲಿರುವ ಪ್ರತಿಭಟನಾ ಮೆರವಣಿಗೆ ನಗರದ ಫಕೀರ ಸ್ವಾಮಿ ಮಠದಿಂದ ಆರಂಭವಾಗಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಮೂಲಕ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ, ಮಹಾತ್ಮ ಗಾಂಧಿ ವೃತದಲ್ಲಿ ಘೋಷಣೆಗಳನ್ನು ಕೂಗಿ ನಂತರ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಆಟೋ ಮಾಲೀಕರ ಚಾಲಕರ ಸಂಘದ ಕಾರ್ಯದರ್ಶಿ ಎಸ್ ಕೇಶವ, ಪಿ.ಎಸ್ ಹನುಮಂತಪ್ಪ, ಕರವೇ ಉಪಾಧ್ಯಕ್ಷ ಅಲಿ ಅಕ್ಬರ್, ವಿನಾಯಕ ಮುಗ್ದುಂ ಮುಂತಾದವರು ಹಾಜರಿದ್ದರು.

PREV

Recommended Stories

ಸ್ವಸ್ಥ ಶರದ್ ಋತು ಪ್ರಕೃತಿಯ ಲಯದಲ್ಲಿ ಸ್ವಸ್ಥತೆ ! ಶರದ್ ಋತುವಿನ ಆಹಾರ ಮತ್ತು ದಿನಚರ್ಯೆ
ನಟ ದರ್ಶನ್‌ಗೆ ಜೈಲಿನಲ್ಲಿ ಹರಿದ ಚಾದರ : ವಕೀಲರ ವಾದ