-ಅಪರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗೆ ಮನವಿಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಮತ್ತು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ.ವಿಕ್ರಮ್ ಅಮಟೆ ಅವರನ್ನು ಭೇಟಿ ಮಾಡಿದ ರೋಟರಿ ಕಾಫಿ ಲ್ಯಾಂಡ್ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.
ಕೊರೋನಾ ಮಹಾಮಾರಿಯಿಂದ ಕಳೆದ ಮೂರು ಬಾರಿ ದೇಶ ಮತ್ತು ರಾಜ್ಯದಲ್ಲಿ ಲಕ್ಷಾಂತರ ಜನ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲೂ ಸಹಸ್ರಾರು ಸಂಖ್ಯೆ ಸಾವು ನೋವುಗಳಾಗಿ, ಅನೇಕರು ಹೆತ್ತವರನ್ನು ಕಳೆದುಕೊಂಡು ಅನಾಥರಾಗಿದ್ದಾರೆ ಎಂದರು.ಕೊರೋನಾ ಮತ್ತೊಮ್ಮೆ ಕೇರಳದಲ್ಲಿ ಕಾಣಿಸಿಕೊಂಡಿದ್ದು, ಇದು ವ್ಯಾಪಕವಾಗಿ ಸಾವು ನೋವು ಗಳಾಗುವ ಮುನ್ನ ಜಿಲ್ಲಾಡಳಿತ ಎಚ್ಚೆತ್ತು ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಜಿಲ್ಲೆಗೆ ಆಗಮಿಸುವ ವಿಶೇಷವಾಗಿ ಕೇರಳದ ಪ್ರವಾಸಿಗರನ್ನು ತಡೆಗಟ್ಟಬೇಕು ಎಂದು ತಿಳಿಸಿದರು.
ಜಿಲ್ಲೆಯ ರೆಸಾರ್ಟ್, ಹೋಂ ಸ್ಟೇ ಮತ್ತು ಲಾಡ್ಜ್ಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ ನೀಡಿ, ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಬೇಕು ಎಂದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸಿಗರನ್ನು ನಿರ್ಬಂಧಿಸುವಂತೆ ಆಗ್ರಹಿಸಿ ರೋಟರಿ ಕಾಫಿ ಲ್ಯಾಂಡ್ ಪದಾಧಿಕಾರಿಗಳು ಎಸ್ಪಿ ಡಾ. ವಿಕ್ರಂ ಅಮಟೆ ಅವರಿಗೆ ಮನವಿ ಸಲ್ಲಿಸಿದರು.